ವರ್ಷ ಪೂರೈಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ : ಅಭಿಮಾನಿಗಳಿಗೆ ಪಟ್ಲ ಸತೀಶ್ ಶೆಟ್ಟಿ ಕೃತಜ್ಞತೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವರ್ಷ ಪೂರೈಸಿದ ಯಕ್ಷಧ್ರುವ ಪಟ್ಲ ಫೌಂಡೇಶನ್ : ಅಭಿಮಾನಿಗಳಿಗೆ ಪಟ್ಲ ಸತೀಶ್ ಶೆಟ್ಟಿ ಕೃತಜ್ಞತೆ

Share This
BUNTS NEWS,ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವರ್ಷ ಪೂರೈಸಿದ್ದು, ಸಂದರ್ಭದಲ್ಲಿ ಟ್ರಸ್ಟ್ ವಿಶ್ವದಾದ್ಯಂತ ಪ್ರಸಿದ್ಧಿಯಾಗಲು ಕಾರಣೀಕರ್ತರಾದ ಎಲ್ಲಾ ಯಕ್ಷ ಕಲಾಭಿಮಾನಿಗಳಿಗೆ, ವಿವಿಧ ಘಟಕದ ಪದಾಧಿಕಾರಿಗಳಿಗೆ, ಟ್ರಸ್ಟ್ ಕಾರ್ಯಕ್ರರ್ತರಿಗೆ ಹಾಗೂ ದಾನಿಗಳಿಗೆ ಟ್ರಸ್ಟ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಕೃತಜ್ಞತೆಯನ್ನು ಸಲ್ಲಿಸಿದರು.
ಎಂಪಾರ್ಮಾಲ್ನಲ್ಲಿರುವ ಯಕ್ಷಧ್ರುವ ಪಟ್ಲ  ಪೌಂಡೇಶನ್ ಟ್ರಸ್ಟ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಪಟ್ಲ ಸತೀಶ್ ಶೆಟ್ಟಿ ಮಾತನಾಡಿದರು. ಟ್ರಸ್ಟ್ ಕೈಗೊಂಡ ಯೋಜನೆಗಳನ್ನು ವಿವರಿಸಿದ ಅವರು ಟ್ರಸ್ಟ್ ಈಗ ಎಲ್ಲಾ ಕಡೆ ವಿಸ್ತಾರವಾಗಿ ಬೆಳೆಯುತ್ತಿದೆ. ಘಟಕಗಳ ರಚನೆಯಾಗುತ್ತಿದೆ. ಯಕ್ಷರಂಗದಲ್ಲಿ ತೀರಾ ಬಡತನದಲ್ಲಿರುವ ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರನ್ನು ಗುರುತಿಸಿ  ಅವರ ಬದುಕಿಗೆ ಟ್ರಸ್ಟ್ ಸಹಾಯಹಸ್ತ ನೀಡುವುದಾಗಿ ತಿಳಿಸಿದರು.

ಕಲಾವಿದರ ವಸತಿ ಯೋಜನೆಯ ಕಾರ್ಯ ಪ್ರಗತಿಯಲ್ಲಿದೆ. ಸೆ.25ರಂದು ದೆಹಲಿಯಲ್ಲಿ ಕರ್ನಾಟಕ ಸಂಘದ ಸಭಾಂಗಣದಲ್ಲಿ ಯಕ್ಷಧ್ರುವ ಪಟ್ಲ  ಪೌಂಡೇಶನ್ ಟ್ರಸ್ಟ್ ದೆಹಲಿ ಘಟಕ ಉದ್ಘಾಟನೆಗೊಳ್ಳಲಿದೆ ಎಂದು ಸತೀಶ ಶೆಟ್ಟಿ ತಿಳಿಸಿದರು.

ಸಭೆಯಲ್ಲಿ ಗೌರವಾಧ್ಯಕ್ಷ ಕಲ್ಲಾಡಿ ದೇವಿಪ್ರಸಾದ್ಶೆಟ್ಟಿ, ಉಪಾಧ್ಯಕ್ಷ ಫ್ರೊ. ಮನುರಾವ್, ಕೋಶಾಧಿಕಾರಿ ಸಿ.. ಸುದೇಶ್ ರೈ, ಜತೆ ಕಾರ್ಯದರ್ಶಿ ರಾಜೀವ ಕೈಕಂಬ, ಉದಯಾನಂದ ಶೆಟ್ಟಿ ಕುಂದಾಪುರ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಜಗನ್ನಾಥ ಶೆಟ್ಟಿ ಬಾಳ, ರವಿಚಂದ್ರಶೆಟ್ಟಿ, ಸುಧೀರ್ ಭಟ್ ಎಕ್ಕಾರ್, ಗಿರೀಶ್ ಶೆಟ್ಟಿ ಕಟೀಲ್, ಜಗದೀಶ್ ಶೆಟ್ಟಿ ಕಾರ್ಸ್ಟ್ರೀಟ್, ಸತೀಶ್ ಶೆಟ್ಟಿ ಎಕ್ಕಾರ್, ಕೃಷ್ಣ ಕಾರ್ಕಳ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಪುರುಷೋತ್ತಮ ಕೆ. ಭಂಡಾರಿ ಸ್ವಾಗತಿಸಿದರು. ನಿತೇಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
-------------------------------------------------------------------------------------------------------------------------

Pages