ಮುಲ್ಕಿ ಸುಂದರರಾಮ ಶೆಟ್ಟಿ ಸಭಾಂಗಣ ನಿರ್ಮಾಣಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 10 ಲಕ್ಷ ರೂ. ದೇಣಿಗೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮುಲ್ಕಿ ಸುಂದರರಾಮ ಶೆಟ್ಟಿ ಸಭಾಂಗಣ ನಿರ್ಮಾಣಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 10 ಲಕ್ಷ ರೂ. ದೇಣಿಗೆ

Share This
BUNTS NEWS, ಮುಲ್ಕಿ: ಸಾವಿರಾರು ಕುಟುಂಬಗಳಿಗೆ ಅನ್ನದಾತ ದಿ. ಮುಲ್ಕಿ ಸುಂದರರಾಮ ಶೆಟ್ಟಿಯವರ ಜನ್ಮ ಶತಮಾನೋತ್ಸವದ ಸವಿ ನೆನಪಿಗಾಗಿ ಮುಲ್ಕಿಯಲ್ಲಿ ನಿರ್ಮಾಣವಾಗುತ್ತಿರುವ ಮುಲ್ಕಿ ಸುಂದರರಾಮ ಶೆಟ್ಟಿ ಸಭಾಂಗಣಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟವು 10 ಲಕ್ಷ ರೂ. ದೇಣಿಗೆ ನೀಡಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು, ಒಕ್ಕೂಟದ ವತಿಯಿಂದ 10 ಹತ್ತು ಲಕ್ಷ ರೂ. ಚೆಕ್’ನ್ನು ಮೂಲ್ಕಿ ಸುಂದರರಾಮ ಶೆಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಸೆಂಟ್ರಲ್ ಫಂಡ್ ರೈಸಿಂಗ್ ಮತ್ತು ಪ್ರೊಜೆಕ್ಟ್ ಇಂಪ್ಲಿಮೆಂಟೇಷನ್ ಕಮಿಟಿಯ ಸಂಚಾಲಕ ಕೆ ಪ್ರಕಾಶ್ ಶೆಟ್ಟಿಯವರಿಗೆ ಟ್ರಸ್ಟಿನ ಮೂಲ್ಕಿಯ ಉದ್ದೇಶಿತ ಯೋಜನೆಯ ನಿವೇಶನದ ಕಚೇರಿಯಲ್ಲಿ ಹಸ್ತಾಂತರಿಸಿದರು. ನಂತರ ಯೋಜನೆಯ ಪ್ರಗತಿಯನ್ನು ವೀಕ್ಷಿಸಿ ಶುಭ ಹಾರೈಸಿದರು.

ಸಂದರ್ಭ ಒಕ್ಕೂಟದ ಕಾರ್ಯದರ್ಶಿ ವಿಜಯಪ್ರಸಾದ ಆಳ್ವ, ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ, ಜೊತೆ ಕಾರ್ಯದರ್ಶಿ ಜಯಕರ್ ಶೆಟ್ಟಿ ಇಂದ್ರಾಳಿ, ನಿರ್ದೇಶಕ ವಿಶ್ವನಾಥ ಶೆಟ್ಟಿ ಕರ್ನಿರೆ ಮತ್ತು ಸುಕುಮಾರ್ ಶೆಟ್ಟಿಯವರು ಉಪಸ್ಥಿತರಿದ್ದರು.

Pages