ವಿಶ್ವ ತುಳು ಸಮ್ಮೇಳನ ದುಬಾಯಿ : ತುಳುನಾಡಿನ ಚರಿತ್ರೆಯಲ್ಲಿ ಐತಿಹಾಸಿಕ ಸಮಾವೇಶ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವಿಶ್ವ ತುಳು ಸಮ್ಮೇಳನ ದುಬಾಯಿ : ತುಳುನಾಡಿನ ಚರಿತ್ರೆಯಲ್ಲಿ ಐತಿಹಾಸಿಕ ಸಮಾವೇಶ

Share This
BUNTS NEWS, ಯುಎಇ: ಎನ್ಎಂಸಿ ಸಮೂಹ ಸಂಸ್ಥೆಯ ಸ್ಥಾಪಕ ಮತ್ತು ಕಾರ್ಯಾಧ್ಯಕ್ಷ ಡಾ| ಬಿ.ಆರ್ ಶೆಟ್ಟಿ ಘನಾಧ್ಯಕ್ಷತೆಯಲ್ಲಿ ಕೊಲ್ಲಿ ರಾಷ್ಟ್ರದಲ್ಲಿನ ತುಳುವರ ಒಕ್ಕೂಟ, ಸಾಗರೋತ್ತರ ತುಳುವರ ಕೂಟದ ಮುಖ್ಯಸ್ಥ ಹಾಗೂ ದುಬಾಯಿ ತುಳು ಸಮ್ಮೇಳನದ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ಮತ್ತು ಬಳಗದ ಸಾಂಘಿಕತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲಭಾರತ ತುಳು ಒಕ್ಕೂಟ ಇವುಗಳ ಸಹಯೋಗದಲ್ಲಿ ಆಯೋಜಿಸ ಲಾದ ದ್ವಿದಿನಗಳ `ವಿಶ್ವ ತುಳು ಸಮ್ಮೇಳನ ದುಬಾಯಿ' ಬಾರಿ ತುಳು ಸಾಮ್ರಾಜ್ಯದ ಚರಿತ್ರೆಯಲ್ಲಿ ಒಂದು ಐತಿಹಾಸಿಕ ಸಮಾವೇಶ ನಡೆಸಲಿದೆ.
ವಿಶ್ವ ತುಳು ಸಮ್ಮೇಳನದ ಎರಡು ದಿನಗಳಲ್ಲಿ ವಿಶ್ವದಾದ್ಯಂತದ ತುಳುವರು ಭಾಗವಹಿಸುವರು. ಸಮ್ಮೇಳನದಲ್ಲಿ ತುಳು ರಂಗಭೂಮಿ ಚಲನಚಿತ್ರ ಗೋಷ್ಠಿ, ತುಳು ಸಾಹಿತ್ಯ, ಮಾಧ್ಯಮ, ಕವಿ  ಹಾಸ್ಯ ಗೋಷ್ಠಿಗಳು ನಡೆಯಲಿವೆ. ಪರಶುರಾಮನ ಸೃಷ್ಠಿಯ ತುಳುನಾಡು ಹೆಸರಾಂತ ತವರೂರ ಕರಾವಳಿಯ ವಿವಿಧ ಕಲಾ ತಂಡಗಳ ಸುಮಾರು  200ಕ್ಕೂ ಅಧಿಕ ಕಲಾವಿದರು  ಪಾಲ್ಗೊಂಡು ಸಾಂಸ್ಕøತಿಕ ತುಳು ವೈವಭವನ್ನು ನಡೆಸಲಿವೆ.

