ಬಂಟರ ಯಾನೆ ನಾಡವರ ಮಾತೃ ಸಂಘದಿಂದ ವಿಶೇಷ ಚೇತನರಿಗೆ ಸಹಾಯ ಹಸ್ತ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಯಾನೆ ನಾಡವರ ಮಾತೃ ಸಂಘದಿಂದ ವಿಶೇಷ ಚೇತನರಿಗೆ ಸಹಾಯ ಹಸ್ತ

Share This
FB Page LIKE ಮಾಡಿ ಬೆಂಬಲಿಸಿ
ಬಂಟ್ಸ್ ನ್ಯೂಸ್ ವಲ್ಡ್, ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ  ಮಂಗಳೂರು ತಾಲೂಕು ಸಮಿತಿಯ ವತಿಯಿಂದ ತಾಲೂಕಿನ ವಿಶೇಷ ಚೇತನರಿಗೆ ಸಹಾಯ ಹಸ್ತ, ಸಮಾಜದ ಅರ್ಹ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ಹಾಗೂ ವೈವಾಹಿಕ ಆರ್ಥಿಕ ಸಹಾಯ ನೀಡಿಕೆ ಸಮಾರಂಭವು ಮಾತೃಸಂಘದ ಅಮೃತೋತ್ಸವ ಕಟ್ಟಡದಲ್ಲಿ ಜರಗಿತು.
ಮಾತೃಸಂಘದ ಅಧ್ಯಕ್ಷ ಮಾಲಾಡಿ ಅಜಿತ್ಕುಮಾರ್ ರೈಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ . ಜಲ್ಲಾ ರೆಡ್ ಕ್ರಾಸ್ ಸೊಸೈಟಿಯ ಅಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಮತ್ತು ಮಾತೃಸಂಘದ ಮಂಗಳೂರಿನ ವಿದ್ಯಾಸಂಸ್ಥೆಗಳ ಸಂಚಾಲಕ ಕೃಷ್ಣಪ್ರಸಾದ್ ರೈ ಯವರು ಸಂದರ್ಭೋಚಿತವಾಗಿ ಮಾತನಾಡಿದರು.

ಮಾತೃಸಂಘದ ಕೋಶಾಧಿಕಾರಿ ರವೀಂದ್ರನಾಥ ಎಸ್. ಶೆಟ್ಟಿ, ಮಾತೃ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರುಗಳು, ಕಾಲೇಜಿನ ಪ್ರಾಂಶುಪಾಲರುಗಳು, ಅಧ್ಯಾಪಕ ವೃಂದ, ಕಂಕನಾಡಿ ಬಂಟರ ಸಂಘದ ಪದಾಧಿಕಾರಿಗಳು ಮತ್ತು ಸಮಾಜದ ಹಲವಾರು ಇತರ ಗಣ್ಯರು ಉಪಸ್ಥಿತರಿದ್ದರು. ತಾಲೂಕು ಸಮಿತಿಯ ಸಂಚಾಲಕ ಯಸ್. ಜಯರಾಮ ಸಾಂತ ಸ್ವಾಗತಿಸಿದರು. ಸಹ ಸಂಚಾಲಕ ಶ್ರೀ ಕೆ. ಉಮೇಶ್ ರೈ ವಂದಿಸಿದರು.

Pages