ಪಟ್ಲ ಮಹಾಬಲ ಶೆಟ್ಟಿಯವರ ಶ್ರೀ ಸುಬ್ರಹ್ಮಣೇಶ್ವರ ಕಲಾ ಸಂಘದ ಕಾರ್ಯ ಶ್ಲಾಘನೀಯವಾದುದು: ಒಡಿಯೂರು ಶ್ರೀ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪಟ್ಲ ಮಹಾಬಲ ಶೆಟ್ಟಿಯವರ ಶ್ರೀ ಸುಬ್ರಹ್ಮಣೇಶ್ವರ ಕಲಾ ಸಂಘದ ಕಾರ್ಯ ಶ್ಲಾಘನೀಯವಾದುದು: ಒಡಿಯೂರು ಶ್ರೀ

Share This
ಮಂಗಳೂರು: ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದ ಶ್ರೀ ಸುಬ್ರಹ್ಮಣ್ಯೇಶ್ವರ ಕಲಾ ಸಂಘವು ಅನೇಕ ಕಲಾವಿದರನ್ನು ಯಕ್ಷಗಾನ ಕ್ಷೇತ್ರಕ್ಕೆ ಕೊಡುಗೆಯಾಗಿ ನೀಡಿದಂತಹ ಸಂಸ್ಥೆ ಕ್ಷೇತ್ರವಾಗಿದೆ. ಪಟ್ಲ ಗುತ್ತು ಮಹಾಬಲ ಶೆಟ್ಟಿಯವರಿಂದ ಸ್ಥಾಪಿಸಲ್ಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಕಲಾ ಸಂಘ  ಹಲವು ವರ್ಷಗಳಿಂದಲೂ ನಿರಂತರ ಒಂದು ತಿಂಗಳ ಪರ್ಯಂತ ಯಕ್ಷಗಾನ, ಭಜನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಒಡಿಯೂರು ಶ್ರೀಗಳು ಹೇಳಿದರು.
ಅವರು ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ಕಲಾ ಸಂಘ (ರಿ) ವಗೆನಾಡು ಇದರ 20ನೇ ವರ್ಷದ ಯಕ್ಷಸಂಭ್ರಮದ ಸಮಾರೋಪ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡುತ್ತ, ಇಂದಿಗೆ ಇಪ್ಪತ್ತು ವರ್ಷ ಸಂಸ್ಥೆಗೆ ತುಂಬಿದ್ದು ಕಲಾವಿದರನ್ನು ಬೆಳೆಸಿ ಪೋಷಿಸುವುದರ ಜತೆಗೆ ಸುಮಾರು 100ಕ್ಕೂ ಅಧಿಕ ಕಲಾವಿದರನ್ನೂ ಗುರುತಿಸಿ ಗೌರವ ನಿಧಿಯೊಂದಿಗೆ ಸಮ್ಮಾನಿಸಿದೆ ಎಂದರು.

ಸ್ವಗ್ರಾಮದಲ್ಲಿರುವ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯ, ಗ್ರಾಮದಲ್ಲಿರುವ ಎಲ್ಲಾ ಸರಕಾರಿ ಹಾಗೂ ಅನುದಾನಿತ ಶಾಲಾ ಪ್ರತಿಭಾವಂತ ಬಡ ಮಕ್ಕಳಿಗೆ ವಿದ್ಯಾರ್ಥಿವೇತನ ಹೀಗೆ ಅನೇಕ ಜನಪರ ಕಾರ್ಯಗಳನ್ನು ಮಾಡುತ್ತಾ ಬಂದ ಸಂಸ್ಥೆಯು ಇನ್ನಷ್ಟು ಉಜ್ವಲ ಮಟ್ಟಕ್ಕೆ ಬೆಳೆಯಲಿ ಎಂದು ಶ್ರೀಗಳು ಹಾರೈಸಿದರು.

ಸಂಸ್ಥೆಯ ಅಧ್ಯಕ್ಷರಾದ ಪಟ್ಲಗುತ್ತು ಮಹಾಬಲ ಶೆಟ್ಟಿಯವರ ಜತೆಗೆ ದೇವಸ್ಥಾನದ ಆಡಳಿತ ಮೊಕ್ತೇಸರ ತಿರುಮಲೇಶ್ವರ ಭಟ್ ಉಪಸ್ಥಿತರಿದ್ದರು. ಪಟ್ಲ ಸತೀಶ್ ಶೆಟ್ಟಿ ವಂದಿಸಿದರು.

Pages