ಚಕ್ರಪಾಣಿ ನೃತ್ಯ ಕಲಾ ಕೇಂದ್ರ ಅತ್ತಾವರ `ತುಳುನಾಡ ಪರ್ಬೊಲು' ನೃತ್ಯ ರೂಪಕ, ಯುಎಇ  ತುಳುವ ಬಳಗವು  'ಪಿಲಿನಲಿಕೆ', ಯುಎಇ ತುಳುವ ಇದರ ಯಕ್ಷಮಿತ್ರ ಮಂಡಳಿ `ತುಳು ಯಕ್ಷಗಾನ', ಪಟ್ಲ ಸತೀಶ್ ಶೆಟ್ಟಿ ಬಳಗವು `ಯಕ್ಷನಾಟ್ಯ-ಗಾನ ವೈಭವ', ಮಂಗಳೂರು ತಂಡವು   ತಾಳಮದ್ದಳೆ, ಸನಾತನ ನಾಟ್ಯಾಲಯವು `ಸತ್ಯನಾಪುರತ ಸಿರಿ' ತುಳು ನೃತ್ಯ ರೂಪಕ, ನಾಟ್ಯನಿಕೇತನ ಉಳ್ಳಾಲ ತಂಡವು `ಏಳ್ವೆರ್ ದೈವೆರ್' ತುಳುನಾಟ್ಯ ರೂಪಕ, ಗಮ್ಮತ್ ಕಲಾವಿದರು ದುಬೈ ತಂಡವು `ತುಳು ಹಾಸ್ಯ ಪ್ರಹಸನ', ಡಾ| ರಾಜೇಶ್ ಆಳ್ವ ಬದಿಯಡ್ಕ ತಂಡವು `ಪಾಡ್ದನೆ ಮೇಳ ಬೊಕ್ಕ ಮಾಂಕಾಳಿ ನಲಿಕೆ', ಪ್ರಶಂಸಾ ಕಾಪು ಬಳಗವು `ಬಲೆ ತೆಲಿಪಾಲೆ', ಉಮೇಶ್ ಮಿಜಾರ್ ತಂಡವು `ಬಲೆ ತೆಲಿಪಾಲೆ', ಯುಎಇ ತುಳುವೆರ್ ತಂಡ `ತುಳು ರಸಮಂಜರಿ' ಸೇರಿದಂತೆ ತಾಳಮದ್ದಲೆ, ಯಕ್ಷನಾಟ್ಯ ವೈಭವ, ಭೂತರಾಧನೆ, ತುಳು, ರಸಮಂಜರಿ, ಇತ್ಯಾದಿ ತುಳುನಾಡ ಸಾಂಸ್ಕøತಿಕ ಕಾರ್ಯಕ್ರಮಗಳು ಪ್ರಸ್ತುತಗೊಳ್ಳಲಿವೆ.

ಅಬುಧಾಬಿ ಶಾರ್ಜಾ, ದುಬೈ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿನ ವಿವಿಧ ಘಟಕಗಳು ತುಳು ಜಾನಪದ ನೃತ್ಯ ಮತ್ತು ತುಳು ಸಾಂಸ್ಕøತಿಕ ವಸ್ತು ಪ್ರದರ್ಶಿಸಲಿದ್ದು ಇದು ಸಮ್ಮೇಳನದ ಕೇಂದ್ರ ಬಿಂದುವಾಗಲಿದೆ. ದೈವಾರಾಧನೆ, ಭೂತಾರಾಧನೆ, ಯಕ್ಷಗಾನ, ಹಾಸ್ಯ, ಚುಟುಕು, ಕವನ, ತುಳುರಂಗ ಭೂಮಿ, ತುಳು ಚಲನಚಿತ್ರ, ಆನಿವಾಸಿ ತುಳುವರು, ಪರದೇಶದ ತುಳುವರ ಗೋಷ್ಠಿಗಳೂ ನಡೆಯಲಿವೆ. ದುಬಾಯಿಯಲ್ಲಿನ ದೇವೇಶ್ ಆಳ್ವ ಇವರ ನೇತೃತ್ವದಲ್ಲಿ ಬಗೆಬಗೆಯ ತಿಂಡಿ ತಿಸಿಸುಗಳನ್ನು ಉಣಬಡಿಸಲಿದ್ದಾರೆ.

ತುಳುನಾಡು, ತುಳುವರ  ಸಂಸ್ಕøತಿ, ಸಮೃದ್ಧಿಯ ಸಂಕೇತ. ತುಳುವರುಎಲ್ಲೇ ನೆಲೆಯಾದರೂ ತುಳುನಾಡ ಮಣ್ಣಿನ ಸುವಾಸನೆ, ಬಾಂಧವ್ಯವನ್ನು ಬಿಟ್ಟಿರಲಾರರು.   ಅಂದರೆ   ತೌಳವ ನೆಲದ ವೈಶಿಷ್ಟ್ಯವೇ ಅಂತಹದ್ದು. ಸಮ್ಮೇಳನದಲ್ಲಿ ಸುಮಾರು 4000 ಜನರು ಪಾಲ್ಗೊಳ್ಳಲಿರುವ ಭವ್ಯ ವೈಭವದ ವಿಶ್ವ ತುಳು ಸಮ್ಮೇಳನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಉದ್ಘಾಟಿಸಲಿದ್ದಾರೆ. ಅನಿವಾಸಿ ಭಾರತೀಯ ಉದ್ಯಮಿ ರೊನಾಲ್ಡ್ ಕುಲಾಸೊ ಸೇರಿದಂತೆ ನೂರಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಸಮ್ಮೇಳನದ ಪ್ರಧಾನ ಸಂಘಟಕ ಸರ್ವೋತ್ತಮ ಶೆಟ್ಟಿ ಅಬುಧಾಬಿ ತಿಳಿಸಿದ್ದಾರೆ.

Pages