ಪತ್ರಕರ್ತ ರವೀಂದ್ರ ಶೆಟ್ಟಿ ಅವರಿಗೆ ರೋಡ್ ಸೇಫ್ಟಿ ಮೀಡಿಯಾ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪತ್ರಕರ್ತ ರವೀಂದ್ರ ಶೆಟ್ಟಿ ಅವರಿಗೆ ರೋಡ್ ಸೇಫ್ಟಿ ಮೀಡಿಯಾ ಫೆಲೋಶಿಪ್ ರಾಷ್ಟ್ರೀಯ ಪ್ರಶಸ್ತಿ

Share This
ಬಂಟ್ಸ್ ನ್ಯೂಸ್, ಮಂಗಳೂರು: ವಿಶ್ವ ಆರೋಗ್ಯ ಸಂಸ್ಥೆಯು ದೆಹಲಿಯ ಸಿ.ಎಂ.ಎಸ್ ಸಂಸ್ಥೆಯ ಮೂಲಕ ಆಯೋಜಿಸಿದ ರಸ್ತೆ ಸುರಕ್ಷತಾ ಮೀಡಿಯಾ ಫೆಲೋಶಿಪ್-2019 ದ್ವಿತೀಯ ಪ್ರಶಸ್ತಿಯನ್ನು ಪತ್ರಕರ್ತ ವಿಜಯ ಕರ್ನಾಟಕ ಪತ್ರಿಕೆಯ ಮುಖ್ಯ ಉಪಸಂಪಾದಕ ಬಿ. ರವೀಂದ್ರ ಶೆಟ್ಟಿ ಪಡೆದಿದ್ದಾರೆ.
ರೋಡ್ ಸೇಫ್ಟಿ ಮೀಡಿಯಾ ಫೆಲೋಶಿಪ್-2019 ಯೋಜನೆಯಡಿ ಮಾಧ್ಯಮದ ಮೂಲಕ ರಸ್ತೆ ಸುರತಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಅನನ್ಯ ಕೊಡುಗೆಗಾಗಿ ಪ್ರಶಸ್ತಿಯನ್ನು ನೀಡಲಾತ್ತಿದೆ. ದೇಶದಾದ್ಯಂತ 12ಮಂದಿ ಪತ್ರಕರ್ತರು ಇದರಲ್ಲಿ ಭಾಗವಹಿಸಿದ್ದು, ಕರ್ನಾಟಕದ ಕನ್ನಡ ಮಾಧ್ಯಮದ ಏಕೈಕೆ ಪ್ರತಿನಿಧಿ ಇವರಾಗಿದ್ದಾರೆ.

ಪ್ರಶಸ್ತಿಯು 15 ಸಾವಿರ ನಗದು ಹಾಗೂ ಫಲಕವನ್ನುಹೊಂದಿದೆ. ದೆಹಲಿಯಲ್ಲಿ ಆಯೋಜಿಸಲಾಗುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪಡೆದುಕೊಳ್ಳಲಿದ್ದಾರೆ.

Pages