ಗ್ರಾಮ ವಿಕಾಸದಿಂದ ರಾಷ್ಟ್ರ ವಿಕಾಸವಾಗುತ್ತದೆ : ಡಾ. ವಸಂತಕುಮಾರ ಪೆರ್ಲ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಗ್ರಾಮ ವಿಕಾಸದಿಂದ ರಾಷ್ಟ್ರ ವಿಕಾಸವಾಗುತ್ತದೆ : ಡಾ. ವಸಂತಕುಮಾರ ಪೆರ್ಲ

Share This
ಮಂಗಳೂರು: ಗಾಂಧೀಜಿಯ ಕಲ್ಪನೆ ಗ್ರಾಮ ವಿಕಾಸವಾಗಿತ್ತು ಯಾವ ಗ್ರಾಮ ವಿಕಾಸವಾಗುತ್ತದೆಯೋ ಅಲ್ಲಿಂದ ರಾಷ್ಟ್ರ ವಿಕಾಸವಾಗುತ್ತದೆ ಎಂದು ಆಕಾಶವಾಣಿಯ ನಿವೃತ್ತ ನಿರ್ದೇಶಕರಾದ ಡಾ. ವಸಂತಕುಮಾರ್ ಪೆರ್ಲ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಶಕ್ತಿ ಪದವಿ ಪೂರ್ವ ಕಾಲೇಜಿನ ವತಿಯಿಂದ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜೀಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಸಭೆಯನ್ನುದ್ದೇಶಿಸಿ ಮಾತನಾಡಿದರು. ಇಂದು ಗ್ರಾಮ ವಿಕಾಸವಾಗದೆ ನಗರ ವಿಕಾಸವಾಗಿರುವುದರಿಂದ  ಗ್ರಾಮೀಣ ಯುವಕರು ನಗರವನ್ನು ಅವಲಂಭಿತರಾಗಿದ್ದಾರೆ. ಹೀಗಾಗಿ ಗ್ರಾಮೀಣ ಪ್ರದೇಶದಲ್ಲಿರುವ ಹಿರಿಯರು ಯುವಕರಿಗೆ ಮಾರ್ಗದರ್ಶನ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಹಿರಿಯರು ವೃದ್ಧಾಶ್ರಮ ಸೇರುತ್ತಿದ್ದಾರೆ. ಈ  ತರದ ಅಸಮತೋಲನ ಅಂತ್ಯವಾಗಬೇಕಾದರೆ ಗಾಂಧೀಜಿಯ ಕಲ್ಪನೆಯ ಗ್ರಾಮ ಸ್ವರಾಜ್ಯದ ನಿರ್ಮಾಣವಾಗಬೇಕು. ಎಲ್ಲಾ ಗ್ರಾ,ಮಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶಾಲೆ ಹಾಗೂ ಆಸ್ಪತ್ರೆಗಳ ನಿರ್ಮಾಣವಾಗಬೇಕು. ಸ್ವಚ್ಛ ಗ್ರಾಮದ ಕಲ್ಪನೆಯ ಭಾವನೆ ಬರಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಭಾಕರ ಜಿ.ಎಸ್ ರೈತರು, ಬಡತನ ರೇಖೆಗಿಂತ ಕೆಳಗಿನವರ ಉನ್ನತಿಯೇ ಗಾಂಧೀಜಿಯ ಕಲ್ಪನೆ. ಶಿಕ್ಷಣಕ್ಕೆ ಮಹತ್ವ ನೀಡಿ ದೇಶದ ಬದಲಾವಣೆ ಮಾಡಿದಾಗ ಮಾತ್ರ ಗಾಂಧೀಜಿಯ ಕನಸು ನನಸು ಆಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲ್ಲಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾೈಕ್, ಪ್ರಧಾನ ಸಲಹೆಗಾರ ರಮೇಶ್.ಕೆ, ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು ಮತ್ತು ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್ ಸ್ವಾಗತಿಸಿದರು. ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕಿ ಶಿಲ್ಪಾ ವಂದಿಸಿದರು.

Pages