ಬಂಟರ ಮಾತೃ ಸಂಘದಿಂದ ಡಾ. ಡಿ.ಕೆ. ಚೌಟ, ಸೀತಾರಾಮ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ, ನುಡಿನಮನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಮಾತೃ ಸಂಘದಿಂದ ಡಾ. ಡಿ.ಕೆ. ಚೌಟ, ಸೀತಾರಾಮ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ, ನುಡಿನಮನ

Share This
BUNTS NEWS, ಮಂಗಳೂರು:  ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ನಗರದ ಬಂಟ್ಸ್ ಹಾಸ್ಟೆಲ್’ನಲ್ಲಿ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆಯಲ್ಲಿ ಅಗಲಿದ ಹಿರಿಯ ನ್ಯಾಯವಾದಿ ಸೀತಾರಾಮ ಶೆಟ್ಟಿ ಹಾಗೂ ಖ್ಯಾತ ಸಾಹಿತಿ ದರ್ಬೆ ಡಾ. ಕೃಷ್ಣಾನಂದ ಚೌಟ ಇವರಿಗೆ ನುಡಿನಮನದೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸೀತಾರಾಮ ಶೆಟ್ಟಿ ಅವರು ನ್ಯಾಯವಾದಿಯಾಗಿ ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿಯಾಗಿ ಎಲ್ಲಾ ಸಮಾಜದ ಪ್ರೀತಿಗೆ ಪಾತ್ರರಾಗಿದ್ದರು. ಡಿ.ಕೆ. ಚೌಟರು  ಬೆಂಗಳೂರು ಬಂಟರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುವುದರ ಜತೆಗೆ ಸಮಾಜದ ವಿವಿಧ ರಂಗಗಳಲ್ಲಿ ಮಹತ್ವದ ಸಾಧನೆ ನೀಡಿ ಕೊಡುಗೆ ನೀಡಿದವರು ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು.

ಖ್ಯಾತ ನ್ಯಾಯವಾದಿ ಸೀತಾರಾಮಶೆಟ್ಟಿ ಅವರು ಮಹಾಬಲ ಭಂಡಾರಿಯವರ ಶಿಷ್ಯರಾಗಿ ಗುರುವಿನಂತೆ ಖ್ಯಾತ ನ್ಯಾಯವಾದಿಯಾಗಿ ವೃತ್ತಿಯಲ್ಲಿ ತನ್ನ ಕಕ್ಷಿದಾರನಿಗೆ ನ್ಯಾಯ ಒದಗಿಸಿಕೊಡುವಲ್ಲಿ ಶ್ರಮ ವಹಿಸಿದ್ದರು. ತಮ್ಮ ಸಾಧನೆಯ ಮೂಲಕ  ನ್ಯಾಯಾಂಗ ಕ್ಷೇತ್ರದಲ್ಲಿ ಸರಕಾರದ ವಿವಿಧ ಆಯೋಗಗಳಲ್ಲಿ ಅಭಿಯೋಜಕರಾಗಿಯೂ ನಿಯೋಜನೆಗೊಂಡು  ರಾಷ್ಟ್ರಮಟ್ಟದಲ್ಲಿ ಶ್ರೇಷ್ಠ ಸಾಧನೆ ಮಾಡಿದ ಸರಳ ಸಜ್ಜನಿಕೆಯ ನಾಯಕತ್ವದ ಗುಣ ಹೊಂದಿದ್ದ ವ್ಯಕ್ತಿಯಾಗಿದ್ದರು ಎಂದು ನ್ಯಾಯವಾದಿ ಕಳ್ಳಿಗೆ ತಾರಾನಾಥ ಶೆಟ್ಟಿ ಹೇಳಿದರು.

