ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 1.52 ಕೋಟಿಗೂ ಮಿಕ್ಕಿ ಆರ್ಥಿಕ ನೆರವು: ಐಕಳ ಹರೀಶ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 1.52 ಕೋಟಿಗೂ ಮಿಕ್ಕಿ ಆರ್ಥಿಕ ನೆರವು: ಐಕಳ ಹರೀಶ್ ಶೆಟ್ಟಿ

Share This
BUNTS NEWS, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ 112 ಮನೆಗಳ ನಿರ್ಮಾಣಕ್ಕೆ ಆರ್ಥಿಕ ಸಹಾಯದ ಜತೆಗೆ 2019-20 ಸಾಲಿನ 10 ತಿಂಗಳ ಅವಧಿಯಲ್ಲಿ ಸಮಾಜದ  ಬಡ ಜನರಿಗೆ ಸುಮಾರು 1.52 ಕೋಟಿ ರೂಪಾಯಿಗೂ ಮಿಕ್ಕಿದ ಸಹಾಯ ಧನವನ್ನು ವಿತರಿಸಲಾಗಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ ಶೆಟ್ಟಿ ತಿಳಿಸಿದರು.
ಮಂಗಳೂರಿನ ಬಂಟ್ಸ್ ಹಾಸ್ಟೆಲ್  ಬಳಿಯ ಗೀತಾ ಎಸ್.ಎಂ.ಶೆಟ್ಟಿ ಸಭಾಭವನದಲ್ಲಿ ಜರಗಿದ ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ಆಡಳಿತ ಮಂಡಳಿಯ ಸದಸ್ಯರ ಸಭೆಯಲ್ಲಿ  10 ಮಂದಿಗೆ ಮದುವೆಗೆ ನೆರವು, ವೈದ್ಯಕೀಯ ಚಿಕಿತ್ಸೆಗೆ 21 ಮಂದಿಗೆ ಹಾಗೂ ಮನೆ ನಿರ್ಮಾಣಕ್ಕೆ 33 ಮಂದಿ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು

ಬಂಟ ಸಮಾಜದಲ್ಲಿರುವ ಬಡ ಕುಟುಂಬ  ಸದಸ್ಯರಿಗೆ  ಮದುವೆಗೆ, ಶಿಕ್ಷಣಕ್ಕೆ, ಮನೆ ಕಟ್ಟಲು ಹಾಗೂ ವೈದ್ಯಕೀಯ ಸಂಬಂಧಿಸಿದಂತೆ ಸಾವಿರಾರು ಅರ್ಜಿಗಳು ಬರುತ್ತಿವೆ. ಒಕ್ಕೂಟಕ್ಕೆ  ಬರುವ ಪ್ರತಿಯೊಂದು  ಅರ್ಜಿಗಳನ್ನು ಪರಿಶೀಲಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಅರ್ಹ ಫಲಾನುಭವಿಗಳಿಗೆ ನೆರವು ನೀಡುತ್ತಿದೆ. ದಾನಿಗಳಿಂದ ಸಂಗ್ರಹಿಸುವ ಹಣ ಬಡವರ  ಕಷ್ಟಗಳಿಗೆ ನೆರವಾಗಬೇಕೆಂಬ ಉದ್ದೇಶವನ್ನು ಒಕ್ಕೂಟ ಹೊಂದಿದೆ ಎಂದು ಐಕಳ ಹರೀಶ್ ಶೆಟ್ಟಿ ಎಂದರು.

ಈಗಾಗಲೇ ಕರ್ನಿರೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರು ಸುಮಾರು ಒಂದು ಎಕ್ರೆ ಜಾಗವನ್ನು ಒಕ್ಕೂಟಕ್ಕೆ ಉಚಿತವಾಗಿ ನೀಡಿದ್ದು, ಜಾಗದಲ್ಲಿ ಮನೆ ಇಲ್ಲದ ಕುಟುಂಬ ಸದಸ್ಯರಿಗೆ ಮನೆ ಕಟ್ಟಿಕೊಡುವ ಯೋಜನೆಯನ್ನು ಹಾಕಲಾಗಿದೆ. ಅದರ ಕಾರ್ಯ ಶೀಘ್ರದಲ್ಲೇ ನಡೆಯಲಿದೆ ಎಂದವರು ತಿಳಿಸಿದರು.

