ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಕರ್ನಾಟಕ ಸಂಘ ಅಂಧೇರಿಯ ವಾರ್ಷಿಕೋತ್ಸವ ಸಂಭ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಕರ್ನಾಟಕ ಸಂಘ ಅಂಧೇರಿಯ ವಾರ್ಷಿಕೋತ್ಸವ ಸಂಭ್ರಮ

Share This
BUNTS NEWS NETWORK, ಮುಂಬಯಿ: ಕರ್ನಾಟಕ ಸಂಘ ಅಂಧೇರಿ ಇದರ 12ನೇ ವಾರ್ಷಿಕೋತ್ಸವ ಸಂಭ್ರಮವು ಜು. 8ರಂದು ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ ಜರಗಿತು.
ವಾರ್ಷಿಕೋತ್ಸವದ ನಿಮಿತ್ತ ನಡೆದ ವಿವಿಧ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬಾಬಾಸ್ಗ್ರೂಪ್ಆಫ್ಕಂಪೆನೀಸ್ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮಹೇಶ್ಎಸ್‌. ಶೆಟ್ಟಿ ಅವರು ದೀಪಪ್ರಜ್ವಲಿಸಿ ಸಮಾರಂಭಕ್ಕೆ  ಚಾಲನೆ ನೀಡಿದರು. ವೇದಿಕೆಯಲ್ಲಿ ಜನಪ್ರಿಯ ಜ್ಯೋತಿಷ್ಯ ಡಾ| ಎಂ. ಜೆ. ಪ್ರವೀಣ್ಭಟ್‌,  ಕರ್ನಾಟಕದ ಸಚಿವರಾದ ರಮೇಶ್ಜಿಗಜಿಣಗಿ ಮತ್ತು ಆರ್‌. ಶಂಕರ್‌, ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರದೀಪ್ಕುಮಾರ್ಕಲ್ಕೂರ, ಸಮಾಜ ಸೇವಕಿ ಡಾ| ಕೊತ್ತಕೃಷ್ಣವೇಣಿ, ಗಡಿನಾಡು ಸಾಹಿತ್ಯ ಸಂಸ್ಕೃತಿ ಅಕಾಡೆಮಿಯ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ, ಉದ್ಯಮಿ ನಿಲೇಶ್ಶೆಟ್ಟಿಗಾರ್‌, ಕ್ರಿಸ್ಟಲ್ತಾಯ್ಸ್ಪಾ ಇದರ ಸುನೀಲ್ಕುಂದರ್‌, ಸಾಕಿನಾಕಾ ಭ್ರಮರಾಂಬಿಕಾ ದೇವಸ್ಥಾನದ ಉಪಾಧ್ಯಕ್ಷ, ರಾಮಕ್ಷತ್ರೀಯ ಕೋ. ಆಪರೇಟಿವ್ಕ್ರೆಡಿಟ್ಸೊಸೈಟಿಯ ಕಾರ್ಯಾಧ್ಯಕ್ಷ ಶ್ರೀಧರ ಶೇರುಗಾರ್‌, ಸಾಕಿನಾಕಾ ಶಾರದಾ ಕನ್ನಡ ಹೈಸ್ಕೂಲ್ ಪ್ರಾಂಶುಪಾಲೆ ವನಿತಾ ಕುಮಾರ್‌, ಉದ್ಯಮಿ ವಿಶ್ವನಾಥ ಶೇರುಗಾರ್ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಮಂಗಳೂರು ಅಧ್ಯಕ್ಷ ಡಾ| ಎಂ. ಎನ್‌. ರಾಜೇಂದ್ರ ಕುಮಾರ್ಮತ್ತು ರಾಜ್ಯ ಸಭಾ ಸದಸ್ಯ ಡಾ| ಎಲ್‌. ಹನುಮಂತಯ್ಯ ಮುಂಬಯಿ ತುಳು ಕನ್ನಡಿಗರ ಪರವಾಗಿ ಸನ್ಮಾನಿಸಲಾಯಿತು. ಪಿಎಚ್ಡಿ ಪದವೀದರ ಡಾ| ರಘುರಾಮ್ಶೆಟ್ಟಿ ಅವರನ್ನು ಅಭಿನಂದಿಸಲಾಯಿತುಸಂಘದ ಸದಸ್ಯರಿಂದ ಹಾಗೂ ಮಕ್ಕಳಿಂದ ನೃತ್ಯ ಕಾರ್ಯಕ್ರಮ, ವಿವಿಧ ಸಂಘ-ಸಂಸ್ಥೆಗಳು, ಭಜನಾ ಮಂಡಳಿಗಳಿಂದ ಭಜನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಪತ್ರಕರ್ತ ದಯಾ ಸಾಗರ್ಚೌಟ, ಕರ್ನೂರು ಮೋಹನ್ರೈ, ರಾಜ್ಕುಮಾರ್ಕಾರ್ನಾಡ್ಇವರು ನಿರ್ವಹಿಸಿದರು.

ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಯ ಶ್ರೀಕಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕ ತೋನ್ಸೆ ಜಯಕೃಷ್ಣ  . ಶೆಟ್ಟಿ ಅವರು ಸಮಾಜ ಸೇವೆಗೈದು ತೆರೆಮರೆಯಲ್ಲಿರುವ ಸಾಧಕರನ್ನು ಗುರುತಿಸುವ ವಿಶೇಷ ಕಾರ್ಯವನ್ನು ಸಂಘವು ಮಾಡಿದೆ. ಸಂಘಟನೆಗೆ ಉತ್ತಮ ಭವಿಷ್ಯವಿದ್ದು, ಇದರ ಸಮಾಜಪರ ಕಾರ್ಯಕ್ರಮಗಳಿಗೆ ಎಲ್ಲರ ಸಹಕಾರ ಅಗತ್ಯ ಎಂದರು.

ಶ್ರೀ ಕೃಷ್ಣ ವಿಠಲ ಪ್ರತಿಷ್ಠಾನದ ಸಂಸ್ಥಾಪಕ ಕೈರಬೆಟ್ಟು ವಿಶ್ವನಾಥ್ಭಟ್ಅವರು ಆಶೀರ್ವಚನಗೈದರು. ಅತಿಥಿಗಳಾಗಿ ಕ್ಲಾಸಿಕ್ಗ್ರೂಪ್ಆಫ್ಹೊಟೇಲ್ಸ್ ಸುರೇಶ್ಕಾಂಚನ್‌,  ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ, ಜೆರಿಮೆರಿ ಶ್ರೀ ಉಮಾಮಹೇಶ್ವರಿ ಮಂದಿರದ  ಎಸ್‌. ಎನ್‌. ಉಡುಪ, ಉದ್ಯಮಿಗಳಾದ ಮಂಜುನಾಥ ಶೆಟ್ಟಿ, ನಾಗರಾಜ್ಪಡುಕೋಣೆ, ಉದ್ಯಮಿ ಸುಭಾಷ್ಶೆಟ್ಟಿ, ಪ್ರವೀಣ್ಶೆಟ್ಟಿ ಪುಣೆ,   ಬಿ. ಗಣಪತಿ, ಸುರೇಶ್ಶೆಟ್ಟಿ, ಗಾಣಿಗ ಸಮಾಜ ಮುಂಬಯಿ ಅಧ್ಯಕ್ಷ ರಾಮಚಂದ್ರ ಗಾಣಿಗ, ಸುಗಮ ಸಂಗೀತ ಪರಿಷತ್ಗೌರವಾಧ್ಯಕ್ಷ ವಿಶ್ವನಾಥ ಶೆಟ್ಟಿ ಕಾಪು ಅವರು   ಶುಭಹಾರೈಸಿದರು.

ಸಂದರ್ಭದಲ್ಲಿ ನಡೆದ ಕುಣಿತ ಭಜನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಸಸಿಹಿತ್ಲು ಕದಿಕೆ ಶ್ರೀ ರಾಧಾಕೃಷ್ಣ ಭಜನ ಮಂಡಳಿ, ದ್ವಿತೀಯ ಕುಂದಾಪುರ ಬಟ್ಟೆಕುದ್ರು ಶ್ರೀರಾಮ ಭಜನ ಮಂಡಳಿ, ತೃತೀಯ ಉಮಾಮಹೇಶ್ವರಿ ದೇವಸ್ಥಾನ ಜೆರಿಮೆರಿ ಭಜನ ಮಂಡಳಿ ಪಡೆಯಿತು. ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನವನ್ನು ನೀಡಲಾಯಿತು. ಕುಂಭಾಶಿ ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಸ್ಥಾನದ ಸ್ಥಾಪಕ ದೇವರಾಯ ಶೇರುಗಾರ್ಅವರನ್ನು ಸಮ್ಮಾನಿಸಲಾಯಿತು.   ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಾಸ್ಕರ ಸಸಿಹಿತ್ಲು ನಿರ್ವಹಿಸಿದರು.
ವೇದಿಕೆಯಲ್ಲಿ ಸಂಸ್ಥಾಪಕಾಧ್ಯಕ್ಷ ಕೃಷ್ಣ ಶೆಟ್ಟಿಗೌರವಾಧ್ಯಕ್ಷ ಪಿ. ಧನಂಜಯ ಶೆಟ್ಟಿ, ಅಧ್ಯಕ್ಷ ಹ್ಯಾರಿ ಸಿಕ್ವೇರಉಪಾಧ್ಯಕ್ಷರುಗಳಾದ ರವೀಂದ್ರ ಶೆಟ್ಟಿ ಮತ್ತು ಸತೀಶ್ಕರ್ಕೇರ, ಗೌರವ ಪ್ರಧಾನ ಕಾರ್ಯ ದರ್ಶಿ ರಾಜೇಂದ್ರ ರಾವ್‌, ಜತೆ ಕಾರ್ಯದರ್ಶಿ ದಿನೇಶ್ಆರ್‌. ಕೆ., ಗೌರವ ಕೋಶಾಧಿಕಾರಿ ಗಣೇಶ್ಬಲ್ಯಾಯ, ಜತೆ ಕೋಶಾಧಿಕಾರಿ ಸೀತಾರಾಮ ಪೂಜಾರಿ  ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರುವರದಿ: ಈಶ್ವರ ಎಂ. ಐಲ್ ಚಿತ್ರ: ದಿನೇಶ್ ಕುಲಾಲ್

Pages