ಮಕ್ಕಳ ಕ್ರಿಯಾತ್ಮಕ, ಸೃಜನಾತ್ಮಕ ಬದಲಾವಣೆಗೆ ಶಕ್ತಿ ಕ್ಯಾನ್ ಕ್ರಿಯೇಟ್’ನಂತಹ ಶಿಬಿರ ಸಹಾಯಕ : ನಳಿನ್ ಕುಮಾರ್ ಕಟೀಲು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಕ್ಕಳ ಕ್ರಿಯಾತ್ಮಕ, ಸೃಜನಾತ್ಮಕ ಬದಲಾವಣೆಗೆ ಶಕ್ತಿ ಕ್ಯಾನ್ ಕ್ರಿಯೇಟ್’ನಂತಹ ಶಿಬಿರ ಸಹಾಯಕ : ನಳಿನ್ ಕುಮಾರ್ ಕಟೀಲು

Share This
ಮಂಗಳೂರು: ಮಕ್ಕಳಲ್ಲಿ ಕ್ರಿಯಾತ್ಮಕ ಹಾಗೂ ಸೃಜನಾತ್ಮಕವಾದ ಬದಲಾವಣೆಯಾಗಲು ಶಕ್ತಿ ಕ್ಯಾನ್ ಕ್ರಿಯೇಟ್’ನಂತಹ ಶಿಬಿರ ಸಹಾಯಕವಾಗಿದೆ. ಮಕ್ಕಳು ಕ್ರಿಯಾತ್ಮಕವಾಗಿ ತಯಾರು ಮಾಡಿರುವ ವಸ್ತುಗಳ ಪ್ರದರ್ಶನ ನೋಡಿದಾಗ ಶಿಬಿರವು ಯಶಸ್ವಿಯಾಗಿದೆ ಎಂಬುವುದರಲ್ಲಿ ಸಂದೇಹವಿಲ್ಲ ಎಂಬುದಾಗಿ ಸಂಸದ ನಳಿನ್ ಕುಮಾರ್ ಕಟೀಲು ಮೆಚ್ಚುಗೆ ವ್ಯಕ್ತಪಡಿಸಿದರು.
ಅವರು ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಲಾದಶಕ್ತಿ ಕ್ಯಾನ್ ಕ್ರಿಯೇಟ್ಶಿಬಿರದ  ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ, ಅನೇಕ ಶಾಲೆಯ ಮಕ್ಕಳು ಒಂದು ಕಡೆ ಸೇರಿದಾಗ ಅವರು ಸ್ನೇಹಿತರಾಗುತ್ತಾರೆ ಇದು ಅವರ ಬದಲಾವಣೆಗೆ ಮಾರ್ಗದರ್ಶನ ನೀಡುತ್ತದೆ. ಇಂತಹ ವಿಶಾಲವಾದ ಜಾಗದಲ್ಲಿ ಶಿಬಿರವನ್ನು ಆಯೋಜಿಸಿರುವ ಶಕ್ತಿ ವಸತಿ ಶಾಲೆಯ ಆಡಳಿತ ಮಂಡಳಿಯ ಪ್ರಯತ್ನವನ್ನು ಸಂಸದರು ಅಭಿನಂದಿಸಿದರು.

ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ಇಂತಹ ಶಿಬಿರವು ಮಕ್ಕಳ ಪ್ರತಿಭೆಯನ್ನು ಅನಾವರಣಗೊಳಿಸುವ ವೇದಿಕೆಯಾಗಿದೆ. ಪೋಷಕರು ಮಕ್ಕಳ ಜೀವನವನ್ನು ರೂಪಿಸಲು ಇಂತಹ ಶಿಬಿರಕ್ಕೆ ಮಕ್ಕಳನ್ನು ಕಳುಹಿಸುವುದು ಅತಿ ಅವಶ್ಯ ಎಂದು ಹೇಳಿದರು. ಶಕ್ತಿ ಕ್ಯಾನ್ ಕ್ರಿಯೇಟ್ ನಿಜವಾಗಿಯು ಮಕ್ಕಳಲ್ಲಿ ಸೃಜನಾತ್ಮಕ ಬದಲಾವಣೆಯನ್ನು ಮಾಡಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಹೆಚ್ಚು ದಿನಗಳ ಶಿಬಿರವನ್ನು ಆಯೋಜಿಸಿ ಎಂದು ಕರೆ ನೀಡಿದರು.
ಶಕ್ತಿ ಕ್ಯಾನ್ ಕ್ರಿಯೇಟ್ ಸಮಾರೋಪ ಭಾಷಣವನ್ನು ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಮಾಡಿದರು. ಅವರು ಸಮಾರೋಪದಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳು ಇಲ್ಲಿ ಕಲಿತಿರುವ ವಿಷಯಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ಆಗ ಶಿಬಿರ ಯಶಸ್ವಿಯಾಗಿದೆ ಎಂದು ನಾವು ಭಾವಿಸುತ್ತೇವೆ. ಪ್ರತಿಯೊಬ್ಬರಲ್ಲಿಯು ಬದಲಾವಣೆಯಾಗಬೇಕು. ಕಲಿತಿರುವ ವಿಷಯವನ್ನು ನಾವು ಮನವರಿಕೆ ಮಾಡಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಡಳಿತ ಮಂಡಳಿ ಸದಸ್ಯೆ ಸಗುಣ ಸಿ. ನಾೈಕ್ ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರ ವಿತರಿಸಿದರು. 6 ದಿನದ ಶಿಬಿರದ ವರದಿಯನ್ನು ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು ವಾಚಿಸಿದರು. ವೇದಿಕೆಯಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಸಿ. ನಾೈಕ್, ಶಕ್ತಿ ಎಜ್ಯಕೇಶನ್ ಟ್ರಸ್ಟ್ ಟ್ರಸ್ಟಿ ಡಾ. ಮುರುಳೀಧರ್ ನಾೈಕ್, ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪ್ರಭಾಕರ ಜಿ.ಎಸ್, ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಾದ ವೈಷ್ಣವಿ ಕುಲಾಲ್ ಮತ್ತು ಗೌತಮಿ ಎಸ್. ಕುಲಾಲ್ ನಿರೂಪಿಸಿದರು. ಪ್ರಾರ್ಥನೆಯನ್ನು ಭುವನ, ಸ್ವಾಗತವನ್ನು ತಸ್ಸವಿ ಹಾಗೂ ಧನ್ಯವಾದವನ್ನು ಮೇಘನಾ ಮಾಡಿದರು.

Pages