ಹಿರಿಯ ಯಕ್ಷಗಾನ ಕಲಾವಿದ ವಿಶ್ವನಾಥ ಸ್ವಾಮೀಜಿ ಸುವರ್ಣನಾಡು ವಿಧಿವಶ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಹಿರಿಯ ಯಕ್ಷಗಾನ ಕಲಾವಿದ ವಿಶ್ವನಾಥ ಸ್ವಾಮೀಜಿ ಸುವರ್ಣನಾಡು ವಿಧಿವಶ

Share This

ಬಂಟ್ಸ್ ನ್ಯೂಸ್, ಬಂಟ್ವಾಳ : ‌‌ಪ್ರಸಿದ್ದ ಯಕ್ಷಗಾನ ಕಲಾವಿದ ಸೊರ್ನಾಡು ವಿಶ್ವನಾಥ ಶೆಟ್ಟಿ (81), ಪ್ರಸ್ತುತ ವಿಶ್ವನಾಥ ಸ್ವಾಮಿಯವರು ಇಂದು (ಆಗಸ್ಟ್ 1, 2021) ಬೆಳಗ್ಗೆ ಸೊರ್ನಾಡುವಿನ ತಮ್ಮ ಸ್ವ ಆಶ್ರಮದಲ್ಲಿ ದೈವಾಧೀನರಾದರು.

ಎಳವೆಯಲ್ಲೇ ಯಕ್ಷಗಾನಾಸಕ್ತಿ ಹೊಂದಿದ್ದ ವಿಶ್ವನಾಥ ಶೆಟ್ಟರು ಎಂಕು ಭಾಗವತರಿಂದ ಚೆಂಡೆ-ಮದ್ದಳೆ, ಮೂಡಬಿದ್ರೆ ವಾಸು ಅವರಿಂದ ಯಕ್ಷಗಾನದ ಕುಣಿತ, ಕೂರ್ಯಾಳ ತಮ್ಮಯ್ಯ ಆಚಾರ್ಯ ಮತ್ತು ನಾಂಞ ಕಿಲ್ಲೆಯವರಿಂದ ಅರ್ಥಗಾರಿಕೆ ಹಾಗೂ ರಾಜನ್ ಅಯ್ಯರ್ ರಿಂದ ತಾಂಡವ ನೃತ್ಯವನ್ನು ಅಭ್ಯಸಿಸಿದ್ದರು. ಸೊರ್ನಾಡು ಶ್ರೀ ದುರ್ಗಾಪರಮೇಶ್ವರಿ ಮೇಳವನ್ನು ಕಟ್ಟಿ ಯಕ್ಷಗಾನ ಬಯಲಾಟಗಳನ್ನು ನಡೆಸಿಕೊಂಡು ಬಂದಿದ್ದರು.


ಉತ್ತಮ ಪುಂಡು ವೇಷಧಾರಿಯಾಗಿ ಹೆಸರು ಪಡೆದ ಅವರು ಮುಂದೆ ಹನೂಮಂತ, ಹರಿಶ್ಚಂದ್ರ, ಭಸ್ಮಾಸುರ, ಹಿರಣ್ಯಕಶ್ಯಪ, ಕೋಟಿ ಮುಂತಾದ ಪಾತ್ರಗಳಲ್ಲಿ ಖ್ಯಾತಿ ಪಡೆದಿದ್ದರು. ಈ ನಡುವೆ ಅವರು ಅಧ್ಯಾತ್ಮದ ಹಾದಿ ತುಳಿದು ಬಂಟ್ವಾಳ ತಾಲೂಕಿನ ಸುವರ್ಣನಾಡು ಶ್ರೀ ದುರ್ಗಾಂಬಿಕಾ ದೇವಸ್ಥಾನದ ಸ್ಥಾಪಕರಾಗಿ ವಿಶ್ವನಾಥ ಸ್ವಾಮಿಯೆನಿಸಿಕೊಂಡರು.

Pages