ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರಿಂದ ಗೋಸ್ವರ್ಗ ಸಂವಾದ ಕಾರ್ಯಕ್ರಮ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿಯವರಿಂದ ಗೋಸ್ವರ್ಗ ಸಂವಾದ ಕಾರ್ಯಕ್ರಮ

Share This
BUNTS NEWS NETWORK, ಮುಂಬಯಿ: ಹೊಸ ನಗರ ಶ್ರೀ ರಾಮಚಂದ್ರ ಮಠದ ಶ್ರೀ ಗೋಕರ್ಣ ಮಂಡಲಾಧೀಶ್ವರ  ಶ್ರೀ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಇವರಿಂದ ಗೋಸ್ವರ್ಗ ಸಂವಾದ ದೇಸಿ ಗೋವುಗಳ ಸಂವರ್ಧನ ಮಹಾ ಅಭಿಯಾನ ಕುರಿತು ಜಾಗೃತಿ ಕಾರ್ಯಕ್ರಮವು ಜು. 1 ರಂದು ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ ಜರಗಿತು.
ಕಲ್ಲಡ್ಕ ಪ್ರಭಾಕರ ಭಟ್ ಅವರು ದಿಕ್ಸೂಚಿ ಭಾಷಣ ಮಾಡಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ  ಕರ್ನಾಟಕದ ಹೆಸರಾಂತ ಗಾಯಕ, ನಿರ್ದೇಶಕ ಶ್ರೀ ಶಂಕರ ಶಾನುಭಾಗ್ಅವರಿಂದ, ಕಲಾಸೌರಭದ ಸಂಯೋಜನೆಯಲ್ಲಿ ಭಕ್ತಿ ಸಂಗೀತ ರಸಧಾರೆ ನಡೆಯಿತುಶ್ರೀ ರಾಮಚಂದ್ರಾಪುರ ಮಠ ಮುಂಬಯಿ ವಲಯದ ಪ್ರಕಾಶ್ಭಟ್‌, ಈಶ್ವರಿ ಭಟ್‌, ಉಷಾ ಭಟ್‌, ಮನೋರಂಜನಿ ರಮಣ ಭಟ್‌, ಬಾಲಕೃಷ್ಣ ಭಂಡಾರಿ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 ಸಂದರ್ಭದಲ್ಲಿ ವೇದಿಕೆಯಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಬಂಟರ ಸಂಘ ಮುಂಬಯಿ ಉಪಾಧ್ಯಕ್ಷ  ಚಂದ್ರಹಾಸ ಶೆಟ್ಟಿ,  ಆರ್ಗಾನಿಕ್‌ ಇಂಡಸ್ಟೀಸ್ ಲಿಮಿಟೆಡ್‌ ಇದರ ಮುಖ್ಯ ಆಡಳಿತ ನಿರ್ದೇಶಕ ಆನಂದ ಶೆಟ್ಟಿಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್ದಾಸ್‌ ಶೆಟ್ಟಿಡಾಮನೋಹರ ಹೆಗ್ಡೆಉದ್ಯಮಿ ಬೊಳ್ನಾಡುಗುತ್ತು ಚಂದ್ರಹಾಸ ರೈಬಂಟರ ಸಂಘ ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಠಲ್‌ ಆಳ್ವಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್‌ ಪಕ್ಕಳಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಹೆಗ್ಡೆಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆಜಯಪ್ರಕಾಶ್‌ ಶೆಟ್ಟಿನವೀನ್‌ ಶೆಟ್ಟಿ ಇನ್ನಬಾಳಿಕೆಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಕರ್ನೂರು ಮೋಹನ್‌ ರೈಮುಂಬಯಿಯ ವಿವಿಧ ಜಾತೀಯ ಸಂಘ-ಸಂಸ್ಥೆಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಪ್ರಕಾಶ್ ಭಟ್ ಸ್ವಾಗತಿಸಿದರು. ದಯಾಸಾಗರ ಚೌಟ ಕಾರ್ಯಕ್ರಮವನ್ನು ನಿರೂಪಿಸಿ ವಂದನಾರ್ಪಣೆ ಮಾಡಿದರು. ವರದಿ: ಈಶ್ವರ ಎಂ. ಐಲ್, ಚಿತ್ರ: ದಿನೇಶ್ ಕುಲಾಲ್

Pages