ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಆಯ್ಕೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಪ್ರತಾಪಚಂದ್ರ ಶೆಟ್ಟಿ ಆಯ್ಕೆ

Share This
BUNTS NEWS, ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಪ್ರತಾಪ ಚಂದ್ರ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.
ಉಭಯ ಸದನಗಳಲ್ಲಿಯೇ ಅತ್ಯಂತ ಹಿರಿಯರಾದ ಪ್ರತಾಪಚಂದ್ರ ಶೆಟ್ಟಿ ಅವರು ಸದಾಕಾಲ ಜನಪರ ಚಿಂತನೆಗಳನ್ನೇ ಯೋಚಿಸಿ ಅವುಗಳ ಕಾರ್ಯರೂಪಕ್ಕಾಗಿ ಶ್ರಮಿಸುತ್ತಿರುವ ನೈಜ ಜನಪ್ರತಿನಿಧಿಯಾಗಿದ್ದು ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿರುವುದು ಬಂಟ ಸಮಾಜಕ್ಕೆ ಹೆಮ್ಮೆಯ ಸಂಗತಿ.

ಪ್ರತಾಪ ಚಂದ್ರ ಶೆಟ್ಟಿ ಅವರ ಕಿರು ಪರಿಚಯ: 1949ರ ಸೆ.4ರಂದು ದಿ.ಹುಯ್ಯಾರು ಪಟೇಲ್ ಹಿರಿಯಣ್ಣ ಶೆಟ್ಟಿ - ದಿ.ಕೊಳ್ಕೆಬೈಲ್ ಗುಲಾಬಿ ಶೆಟ್ಟಿ ಅವರ ಮಗನಾಗಿ ಜನಿಸಿದರು. ಬಿ. ಪದವಿಧರರಾದ ಪ್ರತಾಪಚಂದ್ರ ಶೆಟ್ಟಿ ಅವರು ವಿಜಯಾ ಬ್ಯಾಂಕ್ ಉದ್ಯೋಗಿಯಾಗಿ ಪೂನಾ ಹಾಗೂ ಶಿವಮೊಗ್ಗದಲ್ಲಿ ಸೇವೆ ಸಲ್ಲಿಸಿದ್ದಾರೆ. ತಂದೆಯ ನಿಧನದ ನಂತರ ಬ್ಯಾಂಕ್ ಉದ್ಯೋಗ ತ್ಯಜಿಸಿ ಕೃಷಿ ಕ್ಷೇತ್ರದಲ್ಲಿ ಭಾಗಿ. ಪತ್ನಿ ಶ್ರೀಮತಿ ಲಕ್ಷ್ಮೀ ಶೆಟ್ಟಿ ಹಾಗೂ ಮಗಳು ಕು.ತ್ರಯಾಂಬಿಕಾ ಶೆಟ್ಟಿ.

ರಾಜಕೀಯ ಕ್ಷೇತ್ರದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಕುಂದಾಪುರ ಯುವ ಕಾಂಗ್ರೆಸ್ ಅಧ್ಯಕ್ಷ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ಕೆಪಿಸಿಸಿ ಉಪಾಧ್ಯಕ್ಷ, ಏಐಸಿಸಿ ಸದಸ್ಯ, 1983-1999ರ ವರೆಗೆ 4 ಭಾರಿ ಕುಂದಾಪುರ ಶಾಸಕರಾಗಿ, 3 ಭಾರಿ . ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

Pages