ಸಚಿವ ರಮಾನಾಥ ರೈ ಅವರ ಹಿರಿಯ ಸಹೋದರ ಬೆಳ್ಳಿಪ್ಪಾಡಿ ಸತೀಶ್ ರೈ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಸಚಿವ ರಮಾನಾಥ ರೈ ಅವರ ಹಿರಿಯ ಸಹೋದರ ಬೆಳ್ಳಿಪ್ಪಾಡಿ ಸತೀಶ್ ರೈ ನಿಧನ

Share This
BUNTS NEWS, ಬೆಂಗಳೂರು: ಮೈಸೂರಿನ ಜನಪ್ರಿಯ ವೈದ್ಯ ಸಚಿವ ರಮಾನಾಥ ರೈ ಅವರ ಹಿರಿಯ ಸಹೋದರ ಬೆಳ್ಳಿಪ್ಪಾಡಿ ಸತೀಶ್ ರೈ ಅವರು ನಿಧನರಾಗಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಹೃದಯಾಘಾತಕ್ಕೆ ಒಳಗಾಗಿದ್ದ ಸತೀಶ್ ರೈ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆ ಉಸಿರೆಳೆದಿದ್ದಾರೆ. ಯಕ್ಷಗಾನದಲ್ಲಿ ತೀವ್ರ ಆಸಕ್ತಿ ಹೊಂದಿದ್ದ ರೈ, ಮೈಸೂರಿನಲ್ಲಿ ನಡೆಯುವ ಯಕ್ಷಗಾನ ಚಟುವಟಿಕೆಗಳಿಗೆ ಪೋಷಕರಾಗಿದ್ದರು. ಸರಳತೆ, ಸಜ್ಜನಿಕೆಗೆ  ಹೆಸರಾದ ಸತೀಶ್ ರೈ ಬಡ ರೋಗಿಗಳಿಂದ ಶುಲ್ಕ ಪಡೆಯದೆ ಉಪಚರಿಸುತ್ತಿದ್ದರು.

Pages