ವಿದ್ಯಾಭ್ಯಾಸಕ್ಕೆ, ಮದುವೆಗೆ ಅತೀ ಹೆಚ್ಚಿನ ಅರ್ಜಿಗಳು ಬರುತ್ತಿರುವ ಹಿನ್ನೆಲೆಯಲ್ಲಿ  ಶಾಶ್ವತ ಯೋಜನೆಗೆ ರೂಪುರೇಶೆಗಳನ್ನು ಹಾಕಲಾಗಿದೆ ಎಂದು ಐಕಳ ಹರೀಶ್ ಶೆಟ್ಟಿ ತಿಳಿಸಿದರು. ಜಾಗತಿಕ ಬಂಟರ ಸಂಘಗಳ  ಒಕ್ಕೂಟದ  ಗೌ. ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಾಸ್ತಾವಿಕವಾಗಿ ಮಾತನಾಡಿ ಸಭೆಯಲ್ಲಿ ಲೆಕ್ಕಪತ್ರ ಮಂಡಿಸಿದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ ಕಷ್ಟದಲ್ಲಿರುವವರು ಮಾತ್ರ ಒಕ್ಕೂಟಕ್ಕೆ ಅರ್ಜಿ ಸಲ್ಲಿಸಿ, ಸಮಸ್ಯೆ ಇದ್ದಾಗ ಒಕ್ಕೂಟ ತಕ್ಷಣ ಸ್ಪಂದಿಸುತ್ತದೆ. ಸಮಾಜಕ್ಕೆ ಹತ್ತಿರವಾದ ಮತ್ತು ಸಮಾಜ ಮೆಚ್ಚುವ ಕೆಲಸವನ್ನು ಒಕ್ಕೂಟ ಮಾಡುತ್ತಿದೆ ಎಂದರು.

ಸಮಾರಂಭದಲ್ಲಿ ತುಳು ಸಾಹಿತ್ಯ ಅಕಾಡೆಮಿ ಸದಸ್ಯೆ ವಿಜಯಲಕ್ಷ್ಮೀ ಪ್ರಸಾದ್ ರೈ, ಕ್ರೀಡಾ ಸಾಧಕ  ರೋಶನ್ ಶೆಟ್ಟಿ, ವಿಜಯ ಶೆಟ್ಟಿ ಸಾಲೆತ್ತೂರು ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಮಂಗಳೂರು ತಾಲೂಕು ಸಮಿತಿ ಸಂಚಾಲಕ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ ಅವರನ್ನು ಸನ್ಮಾನಿಸಲಾಯಿತು.

ಒಕ್ಕೂಟದ ಕಾರ್ಯ ಸಾಧನೆಯನ್ನು ಕೊಂಡಾಡಿದ ಬಂಟರ ಯಾನೆ ನಾಡವರ ಮಾತೃ ಸಂಘದ ನಿಕಟ ಪೂರ್ವ ಕಾರ್ಯದರ್ಶಿ ವಸಂತ ಶೆಟ್ಟಿ, ಕರ್ನಲ್ ಶರತ್ ಭಂಡಾರಿ, ಸುಂದರ ಶೆಟ್ಟಿ, ಪುಷ್ಟರಾಜು ಶೆಟ್ಟಿ ಕುಡುಂಬೂರು, ರಮೇಶ್ ಶೆಟ್ಟಿ ಕಂಕನಾಡಿ, ಜಯರಾಮ ಸಾಂತ, ಬೆಳಪು ದೇವಿ ಪ್ರಸಾದ್ ಶೆಟ್ಟಿ ಮೊದಲಾದವರು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸಮಾರಂಭದಲ್ಲಿ ಒಕ್ಕೂಟದ ಉಪಾಧ್ಯಕ್ಷ  ಕರ್ನಿರೆ ವಿಶ್ವನಾಥ ಶೆಟ್ಟಿ, ಗೌ. ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಜತೆ   ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್, ಸಿಎ ದಯಾಶರಣ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ಬಾಲಕೃಷ್ಣ ರೈ ಕೊಲ್ಲಾಡಿ, ಸುಧಾಕರ ಪೂಂಜ ಸುರತ್ಕಲ್, ರಾಜ್ ಕುಮಾರ್ ಶೆಟ್ಟಿ ಗುರುಪುರ, ರತ್ನಾಕರ ಶೆಟ್ಟಿ ಎಕ್ಕಾರ್, ಜಿತೇಂದ್ರ ಶೆಟ್ಟಿ ಉಳ್ಳಾಲ, ಅಮರನಾಥ ಶೆಟ್ಟಿ ಸಕಲೇಶ್ಪುರ, ಸಂತೋಷ್ ರೈ ಸೋಮವಾರ ಪೇಟೆ, ನಾಗರಾಜ್ ಶೆಟ್ಟಿ ಹೊಸನಗರ, ಮನೋಹರ್ ಶೆಟ್ಟಿ ತೋನ್ಸೆ, ಸುನೀಲ್ ಶೆಟ್ಟಿ ಕುಂದಾಪುರ, ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ  ಹೆಗ್ಡೆ ಕೊಳ್ಕೆಬೈಲು, ಮೊದಲಾದವರು ಉಪಸ್ಥಿತರಿದ್ದರು. ಸತೀಶ್ ಅಡಪ ಸಂಕಬೈಲ್ ವಂದಿಸಿದರು.

Pages