ಬಂಟ್ಸ್ ನ್ಯೂಸ್, ಮಂಗಳೂರು:
ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ
ಆಡಳಿತ ಮೊಕ್ತೇಸರ ಕೊಡೆತ್ತೂರು ಡಾ.ರವೀಂದ್ರನಾಥ ಪೂಂಜಾ
(74) ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. www.buntsnews.com
ವೃತ್ತಿಯಲ್ಲಿ
ವೈದ್ಯರಾಗಿರುವ ಡಾ.ರವೀಂದ್ರನಾಥ ಪೂಂಜಾ
ಅವರು ಕಳೆದ 6 ತಿಂಗಳ ಹಿಂದಷ್ಟೇ
ಶ್ರೀ ಕ್ಷೇತ್ರ ಕಟೀಲಿನ ಅನುವಂಶಿಕ
ಆಡಳಿತ ಮೊಕ್ತೇಸರಾಗಿ ಅಧಿಕಾರ ವಹಿಸಿಕೊಂಡಿದ್ದರು. www.buntsnews.com
ಶ್ರೀ ಕ್ಷೇತ್ರ ಕಟೀಲು
ದೇವಳದ ಆಡಳಿತದಲ್ಲಿ ಕೊಡೆತ್ತೂರು ಗುತ್ತಿನವರಿಗೂ ಹಿಂದಿನಿಂದಲೂ ಅಧಿಕಾರದ ಗೌರವವಿದ್ದು, 1888ರಿಂದ
1998ರವರೆಗೂ ಕೊಡೆತ್ತೂರು ಗುತ್ತಿನ ಮನೆತನಕ್ಕೆ ಆಡಳಿತ
ಮೊಕ್ತೇಸರಿಕೆ ನೋಡಿಕೊಂಡಿತ್ತು.
ಕಾರಣಾಂತರದಿಂದ ಕಳೆದ 16 ವರ್ಷದ ಹಿಂದೆ
ಈ ಅಧಿಕಾರದ ವಿವಾದವು
ನ್ಯಾಯಾಲಯದ ಮೆಟ್ಟಿಲು ಹತ್ತಿದ್ದರಿಂದ ನಿರಂತರವಾಗಿ ನ್ಯಾಯಾಲಯದಲ್ಲಿ ವಾದ ಪ್ರತಿವಾದವನ್ನು ಆಲಿಸಿ
ಉಚ್ಚ ನ್ಯಾಯಾಲಯವು ಮೇ 3ರಂದು ತೀರ್ಪು
ನೀಡಿದ್ದರಿಂದ ಕರ್ನಾಟಕ ಸರ್ಕಾರದ ಹಿಂದೂ
ಧಾರ್ಮಿಕ ಸಂಸ್ಥೆಗಳು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು
ನೀಡಿದ ಆದೇಶದಂತೆ ಕೊಡೆತ್ತೂರು ಗುತ್ತಿನ ಹಿರಿಯರಾದ ಡಾ.ಕೆ.ರವೀಂದ್ರನಾಥ ಪೂಂಜಾರವರು
ಅಧಿಕಾರವನ್ನು ಪಡೆದಿದ್ದರು. www.buntsnews.com