ಜೂ.29: ತುಳುಭವನದಲ್ಲಿ ‘ತುಳು ಲಿಪಿ ಪರಿಚಯ’ ಪುಸ್ತಕ ಬಿಡುಗಡೆ ಸಮಾರಂಭ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜೂ.29: ತುಳುಭವನದಲ್ಲಿ ‘ತುಳು ಲಿಪಿ ಪರಿಚಯ’ ಪುಸ್ತಕ ಬಿಡುಗಡೆ ಸಮಾರಂಭ

Share This
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ತುಳುಭವನದಸಿರಿಚಾವಡಿಯಲ್ಲಿ ಜೂನ್ 29 ಶನಿವಾರದಂದು ಅಪರಾಹ್ನ 3ರಕ್ಕೆ ಅಕಾಡೆಮಿ ಪ್ರಕಟಿತ ಡಾ.ರಾಧಾಕೃಷ್ಣ ಬೆಳ್ಳೂರು ಅವರತುಳು ಲಿಪಿ ಪರಿಚಯ’ (ಪರಿಷ್ಕೃತ) ಮತ್ತು ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾದ ಶ್ರೀಮತಿ ಎಂ.ಜಾನಕಿ ಬ್ರಹ್ಮಾವರ ಅವರದೂಲೊಪ್ಪ’ (ಅಮ್ಮ ಪ್ರಕಾಶನ ಕಟಪಾಡಿ) ಕೃತಿ ಬಿಡುಗಡೆ ಸಮಾರಂಭವು ನಡೆಯಲಿರುವುದು.
ಸಂದರ್ಭ ಅಕಾಡೆಮಿಯು ಬೆಳ್ಳಿಹಬ್ಬದ ಸವಿನೆನಪಿಗಾಗಿ ಹಮ್ಮಿಕೊಂಡ ತುಳು ಲೇಖನ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ . ಸಿ. ಭಂಡಾರಿ ವಹಿಸಲಿದ್ದಾರೆ. ಹಿರಿಯ ವಿದ್ವಾಂಸರಾದ ಡಾ.ಪಾದೆಕಲ್ಲು ವಿಷ್ಣುಭಟ್ ಮತ್ತು ಹಿರಿಯ ಸಾಹಿತಿ ಶ್ರೀಮತಿ ಬಿ. ರೋಹಿಣಿ ಕೃತಿಗಳನ್ನು ಬಿಡುಗಡೆ ಮಾಡಲಿರುವರು.

ಸಾರ್ವಜನಿಕರು ಹಾಗೂ ಪುಸ್ತಕಾಭಿಮಾನಿಗಳು ಕಾರ್ಯಕ್ರಮದಲ್ಲಿ ಅಧಿಕ ಸಂಖ್ಯೆಯಲ್ಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅಕಾಡೆಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ.ಬಿ ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Pages