ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರರಿಗೆ “ವಿಶ್ವ ಸಂವಾದ ಕೇಂದ್ರದ ಗೌರವ ಸನ್ಮಾನ” - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರರಿಗೆ “ವಿಶ್ವ ಸಂವಾದ ಕೇಂದ್ರದ ಗೌರವ ಸನ್ಮಾನ”

Share This
ಬೆಂಗಳೂರು: ನೇರ, ನಿಷ್ಠುರ, ನಿರ್ಭಿಡೆಯ ರಾಷ್ಟ್ರೀಯವಾದಿ ಚಿಂತನೆಯ ಹಿರಿಯ ಪತ್ರಕರ್ತ ವಿಶ್ವವಾಣಿ ದಿನಪತ್ರಿಕೆಯ ಮಂಗಳೂರು ವಿಭಾಗ ಮುಖ್ಯಸ್ಥ ಜಿತೇಂದ್ರ ಕುಂದೇಶ್ವರ ಅವರು ವಿಶ್ವ ಸಂವಾದ ಕೇಂದ್ರ ಕರ್ನಾಟಕದ ಗೌರವ ಸನ್ಮಾನಕ್ಕೆ ಆಯ್ಕೆಯಾಗಿದ್ದಾರೆ.
Jithendra kundeshwara vishwa swamvadha sanmana
ನಾರದ ಜಯಂತಿಯ ಪ್ರಯುಕ್ತ ವಿಶ್ವ ಸಂವಾದ ಕೇಂದ್ರ ಕರ್ನಾಟಕ ಕರ್ನಾಟಕದ ಹಿರಿಯ ಪತ್ರಕರ್ತರಾಗಿದ್ದ ತಿ.ತಾ.ಶರ್ಮ ಹಾಗೂ ಬೆ.ಸು.ನಾ.ಮಲ್ಯರ ನೆನಪಿನಲ್ಲಿ ಮಾಧ್ಯಮ ಮಿತ್ರರ ಸ್ನೇಹ ಮಿಲನ ಕಾರ್ಯಕ್ರಮ ನಡೆಸುತ್ತಿದ್ದು ಈ ಸಂದರ್ಭ ಮಂಗಳೂರು ವಿಭಾಗ ಮುಖ್ಯಸ್ಥ ಜಿತೇಂದ್ರ ಕುಂದೇಶ್ವರ ಹಾಗೂ ಹಸಿರುವಾಣಿ ಪಾಕ್ಷಿಕ ಸಂಪಾದಕ ರಾಧಾಕೃಷ್ಣ ಭಡ್ತಿ ಅವರಿಗೆ ಗೌರವ ಸನ್ಮಾನ ನಡೆಯಲಿದೆ.

ಜೂ.24ರಂದು ಜಯನಗರದಲ್ಲಿರುವ ರಾಷ್ಟೋತ್ಥಾನ ಶಾರೀರಿಕ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದೆ.

Pages