ಕಟೀಲು ದೇವಿಯ ಬಗ್ಗೆ ಅಶ್ಲೀಲ ನಿಂದನೆ: ಯಕ್ಷಧ್ರುವ ಪಟ್ಲ ಪೌಂಡೇಶನ್ ಖಂಡನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕಟೀಲು ದೇವಿಯ ಬಗ್ಗೆ ಅಶ್ಲೀಲ ನಿಂದನೆ: ಯಕ್ಷಧ್ರುವ ಪಟ್ಲ ಪೌಂಡೇಶನ್ ಖಂಡನೆ

Share This
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಹಾಗೂ ಅವಹೇಳನಕಾರಿ ಬರಹಗಳನ್ನು ಪ್ರಕಟಿಸಿ, ಅಶ್ಲೀಲವಾಗಿ ನಿಂದಿಸಿ ಕ್ಷೇತ್ರದ ಭಕ್ತರ ಧಾರ್ಮಿಕ ಭಾವನೆಗಳಿಗೆ ಘಾಸಿಯನ್ನುಂಟು ಮಾಡಿದ ಕಿಡಿಗೇಡಿಗಳ ಕೃತ್ಯವನ್ನು ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಖಂಡಿಸಿದೆ.
ಸರ್ವ ಧರ್ಮಿಯರ ಆರಾಧ್ಯ ದೇವತೆಯಾದ ಕಟೀಲಿನ ತಾಯಿಯ ಚಿತ್ರಗಳನ್ನು ಅಶ್ಲೀಲವಾಗಿ ಚಿತ್ರಿಸಿ, ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದರಿಂದ ಆಸ್ತಿಕ ಬಂಧುಗಳ ಭಾವನೆಗಳನ್ನು ಕೆರಳಿಸುವುದರೊಂದಿಗೆ ತೀವ್ರ ನೋವನ್ನುಂಟು ಮಾಡಿದೆ. ಇಂತಹ ದುಷ್ಕøತ್ಯಗಳಿಂದ ಸಮಾಜದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ.
ಇಂತಹ ಮನನೋಯಿಸುವ ಘಟನೆಗಳನ್ನು ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ತೀವ್ರವಾಗಿ ಖಂಡಿಸುತ್ತದೆ ಮಾತ್ರವಲ್ಲ ಘಟನೆಗೆ ಕಾರಣರಾದವರನ್ನು ಶೀಘ್ರವಾಗಿ ಬಂಧಿಸಿ ಮುಂದೆ ಇಂತಹ ಕುಕೃತ್ಯಗಳು ನಡೆಯದಂತೆ ಪೊಲೀಸ್ ಇಲಾಖೆ ದಿಟ್ಟ ಕ್ರಮ ಕೈಗೊಳ್ಳಬೇಕು ಎಂದು ಟ್ರಸ್ಟ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ ತಿಳಿಸಿದ್ದಾರೆ. ಟ್ರಸ್ಟ್ ಕಛೇರಿಯಲ್ಲಿ ನಡೆದ ಖಂಡನಾ ಸಭೆಯಲ್ಲಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಪದಾಧಿಕಾರಿಗಳಾದ ರಾಜೀವ ಪೂಜಾರಿ ಕೈಕಂಬ, ಸಿಎ ಸುದೇಶ್ ಕುಮಾರ್, ಕದ್ರಿ ನವನೀತ ಶೆಟ್ಟಿ, ಡಾ. ಮನು ಮೊದಲಾದವರು ಉಪಸ್ಥಿತರಿದ್ದರು.

Pages