ಪುಂಡಿ ಪಣವು ತುಳು ಸಿನಿಮಾ ಧ್ವನಿ ಸುರುಳಿ ಬಿಡುಗಡೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪುಂಡಿ ಪಣವು ತುಳು ಸಿನಿಮಾ ಧ್ವನಿ ಸುರುಳಿ ಬಿಡುಗಡೆ

Share This
ಮಂಗಳೂರು: ತವಿಷ್ ಎಂಟರ್ಪ್ರೈಸಸ್ ಲಾಂಛನದಲ್ಲಿ ರಾಮಕೃಷ್ಣ ಶೆಟ್ಟಿ ನಿರ್ಮಿಸಿದ ಗಂಗಾಧರ ಕಿರೋಡಿಯನ್ ನಿರ್ದೇಶನದ ಪುಂಡಿಪಣವು ತುಳು ಚಲನಚಿತ್ರದ ಧ್ವನಿಸುರುಳಿ ಮತ್ತು ಟ್ರೈಲರ್ ಬಿಡುಗಡೆ ಸಮಾರಂಭವು ಮಂಗಳೂರಿನ ಪುರಭವನದಲ್ಲಿ ಜರಗಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ .ಸಿ. ಭಂಡಾರಿ ಅವರು ಧ್ವನಿಸುರುಳಿಯನ್ನು  ಬಿಡುಗಡೆಗೊಳಿಸಿದರು. ತುಳು ಭಾಷೆಯ ಬೆಳವಣಿಗೆಗೆ ತುಳು ಸಿನಿಮಾರಂಗ ಪೂರಕವಾಗಿ ಕೆಲಸ ಮಾಡುತ್ತಿದೆ. ನಮ್ಮ ಸಂಸ್ಕøತಿ, ಆಚಾರ, ವಿಚಾರದ ಬಗ್ಗೆ ಇಂದು ತುಳುಚಲನಚಿತ್ರಗಳು ಬೆಳಕು ಚೆಲ್ಲುವ ಕೆಲಸ ಮಾಡುತ್ತಿದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ನಿರ್ಮಾಪಕ, ನಿರ್ದೇಶಕ ರಿಚರ್ಡ್ ಕ್ಯಾಸ್ಟಲಿನೊ ಮಾತನಾಡಿ, ತುಳು ಸಿನಿಮಾ ನಿರ್ಮಿಸುವುದು ಸುಲಭ. ಆದರೆ ಅದನ್ನು ಜನರ ಬಳಿ ಕೊಂಡೊಯ್ಯಲು ಕಷ್ಟವಾಗುತ್ತಿದೆ. ಥಿಯೇಟರ್ ಸಮಸ್ಯೆ ಎದುರಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತುಳು ಚಲನಚಿತ್ರ ನಿರ್ಮಾಪಕರ ಸಂಘ ಕೆಲಸ ಮಾಡಬೇಕೆಂದರು.
 ಡಾ. ಸಂಜೀವ ದಂಡೆಕೇರಿ ಮಾತನಾಡಿ, ಗಂಗಾಧರ ಕಿರೋಡಿಯನ್ ಅವರು ಭೂತಾರಾಧನೆಯ ಕುರಿತು ಸಾಮಾಜಿಕ ಕಳಕಳಿ ಇರುವಂತಹ ಸಿನಿಮಾಗಳನ್ನು ನಿರ್ಮಿಸಿ ಜನ ಮನ್ನಣೆ ಗಳಿಸುತ್ತಿದ್ದಾರೆ ಎಂದರು.

 ಒಂದು ಸಿನಿಮಾವನ್ನು ಕಡಿಮೆ ಬಜೆಟ್ನಲ್ಲಿ ನಿರ್ಮಿಸಿ ನಿರ್ಮಾಪಕರ ಪಾಲಿಗೆ ಉತ್ತಮ ನಿರ್ದೇಶಕ ಎಂಬುದನ್ನು ಗಂಗಾಧರ ಕಿರೋಡಿಯನ್ ತೋರಿಸಿಕೊಟ್ಟಿದ್ದಾರೆ ಎಂದು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ತಿಳಿಸಿದರು.
ವೇದಿಕೆಯಲ್ಲಿ ಕಿಶೋರ್ ಡಿ ಶೆಟ್ಟಿ, ವಿಜಯಕುಮಾರ್ ಕೊಡಿಯಾಲ್ಬೈಲ್, ಸುಹಾಸ್ಹೆಗ್ಡೆ, ಕೀರ್ತಿರಾಜ್ ಶೆಟ್ಟಿ ಬೆಂಗಳೂರು, ವಿ.ಜಿ.ಪಾಲ್, ನಿರ್ದೇಶಕ ಗಂಗಾಧರ ಕಿರೋಡಿಯನ್, ನಿರ್ಮಾಪಕ ರಾಮಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Pages