ಕರ್ನಿರೆ ವಿಶ್ವನಾಥ ಶೆಟ್ಟಿ ಅವರಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕರ್ನಿರೆ ವಿಶ್ವನಾಥ ಶೆಟ್ಟಿ ಅವರಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Share This
BUNTS NEWS, ಕಿನ್ನಿಗೋಳಿ: 2019-20ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿಗಳಿಗೆ 24ನೇ ವರ್ಷದ ಉಚಿತ ನೋಟ್ ಪುಸ್ತಕ ವಿತರಣಾ ಕಾರ್ಯಕ್ರಮವು ಜೂ.4ರಂದು ಸ.ಹಿ.ಪ್ರಾ.ಶಾಲೆ ಕರ್ನಿರೆಯಲ್ಲಿ ನಡೆಯಿತು. ಕಳೆದ 23 ವರ್ಷಗಳಿಂದ ಕರ್ನಿರೆ ಶಾಲಾ ಮಕ್ಕಳಿಗೆ ಉಚಿತವಾಗಿ ಬರೆಯುವ ಪುಸ್ತಕಗಳನ್ನು ಕರ್ನಿರೆ ಫೌಂಡೇಷನ್ ಶ್ರೀ ವಿಶ್ವನಾಥ ಶೆಟ್ಟಿ ಕರ್ನಿರೆ ಅವರು ನೀಡುತ್ತಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ಪಂಚಾಯತ್ ಸದಸ್ಯೆಯಾದ ಶ್ರೀಮತಿ ರಶ್ಮಿ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಳಕುಂಜೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಶೆಟ್ಟಿ ಹಾಗೂ ಶ್ರೀಮತಿ ಜಯಲಕ್ಷ್ಮಿ ಉಪಸ್ಥಿತರಿದ್ದರು. ಶಾಲಾ ಹಿತೈಷಿಗಳಾದ ಹರಿಶ್ಚಂದ್ರ ಶೆಟ್ಟಿ, ಮೋಹನ ಶೆಟ್ಟಿ, ರವೀಂದ್ರ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಹಾಗೂ ದಾನಿಗಳಾದ ಪ್ರಭಾಕರ ಶೆಟ್ಟಿ ಹಾಜರಿದ್ದರು. ಶಾಲಾ ಎಸ್ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೋಷಕರು, ಶಾಲಾ ಮುಖ್ಯೋಪಾಧ್ಯಾಯಿನಿ, ಶಿಕ್ಷಕ ವೃಂದದವರು, ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಇದ್ದರು.

ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಪಿ ಸ್ವಾಗತಿಸಿ ವಂದಿಸಿದರು. ಸಹ ಶಿಕ್ಷಕಿಯಾದ ಶ್ರೀಮತಿ ಧರ್ಮಾವತಿ ಕಾರ್ಯಕ್ರಮ ನಿರೂಪಿಸಿದರು.

Pages