ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಪಟ್ಲ ಫೌಂಡೇಶನ್’ನಿಂದ 2 ಲಕ್ಷ ರೂ. ಧನಸಹಾಯ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕೊಡಗು ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಪಟ್ಲ ಫೌಂಡೇಶನ್’ನಿಂದ 2 ಲಕ್ಷ ರೂ. ಧನಸಹಾಯ

Share This
BUNTS NEWS, ಮಂಗಳೂರು: ಕೊಡಗಿನ ಪ್ರವಾಹ ಸಂತ್ರಸ್ತರ ಪರಿಹಾರ ನಿಧಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರು ತುರ್ತು ಕೋರ್ ಕಮಿಟಿ ಸಭೆಯನ್ನು ಕರೆದು ಮಾನವೀಯತೆಯ ನೆಲೆಯಲ್ಲಿ ಟ್ರಸ್ಟ್ ವತಿಯಿಂದ 2 ಲಕ್ಷ ರೂ. ಧನಸಹಾಯವನ್ನು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ನೆರೆ ಪರಿಹಾರ ನಿಧಿಗೆ ನೀಡಿದರು.
ಅದರಂತೆ  ಸನ್ಮಾನ್ಯ ನಗರಾಡಳಿತ ಮತ್ತು  ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಸಮ್ಮುಖದಲ್ಲಿ . ಜಿಲ್ಲಾಧಿಕಾರಿಯವರಾದ ಸಸಿಕಾಂತ್ ಸೆಂಥಿಲ್ ರವರಿಗೆ ಪಟ್ಲ ಸತೀಶ್ ಶೆಟ್ಟಿಯವರು ಚೆಕ್ ಹಸ್ತಾಂತರಿಸಿದರು.

ಸಂದರ್ಭದಲ್ಲಿ ಫೌಂಡೇಶನಿನ ಪ್ರಧಾನ ಕಾರ್ಯದರ್ಶಿ ಅಡ್ಯಾರ್ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ ಮತ್ತು ಟ್ರಸ್ಟಿ ರವಿ ಶೆಟ್ಟಿ ಅಶೋಕನಗರ ಜತೆಗಿದ್ದರು.

Pages