ಬಂಟರ ಮಾತೃ ಸಂಘದಿಂದ ಪ್ರತಿಭಾ ಪುರಸ್ಕಾರ : ಆರ್ಥಿಕ ಪ್ರೋತ್ಸಾಹ ಧನ ವಿತರಣೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಮಾತೃ ಸಂಘದಿಂದ ಪ್ರತಿಭಾ ಪುರಸ್ಕಾರ : ಆರ್ಥಿಕ ಪ್ರೋತ್ಸಾಹ ಧನ ವಿತರಣೆ

Share This
BUNTS NEWS, ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘ(ರಿ) ಮಂಗಳೂರು ತಾಲೂಕು ಸಮಿತಿ ಆಶ್ರಯದಲ್ಲಿ 2018-19ನೇ ಸಾಲಿನ ಎಸ್ಎಸ್ಎಲ್ಸಿ  ಮತ್ತು  ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ  ಅಂಕ ಗಳಿಸಿದ  ವಿದ್ಯಾರ್ಥಿಗಳಿಗೆ ಆರ್ಥಿಕ ಪ್ರೋತ್ಸಾಹ ಧನ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ  ಕಾರ್ಯಕ್ರಮ ಬಂಟ್ಸ್  ಹಾಸ್ಟೆಲ್ ಅಮೃತೋತ್ಸವ  ಕಟ್ಟಡದ ಸಭಾ ಭವನದಲ್ಲಿ ಜರಗಿತು.
ಮಂಗಳೂರು ಗುರದೇವ ಎಜುಕೇಶನ್  ಫೌಂಡೇಶನ್ ಅಧ್ಯಕ್ಷ  ಸಿಎ ರಾಮ ಮೋಹನ ರೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರತಿಭಾ ಪುರಸ್ಕಾರವು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಲು  ಪ್ರೇರಣೆಯಾಗಲಿದೆ. ವಿದ್ಯೆ ಕಲಿತು ವಿದ್ಯಾವಂತರಾದರೆ  ಎಲ್ಲೂ ಬದುಕು ಸಾಗಿಸಬಹುದು ಎಂದು  ಸಿಎ ರಾಮ ಮೋಹನ್ ರೈ ತಿಳಿಸಿದರು.

ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಶ್ರವಣ್ ಶೆಟ್ಟಿ, ಪೂರ್ವಿಶ್ ರೈ, ಕಾರ್ತಿಕ್ ಶೆಟ್ಟಿ ಹಾಗೂ ಎಸ್ಎಸ್ಎಲ್ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ರಾಜೇಶ್ವರಿ  ಜೆ ಶೆಟ್ಟಿ, ಸಹಜ ಆಳ್ವ, ಪ್ರೇರಣಾ  ಶೆಟ್ಟಿ, ಪ್ರತೀತ ಪಿ ಶೆಟ್ಟಿ, ದೇವಿಕಾ ಸಂತೋಷ್ ರೈ, ಶಿವಾನಿ ರೈ,  ವೈಷ್ಣವಿ  ಜೆ ಶೆಟ್ಟಿ, ಅನುಶ್ರೀ ರೈ, ಆಶಯ್ ಶೆಟ್ಟಿ, ನಿಖಿಲ್ ಶೆಟ್ಟಿ, ಪ್ರಖ್ಯಾತ್ ವೈ. ಬಿ ಹಾಗೂ  45 ಮಂದಿ  ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆರ್ಥಿಕ ಪ್ರೋತ್ಸಾಹ ಧನ ವಿತರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ  ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್  ರೈ ಮಾಲಾಡಿ  ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಂಟರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ, ಕೋಶಾಧಿಕಾರಿ ರವೀಂದ್ರನಾಥ  ಎಸ್ ಶೆಟ್ಟಿ, ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಕೆ. ಉಮೇಶ್ ರೈ ವಂದಿಸಿದರು. ಪ್ರತಿಭಾ ಪುರಸ್ಕಾರ ಸಮಿತಿಯ ಸಂಚಾಲಕ ಗೋಪಾಲಕೃಷ್ಣ ಶೆಟ್ಟಿ ಕೆ. ಎಮ್ ಕಾರ್ಯಕ್ರಮ ನಿರ್ವಹಿಸಿದರು.

Pages