ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ಪೋಷಕರಾಗಿ ಉದ್ಯಮಿ ರಘುರಾಮ ಕೆ ಶೆಟ್ಟಿ ಕೂಳೂರು ಕನ್ಯಾನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ ಪೋಷಕರಾಗಿ ಉದ್ಯಮಿ ರಘುರಾಮ ಕೆ ಶೆಟ್ಟಿ ಕೂಳೂರು ಕನ್ಯಾನ

Share This

ಬಂಟ್ಸ್ ನ್ಯೂಸ್, ಮುಂಬೈ : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜಕಲ್ಯಾಣ ಸೇವೆಯನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಯಶಸ್ವಿಯಾಗಿ ನಡೆಸಿ ಸಮಾಜದ ಆರ್ಥಿಕವಾಗಿ ಹಿಂದುಳಿದ ಜನರ ಸೇವೆಯನ್ನು ನಿಸ್ವಾರ್ಥವಾಗಿ ಮಾಡುವುದನ್ನು ಗಮನಿಸಿದ ಮುಂಬೈನ ಖ್ಯಾತ ಉದ್ಯಮಿ ಹೇರಂಬ ಆಗ್ರೋ ಕೆಮಿಕಲ್ಸ್  ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ರಘುರಾಮ ಕೆ  ಶೆಟ್ಟಿ ಕೂಳೂರು ಕನ್ಯಾನ ಇವರು ಒಕ್ಕೂಟದ ಮಹಾಪೋಷಕರಾಗಿ ಸೇರ್ಪಡೆಗೊಂಡಿದ್ದಾರೆ.

ರಘುರಾಮ ಕೆ ಶೆಟ್ಟಿ ಕೂಳೂರು ಅವರು ಒಕ್ಕೂಟದ ಮೂಲಕ ಸಮಾಜದ ಆರ್ಥಿಕ ಹಿಂದುಳಿದ ಜನರ ಸೇವೆ ಮಾಡಬೇಕೆನ್ನುವ ಹಂಬಲದಿಂದ ಒಕ್ಕೂಟ ಸೇರ್ಪಡೆಗೊಂಡಿದ್ದು ಅವರನ್ನು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೂಗುಚ್ಛ ನೀಡಿ ಅಭಿನಂದಿಸಿದರು.

Pages