ಗಣೇಶೋತ್ಸವದಿಂದ ನಾಡು ಕಟ್ಟುವ ಕೆಲಸ: ದಿನೇಶ್ ಗುಂಡೂರಾವ್ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಗಣೇಶೋತ್ಸವದಿಂದ ನಾಡು ಕಟ್ಟುವ ಕೆಲಸ: ದಿನೇಶ್ ಗುಂಡೂರಾವ್

Share This
ಮಂಗಳೂರು: ಗಣೇಶೋತ್ಸವವು ವಿವಿಧ ಜಾತಿ-ಧರ್ಮಗಳ ನಡುವೆ ಸೌಹಾರ್ದವನ್ನು ಬೆಸೆಯುವ ಹಬ್ಬವಾಗಿದ್ದು ಮೂಲಕ ನಾವು ನಾಡು ಕಟ್ಟುವ ಕೆಲಸ ಮಾಡಬೇಕಾಗಿದೆ ಎಂದು ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು.



ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಓಂಕಾರನಗರದಲ್ಲಿ ನಡೆಯುತ್ತಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರುಬಂಟ ಸಮಾಜದವರು ಕ್ರಿಯಾಶೀಲರುಸೃಜನ ಶೀಲರಾಗಿದ್ದು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆಕೆಲಸಹೆಸರು ಮಾಡಿದ್ದಾರೆನಾಡಿನ ಆರ್ಥಿಕರಾಜಕೀಯಸಾಮಾಜಿಕ ಬೆಳವಣಿಗೆಯಲ್ಲಿ ಯಶಸ್ವಿಯಾಗಿ ಭಾಗಿಯಾಗಿದ್ದಾರೆ. 100 ವರ್ಷಗಳ ಹಿಂದೆಯೇ ಸಮಾಜವನ್ನು ಬಲಿಷ್ಠವಾಗಿ ಕಟ್ಟುವ ಕೆಲಸದಲ್ಲಿ ಅವರು ತೊಡಗಿದ್ದಾರೆಅಲ್ಲದೆ ಹಾಸ್ಟೆಲುಶಾಲೆಗಳನ್ನು ನಿರ್ಮಿಸುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ ಎಂದು ಸಚಿವ ದಿನೇಶ್ ಗೂಂಡೂರಾವ್ ತಿಳಿಸಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಮಾತನಾಡಿಭವಿಷ್ಯದ ಭಾರತವು ಸಾಮರಸ್ಯದ ಭಾರತವಾಗಿ ರೂಪುಗೊಳ್ಳಲಿ ಎಂದು ಹಾರೈಸಿದರುಮಂಗಳೂರಿನ ಶಾಸಕ ಜೆ.ಆರ್.ಲೋಬೋ ಅವರು ಮಾತನಾಡಿ ಗಣೇಶೋತ್ಸವವು ಜಾತಿ-ಧರ್ಮದ ಎಲ್ಲೆ ಮೀರಿ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯಕ್ರಮ ಎಂದರು.

ಮುಖ್ಯ ಅತಿಥಿಗಳಾಗಿ ಡಾ|ಫಾ|ರವಿ ಸಂತೋಷ್ ಕಾಮತ್ ಎಸ್.ಜೆಖ್ಯಾತ ವೈದ್ಯ ಡಾ|ಹಂಸರಾಜ್ ಆಳ್ವಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಎಸ್.ಎಲ್.ಭೋಜೆಗೌಡ ಪಾಲ್ಗೊಂಡು ಶುಭ ಹಾರೈಸಿದರು.  ವಿವಿಧ ಕ್ಷೇತ್ರಗಳ ಸಾಧಕರಾದ ಮೋಹನ್ ರಾವ್ಶಂಕರ್ ಮೋಹನ್ ಪೂಂಜಕರುಣಾಕರನ್ಸೀತಾರಾಮ ಜಾಣು ಶೆಟ್ಟಿಕೃಷ್ಣ ಕುಮಾರ್ ಪೂಂಜ ಹಾಗೂ ದೀಕ್ಷಾ ಪೂಂಜ ಅವರನ್ನು ಸನ್ಮಾನಿಸಿಗೌರವಿಸಲಾಯಿತು.

ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ಕೋಶಾಧಿಕಾರಿ ಕೃಷ್ಣರಾಜ ಸುಲಾಯಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿಎನ್.ರವಿರಾಜ ಶೆಟ್ಟಿಬಂಟರ ಮಾತೃ ಸಂಘದ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ್ ಶೆಟ್ಟಿಕಾರ್ಯದರ್ಶಿ ಮೇಘನಾಥ ಶೆಟ್ಟಿ  ಶಶಿರಾಜ್ ಶೆಟ್ಟಿ ಕೊಳಂಬೆ ಮತ್ತಿತರರು ಉಪಸ್ಥಿತರಿದ್ದರು.

ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನದ ಆಡಳಿತ ಟ್ರಸ್ಟಿ ಅಜಿತ್ ಕುಮಾರ್ ರೈ ಮಾಲಾಡಿ ಅವರು ಸ್ವಾಗತಿಸಿಪ್ರಸ್ತಾವನೆಗೈದರು.  ಪುರುಷೋತ್ತಮ ಭಂಡಾರಿ ಅಡ್ಯಾರು ಹಾಗೂ ವಿಜಯಭಾರತಿ ಶೆಟ್ಟಿ ಅವರು ಕಾರ್ಯಕ್ರಮ ನಿರ್ವಹಿಸಿದರು.  ಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ವಂದಿಸಿದರು.

Pages