ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ ಮಂಜೂಷಾ ವಸ್ತು ಸಂಗ್ರಹಾಲಯ ನಾಳೆ ಲೋಕಾರ್ಪಣೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶ್ರೀ ಕ್ಷೇತ್ರ ಧರ್ಮಸ್ಥಳದ ನೂತನ ಮಂಜೂಷಾ ವಸ್ತು ಸಂಗ್ರಹಾಲಯ ನಾಳೆ ಲೋಕಾರ್ಪಣೆ

Share This
BUNTS NEWS, ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಂಜುಷಾ ವಸ್ತು ಸಂಗ್ರಹಾಲಯವನ್ನು ಅ.24ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಾರ್ಪಣೆ ಮಾಡಲಿರುವರು.
ಇದೇ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಪಟ್ಟಾಧಿಕಾರಿಯಾಗಿ 50 ವರ್ಷಗಳನ್ನು ಪೂರೈಸಿರುವ ಪೂಜ್ಯ ಡಾ।। ವೀರೇಂದ್ರ ಹೆಗ್ಗಡೆ ಅವರನ್ನು ಸಿಎಂ ಕುಮಾರಸ್ವಾಮಿ ಅಭಿನಂದಿಸಲಿರುವರು. ಕಾರ್ಯಕ್ರಮದಲ್ಲಿ ಶ್ರೀಮತಿ ಹೇಮಾವತಿ ವೀ. ಹೆಗ್ಗಡೆ ಅವರು “ಸುವರ್ಣ ಸಂಚಯ” ಪುಸ್ತಕ ಮಾಲಿಕೆಯನ್ನು ಬಿಡುಗಡೆ ಮಾಡಲಿರುವರು.

ಸಮಾರಂಭವು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಸಂಜೆ 3 ಗಂಟೆಗೆ ನಡೆಯಲಿದ್ದು ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಉಸ್ತುವಾರಿ ಸಚಿವ ಯು.ಟಿ.ಖಾದರ್, ಶಾಸಕ ಹರೀಶ್ ಪೂಂಜ, ಎಂಎಲ್’ಸಿ ಗಳಾದ ಕೆ. ಹರೀಶ್ ಕುಮಾರ್, ಎಸ್.ಎಲ್. ಭೋಜೇಗೌಡ ಮತ್ತಿತರ ಪ್ರಮುಖರು ಭಾಗವಹಿಸುತ್ತಿದ್ದಾರೆ.

Pages