ಸಮಾರಂಭದಲ್ಲಿ ಉಪನ್ಯಾಸಕ ಭಾಸ್ಕರ ರೈ ಕುಕ್ಕುವಳ್ಳಿ ಮಾತನಾಡಿ, ಕಲೆ, ಸಾಹಿತ್ಯ, ಕೃಷಿ ಸೇರಿದಂತೆ ಸಮಾಜದ ವಿವಿಧ ರಂಗದಲ್ಲಿ ಸಾಧನೆ ಮಾಡಿದ ಡಿ.ಕೆ. ಚೌಟರು ಮೇರು ವ್ಯಕ್ತಿತ್ವವನ್ನು ಹೊಂದಿದ್ದರು. ಸಮಾಜದ ಎಲ್ಲಾ ಜಾತಿ, ಧರ್ಮದ ಜನರ ಪ್ರೀತಿಗೆ ಪಾತ್ರರಾಗಿದ್ದ ಚೌಟರು ಬಹುಮುಖ ಪ್ರತಿಭೆಯ ವ್ಯಕ್ತಿತ್ವವನ್ನು ಹೊಂದಿದ್ದರು ಎಂದರು.

ಡಿ.ಕೆ. ಚೌಟರ ನಿಕಟವರ್ತಿ ಸತೀಶ್ ಅಡಪ ಮಾತನಾಡಿ, ಕಾಸರಗೋಡಿನ ಮೀಯಪದವಿನಲ್ಲಿ ಒಂದು ಕಡೆ ಮಂಜಲ್ತೋಡಿಯಲ್ಲಿ ಇನ್ನೊಂದು ಕಡೆ ಕಳ್ಳಿಗೆ ನಡುವೆ ಉಪ್ಪಳ ನದಿ ಹರಿಯುವ ಪ್ರದೇಶ ಅಲ್ಲಿ ದರ್ಬೆ ಎನ್ನುವ ಪ್ರದೇಶದಲ್ಲಿ ಕೃಷ್ಣಾನಂದ ಚೌಟರು ಕೃಷಿ ಭೂಮಿಯನ್ನು ಖರೀದಿಸಿ ಕೃಷಿಯಲ್ಲಿ ಮಹತ್ವದ ಸಾಧನೆ ಮಾಡಿದ ಸಾಧಕ, ಅಲ್ಲದೇ ರಂಗಭೂಮಿ, ಸಾಹಿತ್ಯ ಕ್ಷೇತ್ರದಲ್ಲಿ  ಮಹತ್ವದ ಕೃತಿ ರಚಿಸಿ ಕೊಡುಗೆ ನೀಡಿದ ವ್ಯಕ್ತಿಯಾಗಿದ್ದರು ಎಂದು ನುಡಿನಮನ ಸಲ್ಲಿಸಿದರು.

ಸಮಾರಂಭದಲ್ಲಿ ಸಂಘದ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ ಶೆಟ್ಟಿ, ಮಂಗಳೂರು ತಾಲೂಕು ಸಮಿತಿ ಸಂಚಾಲಕ ಜಯರಾಮ ಸಾಂತ, ಉಪ ಸಂಚಾಲಕ ಉಮೇಶ್ ರೈ ಪದವು ಮೇಗಿನ ಮನೆ, ಮಂಗಳೂರು ತಾಲೂಕು  ಬಂಟರ ಸಂಘದ ಅಧ್ಯಕ್ಷ ನಿಟ್ಟೆಗುತ್ತು ರವಿರಾಜ್ ಶೆಟ್ಟಿ, ಶೆಡ್ಡೆ ಮಂಜುನಾಥ್ ಭಂಡಾರಿ, ನ್ಯಾಯವಾದಿ  ಮಹಾಬಲ ಶೆಟ್ಟಿ, ಮೋನಪ್ಪ ಶೆಟ್ಟಿ, ಡಾ. ಆಶಾಜ್ಯೋತಿ ರೈ, ಸೀತಾರಾಮ ಶೆಟ್ಟಿಯವರ ಪುತ್ರ ಮನೋಜ್ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Pages