ಬೆಳ್ಮಣ್ ರೋಶನ್ ಡಿಸೋಜಾರಿಗೆ ‘ಪಿಂಗಾರ ರಾಜ್ಯೋತ್ಸವ 2018'ರ ಪ್ರಶಸ್ತಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬೆಳ್ಮಣ್ ರೋಶನ್ ಡಿಸೋಜಾರಿಗೆ ‘ಪಿಂಗಾರ ರಾಜ್ಯೋತ್ಸವ 2018'ರ ಪ್ರಶಸ್ತಿ

Share This
ಮಂಗಳೂರು: ಹ್ಯುಮಾನಿಟಿ ಸಂಸ್ಥೆಯ ಮೂಲಕ ಕಷ್ಟದಲ್ಲಿರುವವರಿಗೆ ಸಹಾಯ ಮಾಡುತ್ತಿರುವ ಸಮಾಜ ಸೇವಕ ಬೆಳ್ಮಣ್ ರೋಶನ್ ಡಿಸೋಜಾ ಅವರು ಈ ಭಾರಿಯ ‘ಪಿಂಗಾರ ರಾಜ್ಯೋತ್ಸವ 2018ರ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಸಮಾರಂಭವು ನ.13ರಂದು ಪುರಭವನದಲ್ಲಿ ಜರಗಲಿದ್ದು ಮಂಗಳೂರು ಧರ್ಮಪ್ರಾಂತ್ಯ ಧರ್ಮಾಧ್ಯಕ್ಷ ವಂ.ಡಾI ಪೀಟರ್ ಪೌಲ್ ಸಲ್ಡಾನಾ ರೋಶನ್ ಡಿಸೋಜಾರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಮಾರು ಶ್ರೀ ಈಶವಿಠಲದಾಸ ಸ್ವಾಮೀಜಿ ಆರ್ಶಿವಚನ ನೀಡಲಿರುವರು.

ಮುಖ್ಯ ಅತಿಥಿಯಾಗಿ ಶಾಸಕ ವೇದವ್ಯಾಸ ಕಾಮತ್, ಎಮ್ಎಲ್ಸಿ ಐವನ್ ಡಿಸೋಜಾ, ಮಾಜಿ ಶಾಸಕ ಜೆ.ಆರ್.ಲೋಬೊ ಹಾಗೂ ಗೌರವ ಅತಿಥಿಯಾಗಿ ಪಿಂಗಾರ ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ ರೋಯ್ ಕಾಸ್ತೆಲಿನೊ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಎಡಿಪಿಐ ರಾಜ್ಯಾಧ್ಯಕ್ಷ ಎಲಿಯಾಸ್ ಮುಹಮ್ಮದ್ ತುಂಬೆ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಪಿಂಗಾರ ಪತ್ರಿಕೆಯ ಸಂಪಾದಕ ರೇಮಂಡ್ ಡಿ’ಕುನ್ಹಾ, ಪಿಂಗಾರ ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ ರೋಯ್ ಕಾಸ್ತೆಲಿನೊ, ಧರ್ಮದರ್ಶಿ ಹರಿಕೃಷ್ಣ ಪುನರೂರು ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Pages