ಬಂಟ ಸಮಾಜ ಎಲ್ಲರನ್ನೂ ಪ್ರೀತಿ ಗೌರವದಿಂದ ಕಾಣುತ್ತದೆ: ವಿಜಯಕುಮಾರ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟ ಸಮಾಜ ಎಲ್ಲರನ್ನೂ ಪ್ರೀತಿ ಗೌರವದಿಂದ ಕಾಣುತ್ತದೆ: ವಿಜಯಕುಮಾರ್ ಶೆಟ್ಟಿ

Share This
ಬಂಟ್ಸ್ ನ್ಯೂಸ್, ಸುರತ್ಕಲ್: ಬಂಟ ಸಮಾಜ ಎಲ್ಲರನ್ನೂ ಪ್ರೀತಿ ಮಾಡುವ ಮತ್ತು ಮರ್ಯಾದೆ ನೀಡಿ ಗೌರವಿಸುವ ಸಮಾಜವಾಗಿದೆ ಎಂದು ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ ನುಡಿದರು.
ಅವರು ಸುರತ್ಕಲ್ ಬಂಟರ ಭವನದಲ್ಲಿ ನಡೆದ ಸುರತ್ಕಲ್ ಬಂಟರ ಸಂಘದ ಮಹಾಸಭೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಬಂಟ ಸಮಾಜದಲ್ಲಿ ಒಗ್ಗಟ್ಟು ಸೌಹಾರ್ದತೆ ಮುಖ್ಯ ಅದನ್ನು ಉಳಿಸಿ ಬೆಳೆಸಿ ಬೇರೆ ಸಮಾಜವನ್ನು ಗೌರವಿಸುವ ಮತ್ತು ಒಗ್ಗಟ್ಟನ್ನು ಬೆಳೆಸುವ ಪ್ರಕ್ರಿಯೆ ಮುಂದುವರಿಯಲಿ ಎಂದು ಶುಭ ಹಾರೈಸಿದರು.

ಮುಂಬಾಯಿ ವಿ.ಕೆ.ಗ್ರೂಪ್ ಆಫ್ ಕಂಪೆನೀಸ್ ಸಂಸ್ಥೆಯ ಚೆಯರ್ಮೆನ್ ಕರುಣಾಕರ ಎಂ.ಶೆಟ್ಟಿ ಮದ್ಯಗುತ್ತು ಮಾತನಾಡಿ ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ ವಿಚಾರದ ಕುರಿತು ತಿಳುವಳಿಕೆ ನೀಡುವ ಕೆಲಸ ನಡೆಯಬೇಕು. ಎಲ್ಲಾ ಮಕ್ಕಳು ವಿದ್ಯಾಭ್ಯಾಸ ಪಡೆದು ಉನ್ನತ ಮಟ್ಟಕ್ಕೆ ಏರಿದಾಗ ಸಮಾಜದಲ್ಲಿ ಕಷ್ಟ ಕಾರ್ಪಣ್ಯಗಳು ದೂರವಾಗುತ್ತವೆ ಎಂದರು.

ಉದ್ಯಮಿ ರಮಾನಾಥ ಶೆಟ್ಟಿ ಕೃಷ್ಣಾಪುರ, ಪಿಡಬ್ಲ್ಯುಡಿ ಅಸಿಸ್ಟೆಂಟ್ ಇಂಜಿನಿಯರ್ ರಾಜೇಶ್ ರೈ, ಬಂಟರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಮಕ್ಕಳಿಗೆ ವಿದ್ಯಾರ್ಥಿವೇತನ ವಿತರಣೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಅಭಿನಂದನೆ ಹಾಗೂ ವಿಧವೆಯವರಿಗೆ, ಭಿನ್ನ ಸಾಮಥ್ಯದವರಿಗೆ, ವಿಕಲ ಚೇತನರಿಗೆ ಸಹಾಯ ಹಸ್ತ ನೀಡಲಾಯಿತು.

ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಉಲ್ಲಾಸ್ ಆರ್.ಶೆಟ್ಟಿ ಉಪಾಧ್ಯಕ್ಷ ಸುಧಾಕರ ಪೂಂಜ, ಕಾರ್ಯದರ್ಶಿ ಸೀತಾರಾಮ ರೈ, ಕೋಶಾಧಿಕಾರಿ ಪ್ರವೀಣ್ ಪಿ.ಶೆಟ್ಟಿ ಜತೆ ಕಾರ್ಯದರ್ಶಿ ಜಯರಾಮ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯೆಕ್ಷೆ ಚಂದ್ರಕಲಾ ಶೆಟ್ಟಿ ಉಪಸ್ಥಿತರಿದ್ದರು. ರಾಜೇಶ್ವರಿ ಡಿ.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಲೀಲಾಧರ್ ಶೆಟ್ಟಿ ಮತ್ತು ಚಿತ್ರ್ರಾ ಜೆ.ಶೆಟ್ಟಿಯವರ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

Pages