ಶಾಲೆ ಕೇವಲ ಮಕ್ಕಳು ಅಂಕ ಪಡೆಯುವ ಕೇಂದ್ರವಾಗಬಾರದು: ವಿಜಯ ಹಾರ್ವಿನ್ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಶಾಲೆ ಕೇವಲ ಮಕ್ಕಳು ಅಂಕ ಪಡೆಯುವ ಕೇಂದ್ರವಾಗಬಾರದು: ವಿಜಯ ಹಾರ್ವಿನ್

Share This
ಮಂಗಳೂರು: ಇಂದಿನ ಮಕ್ಕಳು ಪಾಠದ ಜೊತೆ ಆಟವಾಡಬೇಕು. ಶಾಲೆಗಳು ಮಕ್ಕಳನ್ನು ಅಂಕ ಪಡೆಯಲು ತಯಾರು ಮಾಡುವ ಕೇಂದ್ರಗಳು ಆಗಬಾರದು. ದೇಶದ ಭವಿಷ್ಯದ ದೃಷ್ಠಿಯಿಂದ ಅವರ ವ್ಯಕ್ತಿತ್ವದ ವಿಕಸನದ ಕಡೆಗೆ ಗಮನ ನೀಡಬೇಕೆಂದು ಸುದಾನ ವಸತಿ ಶಾಲೆ ಪುತ್ತೂರು ಇದರ ಸಂಚಾಲಕ ವಂದನೀಯ ವಿಜಯ ಹಾರ್ವಿನ್ ಹೇಳಿದರು.
ಅವರು ಶಕ್ತಿನಗರದ ಶಕ್ತಿ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನ ವತಿಯಿಂದ ಆಯೋಜಿಸದ “ಶಕ್ತಿ ಕ್ಯಾನ್ ಕ್ರಿಯೇಟ್” ದಸರಾ ರಜಾಕಾಲದ ಶಿಬಿರ ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿತ್ವದ ವಿಕಸನವಾದಾಗ ಮಾತ್ರ ಸಮಾಜ ಬದಲಾವಣೆ ಸಾಧ್ಯ. ಮಕ್ಕಳಲ್ಲಿರುವ ಒಳ್ಳೆಯ ಗುಣಗಳನ್ನು ಗುರುತಿಸುವ ಜಾಣತನ ಅಧ್ಯಾಪಕರಿಗೆ ಇರಬೇಕು. ಆಸಕ್ತಿಗೆ ಅನುಗುಣವಾಗಿ ಮಕ್ಕಳಲ್ಲಿ ಬದಲಾವಣೆ ತರಲು ಪ್ರಯತ್ನಿಸಬೇಕು ಎಂದರು.

ಡಾ. ಶಿವರಾಮ ಕಾರಂತರ ನಲಿ-ಕಲಿ ಕಲ್ಪನೆಯು ಇಂದಿನ ಕಾಲಕ್ಕೆ ಪ್ರಸ್ತುತವಾಗಿದ್ದು ಪೋಷಕರು ಮತ್ತು ಅಧ್ಯಾಪಕರು ಮಕ್ಕಳ ಪ್ರತಿಭೆಯನ್ನು ಗುರುತಿಸುವ ಮಹತ್ತರವಾದ ಕಾರ್ಯವನ್ನು ಮಾಡಬೇಕಾಗಿದೆ. ಇಂತಹ ಶಿಬಿರವು ನೂರಾರು ವಿದ್ಯಾರ್ಥಿಗಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಅನಾವರಣಗೊಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಪಾಲಿಕೆ ಸದಸ್ಯೆ ಅಖಿಲಾ ಆಳ್ವ ಮಾತನಾಡಿ, ಮಕ್ಕಳಿಗೆ ಟಿ.ವಿ ಹಾಗೂ ಇನ್ನಿತರ ಮಾಧ್ಯಮದಿಂದ ಸಿಗುವುದಕ್ಕಿಂತ ಹೆಚ್ಚಿನ ಅನುಭವ ಇಂತಹ ಶಿಬಿರದಿಂದ ಲಭಿಸುತ್ತದೆ. ಇಂತಹ ಶಿಬಿರದ ಉಪಯೋಗವನ್ನು ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕೋಸ್ಕರ ಉಪಯೋಗಿಸಿಕೊಳ್ಳಬೇಕು. ಬೇರೆ ಬೇರೆ ಸಂಪನ್ಮೂಲ ವ್ಯಕ್ತಿಗಳಿಂದ ಒಳ್ಳೆಯ ವಿಚಾರಗಳು ಮಕ್ಕಳಿಗೆ ಪ್ರಯೋಜನವಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ ನಾೈಕ್ ವಹಿಸಿದ್ದರು. ವೇದಿಕೆಯಲ್ಲಿ ಆಡಳಿತಾಧಿಕಾರಿ ಬೈಕಾಡಿ ಜನಾರ್ದನ ಆಚಾರ್, ಆಡಳಿತ ಮಂಡಳಿ ಸದಸ್ಯೆ ಸಗುಣ ಸಿ. ನಾೈಕ್, ಪ್ರಧಾನ ಸಲಹೆಗಾರ ರಮೇಶ.ಕೆ, ಅಭಿವೃದ್ಧಿ ಅಧಿಕಾರಿ ನಸೀಮ್ ಬಾನು ಮತ್ತು ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿದ್ದರು. ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್ ಸ್ವಾಗತಿಸಿದರು. ಶಶಿಕಲಾ ವಂದಿಸಿದರು.

Pages