BUNTS NEWS, ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಆರೋಗ್ಯ ಅನುದಾನ ಯೋಜನೆಯಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಹೊಸೂರು ಹೈಗಿನಕಟ್ಟೆ ಇಲ್ಲಿನ ಯಕ್ಷಗಾನ ಕಲಾವಿದ ಸಂಘಟಕ ಜಯರಾಮ ಶೆಟ್ಟಿ ಅವರು ಅಪಘಾತದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅವರ ಚಿಕಿತ್ಸೆಗೆ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಆರ್ಥಿಕ ಸಹಾಯಧನವನ್ನು ಒಕ್ಕೂಟದ ಕಚೇರಿಯಲ್ಲಿ ವಿತರಿಸಿದರು.


ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಕೊಲ್ಲಾಡಿ ಬಾಲಕೃಷ್ಣ ರೈ ಮತ್ತು ಸದಸ್ಯರಾದ ಸುರೇಶ ಶೆಟ್ಟಿ ಸೂರಿಂಜೆ, ಆಡಳಿತಾಧಿಕಾರಿ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.