ಬಡ್ಡಿ ರಹಿತ ಸಾಲಕ್ಕಾಗಿ ‘ಕಾಯಕ ಯೋಜನೆ’, ಬೀದಿ ಬದಿ ವ್ಯಾಪಾರಿಗಳಿಗಾಗಿ ‘ಬಡವರ ಬಂಧು’ ಯೋಜನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಡ್ಡಿ ರಹಿತ ಸಾಲಕ್ಕಾಗಿ ‘ಕಾಯಕ ಯೋಜನೆ’, ಬೀದಿ ಬದಿ ವ್ಯಾಪಾರಿಗಳಿಗಾಗಿ ‘ಬಡವರ ಬಂಧು’ ಯೋಜನೆ

Share This
ಮಂಗಳೂರು: ಉದ್ಯಮಶೀಲತೆ ಗುಣಮಟ್ಟ ಹೆಚ್ಚಿಸಲು ಹಾಗೂ ಕೌಶಲ್ಯಾಭಿವೃದ್ಧಿಗಾಗಿ ಬಡ್ಡಿ ರಹಿತ ಸಾಲ ನೀಡುವ ‘ಕಾಯಕ ಯೋಜನೆ’ಗೆ ರಾಜ್ಯದೆಲ್ಲೆಡೆ ಚಾಲನೆ ನೀಡಲಾಗುತ್ತಿದೆ. ಅಲ್ಲದೆ ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗಲು ‘ಬಡವರ ಬಂಧು’ ಯೋಜನೆ ಜಾರಿಯಾಗಲಿದೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ತಿಳಿಸಿದರು.
ಅವರು ದಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಯಕ ಯೋಜನೆಯಡಿ 10 ಲಕ್ಷದವರೆಗೆ ಸಾಲ ನೀಡಲಿದ್ದು ಇದರಲ್ಲಿ 5 ಲಕ್ಷ ರೂ.ಗಳಿಗೆ ಬಡ್ಡಿ ಇರಲಿದೆ. ಸರ್ಕಾರವು ಮೀಟರ್ ಬಡ್ಡಿ ಮುಕ್ತವಾಗುವ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಲು ‘ಬಡವರ ಬಂಧು’ ಯೋಜನೆಯನ್ನು ಶೀಘ್ರದಲ್ಲಿ ಆರಂಭಿಸಲಿದ್ದು 10 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ ಲಭಿಸಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಎಸ್’ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷ ಡಾ ಎಂ.ಎನ್.ರಾಜೇಂದ್ರ ಕುಮಾರ್, ಸಹಕಾರಿ ಸಂಘಗಳ ರಿಜಿಸ್ಟ್ರಾರ್ ಎಂ.ಕೆ ಅಯ್ಯಪ್ಪ ಮತ್ತಿತರ ಪ್ರಮುಖರು ಇದ್ದರು.

Pages