ಕಾಶ್ಮೀರದಿಂದ ಕನ್ಯಾಕುಮಾರಿಗೆ ತುಳುನಾಡ ಧ್ವಜಧಾರಿಯಾಗಿ ಸೈಕಲ್ ಪ್ರಯಾಣ: ಪ್ರಸಾದ್ ಶೆಟ್ಟಿಗೆ ತುಳು ಅಕಾಡೆಮಿ ಅಭಿನಂದನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕಾಶ್ಮೀರದಿಂದ ಕನ್ಯಾಕುಮಾರಿಗೆ ತುಳುನಾಡ ಧ್ವಜಧಾರಿಯಾಗಿ ಸೈಕಲ್ ಪ್ರಯಾಣ: ಪ್ರಸಾದ್ ಶೆಟ್ಟಿಗೆ ತುಳು ಅಕಾಡೆಮಿ ಅಭಿನಂದನೆ

Share This
BUNTS NEWS, ಮಂಗಳೂರು: ತುಳು ಭಾಷೆಗೆ ರಾಷ್ಟ್ರೀಯ ಮಾನ್ಯತೆ ದೊರಕಲು ತುಳುನಾಡಿನ ಯುವಕರು ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ತುಳುನಾಡಿನ ಧ್ವಜಧಾರಿಯಾಗಿ ಕಾಶ್ಮೀರದಿಂದ ಕನ್ಯಾಕುಮಾರಿ ತನಕ ಸೈಕಲ್ ಸವಾರಿ ನಡೆಸಿರುವುದು ಶ್ಲಾಘನಾರ್ಹ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ ಭಂಡಾರಿ ಅವರು ಹೇಳಿದರು.
ಕಾಶ್ಮೀರದಿಂದ ಕನ್ಯಾಕುಮಾರಿಗೆ ತುಳುನಾಡ ಧ್ವಜಧಾರಿಯಾಗಿ ಸೈಕಲ್ ಪ್ರಯಾಣ: ಪ್ರಸಾದ್ ಶೆಟ್ಟಿಗೆ ತುಳು ಅಕಾಡೆಮಿ ಅಭಿನಂದನೆ
ಮಂಗಳೂರು ತಾಲೂಕಿನ ನೆಲ್ಲಿಕಾರು ಪ್ರದೇಶದ ಪ್ರಸಾದ್ ವಿಜಯ ಶೆಟ್ಟಿ ಎಂಬ 26 ವರ್ಷದ ಯುವಕ 19 ದಿನಗಳಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ತುಳುನಾಡಿನ ಧ್ವಜ ಪ್ರದರ್ಶಿಸುತ್ತಾ ಸೈಕಲ್ ಸವಾರಿ ಮಾಡುತ್ತಾ ಎಪ್ರಿಲ್ 8 ರಂದು ಮಂಗಳೂರು ತಲುಪಿದಾಗ ಉರ್ವಸ್ಟೋರ್ ತುಳುಭವನದಲ್ಲಿ ಅಕಾಡೆಮಿಯ ವತಿಯಿಂದ ಸಾಂಪ್ರಾದಾಯಕವಾಗಿ ಸ್ವಾಗತಿಸಿ ಅಭಿನಂದಿಸಿ ಅಧ್ಯಕ್ಷರು ಮಾತನಾಡುತ್ತಿದ್ದರು.

2500 ವರ್ಷಗಳ ಇತಿಹಾಸ ಹೊಂದಿರುವ ತುಳು ಭಾಷೆಗೆ ದೇಶದ ಸಂವಿಧಾನದಲ್ಲಿ ಮಾನ್ಯತೆ ದೊರಕಿಲ್ಲ. ಇತ್ತಿಚೆಗಿನ ದಿನಗಳಲ್ಲಿ ಸಾಂವಿಧಾನಿಕ ಮಾನ್ಯತೆಗಾಗಿ ವಿವಿಧ ರೀತಿಯಲ್ಲಿ ಒತ್ತಡ ಹಾಕಲಾಗುತ್ತಿದೆ. ತುಳುನಾಡಿನ ಜನತೆ ವಿಭಿನ್ನ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಿ ಭಾಷಾ ಮಾನ್ಯತೆಗಾಗಿ ಶ್ರಮಿಸುತ್ತಿದ್ದಾರೆ. ಯುವಕರು, ಸಾಹಿತಿಗಳು, ಸಂಘಟಕರು, ಹೋರಾಟಗಾರರು ತಮ್ಮದೇ ಆದ ರೀತಿಯಲ್ಲಿ ತುಳುನಾಡಿನ ಸ್ವಾಭಿಮಾನ ರಕ್ಷಣೆ ಮಾಡುತ್ತಿದ್ದಾರೆ. ಅಕಾಡೆಮಿ ವತಿಯಿಂದ ಕಾನೂನಿನ ಚೌಕಟ್ಟಿಗೆ ಒಳಪಟ್ಟು ಸಹಕಾರ ನೀಡಲಾಗುತ್ತಿದೆ. ಎಲ್ಲರೂ ಒಂದಾಗಿ ಒಂದೇ ಉದ್ದೇಶಕ್ಕೆ ಚಳವಳಿ ನಡೆಸಿದಾಗ ಯಶಸ್ಸು ಸಿಗಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿ ಪ್ರಯತ್ನಿಸುತ್ತಿದೆ ಎಂದು ಎ.ಸಿ ಭಂಡಾರಿ ಹೇಳಿದರು.

ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ| ವಾಮನ ನಂದಾವರ, ಸದಸ್ಯರಾದ ಡಾ| ವೈ.ಎನ್ ಶೆಟ್ಟಿ, ಡಾ| ವಾಸುದೇವ ಬೆಳ್ಳೆ, ಸುಧಾನಾಗೇಶ್, ರಿಜಿಸ್ಟ್ರಾರ್  ಚಂದ್ರಹಾಸ ರೈ.ಬಿ ಭಾಗವಹಿಸಿದ್ದರು.
FB Page LIKE ಮಾಡಿ ಬೆಂಬಲಿಸಿ

Pages