ಐಕಳ ಹರೀಶ್ ಶೆಟ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ : ಎಸ್ಪಿಗೆ ದೂರು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಐಕಳ ಹರೀಶ್ ಶೆಟ್ಟಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ : ಎಸ್ಪಿಗೆ ದೂರು

Share This

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ದೂರು ಸಲ್ಲಿಕೆ

ಬಂಟ್ಸ್ ನ್ಯೂಸ್, ಉಡುಪಿ/ಮುಂಬಯಿ : ಕೆಲ ದಿನದಿಂದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರ ಬಗ್ಗೆ ಅವರ ಘನತೆಗೆ ಧಕ್ಕೆ ಬರುವಂತೆ ಅವಹೇಳನಕಾರಿ ಸುದ್ದಿಯನ್ನು ವಾಟ್ಸಪ್  ಸೋಷಿಯಲ್ ಮೀಡಿಯಾ ಮುಖಾಂತರ ಯಾರೋ ವಿಕೃತ ಮನಸ್ಸಿನ ವ್ಯಕ್ತಿಗಳು ವೈರಲ್ ಮಾಡುತ್ತಿದ್ದು, ಬಗ್ಗೆ ವಿಶ್ವದೆಲ್ಲೆಡೆಯ ಎಲ್ಲಾ ಬಂಟರ ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಳು ಆಕೋಶ ವ್ಯಕ್ತಪಡಿಸಿ ಕೃತ್ಯವನ್ನು ಖಂಡಿಸಿದ್ದು, ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ.

ಎಲ್ಲಾ ಮನವಿಗಳನ್ನು ಒಟ್ಟು ಮಾಡಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಇಂದ್ರಾಳಿ ಜಯಕರ್ ಶೆಟ್ಟಿ ಮತ್ತು ಉಡುಪಿ ಬಂಟರ ಸಂಘದ ಉಪಾಧ್ಯಕ್ಷ ಮೋಹನ್ ಶೆಟ್ಟಿ ಮೂಡನಿಡಂಬೂರು ಅವರು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು (ಜಿಲ್ಲಾ ಎಸ್ಪಿಯವರಿಗೆ), ಸೈಬರ್ ಅಪರಾಧ ವಿಭಾಗಕ್ಕೂ ದೂರು ಸಲ್ಲಿಸಿದ್ದು ದೂರು ದಾಖಲಾಗಿದೆ.

ಈಗಾಗಲೇ ಎಸ್ಪಿ ಅವರು ತಂಡ ರಚನೆ ಮಾಡಿ ತಪ್ಪಿತಸ್ಥರನ್ನು ಕೂಡಲೇ ಹುಡುಕುವಲ್ಲಿ ಕಾರ್ಯಪ್ರವೃತ್ತರಾಗಿದ್ದು ಪ್ರಮುಖ ಮಾಹಿತಿಗಳನ್ನು ಸಂಗ್ರಹಿಸಿದ್ದು ಶೀಘ್ರದಲ್ಲಿ ಕೃತ್ಯವೆಸಗಿದವರು ಪತ್ತೆಯಾಗಲಿದ್ದಾರೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.


ಜಾಗತಿಕ ಮಟ್ಟದಲ್ಲಿ ಬಂಟರನ್ನು ಒಗ್ಗೂಡಿಸಿ ಉಡುಪಿ ಮತ್ತು ಮುಂಬಯಿಯಲ್ಲಿ ವಿಶ್ವ ಮಟ್ಟದ  ಬಂಟರ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ ಮಾತ್ರವಲ್ಲದೆ ಸೂರು ಇಲ್ಲದ ಬಡ ಸರ್ವ ಜಾತಿ ಬಾಂಧವರಿಗೆ ನೂರಕ್ಕೂ ಮಿಕ್ಕಿ ಮನೆ ನಿರ್ಮಿಸುವ ಯೋಜನೆಯ ಆಶ್ರಯದಾತರಾದ ಐಕಳ ಹರೀಶ್ ಶೆಟ್ಟಿಯವರ ಬಗ್ಗೆ ಕಿಡಿಗೇಡಿಗಳು ಮಾಡಿರುವ ಅಪಪ್ರಚಾರವನ್ನು ವಿಶ್ವದೆಲ್ಲಡೆಯ ಬಂಟ ಸಮುದಾಯದ ಗಣ್ಯರು, ಬಂಟ ಸಮುದಾಯದ ಸಂಘಟನೆಗಳು ತೀವ್ರವಾಗಿ ಖಂಡಿಸಿದ್ದು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Pages