ಮಾಲಾಡಿ ಅಜಿತ್ ಕುಮಾರ್ ರೈ ಬಂಟರ ಮಾತೃಸಂಘದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಾಲಾಡಿ ಅಜಿತ್ ಕುಮಾರ್ ರೈ ಬಂಟರ ಮಾತೃಸಂಘದ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

Share This
BUNTS NEWS, ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ  ಸ್ಥಾನಕ್ಕೆ ಅಜಿತ್ ಕುಮಾರ್ ರೈ ಮಾಲಾಡಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

2016-2019ನೇ ಸಾಲಿಗೆ ಬಂಟ ಮಾತೃಸಂಘದ  ಅಧ್ಯಕ್ಷರು ಮತ್ತು ಕೇಂದ್ರ ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ನಡೆಯುವ ಬಗ್ಗೆ ನೋಟಿಸು ನೀಡಲಾಗಿತ್ತು. ಅಲ್ಲದೇ ನಾಮಪತ್ರ ಸಲ್ಲಿಸಲು ದಿನಾಂಕವನ್ನು ನಿಗದಿ ಪಡಿಸಲಾಗಿತ್ತು. ಆದರೆ ಅಧ್ಯಕ್ಷ ಸ್ಥಾನಕ್ಕೆ ಅಜಿತ್ ಕುಮಾರ್ ರೈ ಮಾಲಾಡಿ ಅವರನ್ನು ಬಿಟ್ಟು ಮತ್ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಮಾಲಾಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮುಂದಿನ 2016-2019 ಸಾಲಿನಲ್ಲಿ  ಬಂಟರ ಮಾತೃಸಂಘದ ನೂತನ ಸಭಾಭವನ, ಇನ್ನಿತರ ಅಭಿವೃದ್ಧಿ ಕಾರ್ಯಗಳು ಅಜಿತ್ ಕುಮಾರ್ ರೈ ಮಾಲಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಪ್ರತಿಯೊಂದು ಕಾರ್ಯವು ಯಶಸ್ವಿಯಾಗಲೀ ಎಂದು ಬಂಟ್ಸ್ ನ್ಯೂಸ್.ಕಾಂ ಹಾರೈಸುತ್ತಿದೆ. © www.buntsnews.com
-----------------------------------------------------------------------------------------------------------------------

Pages