ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Share This
BUNTS NEWS, ಮಂಗಳೂರು: ಜ್ಞಾನ ಹಾಗೂ ಸಮೃದ್ಧಿಯ ಸಂಕೇತನಾಗಿರುವ ಹಾಗೂ ನಮ್ಮೆಲ್ಲರ ಅಂತರಂಗದಲ್ಲಿ ನೆಲೆಗೊಳ್ಳುವ ದೇವರಾಗಿರುವ ಶ್ರೀ ಗಣೇಶನ ಆರಾಧನೆಯಿಂದ ಸಮಸ್ತ ಸಮಾಜಕ್ಕೆ ಒಳಿತಾಗುತ್ತದೆ ಎಂದು ..ಜಿಲ್ಲಾ ಅಪರ ಜಿಲ್ಲಾಧಿಕಾರಿ ಶ್ರೀಕುಮಾರ್ ಅವರು ಹೇಳಿದರು.
ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ಓಂಕಾರನಗರದಲ್ಲಿ ನಡೆಯುತ್ತಿರುವ  13ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ಮೊದಲ ದಿನ ನಡೆದ ಧಾರ್ಮಿಕ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಮಂಗಳೂರಿನ ಸಹಾಯಕ ಪೊಲೀಸ್ ಕಮಿಶನರ್ ಶಾಂತರಾಜು ಅವರು ಮಾತನಾಡಿ, ಪ್ರಸಿದ್ಧ ದೇವಾಲಯಗಳ ನಾಡಾಗಿರುವ ..ಜಿಲ್ಲೆ ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಇಡೀ ರಾಜ್ಯಕ್ಕೆ ಮೇಲ್ಪಂಕ್ತಿಯಾಗಿದೆ ಎಂದರು.
ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಾಯ್ ಕ್ಯಾಸ್ಟಲಿನೋ ಅವರು ಮಾತನಾಡಿ, ಶ್ರೀ ಗಣೇಶನು ತನ್ನ ವೈಶಿಷ್ಟ್ಯಪೂರ್ಣ ರೂಪದಿಂದಾಗಿ ಹಿಂದುವೇತರ ಧರ್ಮದವರಿಗೂ ಬಹಳ ಆಪ್ತನಾಗಿದ್ದಾನೆ ಎಂದು ಹೇಳಿದರು.

ವಿವಿಧ ಕ್ಷೇತ್ರಗಳ ಸಾಧಕರಾದ ಶಶಿಧರ ಅಡಪ, ಎಂ.ಪಿ.ನೊರೋನ್ಹ, ಗಂಗಾಧರ ಹೊಸಬೆಟ್ಟು, ಸಾಹುಲ್ ಹಮೀದ್, ವಿಜಯಲಕ್ಷ್ಮಿ ಶಿಬರೂರು, ನೇಹಾ ಶೆಟ್ಟಿ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಕರ್ತೆ ಅವರು ಮಾತನಾಡಿ, ..ಜಿಲ್ಲೆ ಸಾಮರಸ್ಯದ ನೆಲೆವೀಡು ಆಗಲಿ ಎಂದು ಶುಭಹಾರೈಸಿದರು.

ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಕೋಶಾಧಿಕಾರಿ ಕೃಷ್ಣರಾಜ ಸುಲಾಯ, ಟ್ರಸ್ಟಿಗಳಾದ ಶೆಡ್ಡೆ ಮಂಜುನಾಥ ಭಂಡಾರಿ, ಕೃಷ್ಣ ಪ್ರಸಾದ್ ರೈ, ಡಾ|ಆಶಾಜ್ಯೋತಿ ರೈಬೆಳ್ಳಿಬೆಟ್ಟು ಗುತ್ತು ಬಾಲಕೃಷ್ಣ ಶೆಟ್ಟಿ , ನಿಟ್ಟೆಗುತ್ತು ರವಿರಾಜ ಶೆಟ್ಟಿ, ಬಂಟರ ಮಾತೃ ಸಂಘದ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ್ ಶೆಟ್ಟಿ, ಕೋಶಾಧಿಕಾರಿ ಸಿಎ ಮನಮೋಹನ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಟಾನದ ಆಡಳಿತ ಟ್ರಸ್ಟಿ ಕೆ.ಅಜಿತ್ ಕುಮಾರ್ ರೈ ಮಾಲಾಡಿ ಅವರು ಸ್ವಾಗತಿಸಿ, ಪ್ರಸ್ತಾವನೆಗೈದರುಪುರುಶೋತ್ತಮ ಭಂಡಾರಿ ಅಡ್ಯಾರು ಅವರು ಕಾರ್ಯಕ್ರಮ ನಿರ್ವಹಿಸಿದರುಸಮಿತಿಯ ಪ್ರಧಾನ ಕಾರ್ಯದರ್ಶಿ ದಿವಾಕರ ಸಾಮಾನಿ ಚೇಳ್ಯಾರುಗುತ್ತು ವಂದಿಸಿದರು.


ವರದಿ: ಜಗನ್ನಾಥ ಶೆಟ್ಟಿ ಬಾಳ 
www.buntsnews.com

Pages