ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆ ರದ್ದು : ಆದೇಶ ಮರು ಪರಿಶೀಲಿಸಲು ಡಿಸಿಗೆ ಮನವಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಮಂಗಳೂರು ವಿಶ್ವವಿದ್ಯಾನಿಲಯ ಪದವಿ ಪರೀಕ್ಷೆ ರದ್ದು : ಆದೇಶ ಮರು ಪರಿಶೀಲಿಸಲು ಡಿಸಿಗೆ ಮನವಿ

Share This

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದಿಂದ ನಡೆಯುತ್ತಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯನ್ನು ರದ್ದು ಪಡಿಸುವಂತೆ ಆದೇಶಿಸಿರುವ ಆದೇಶವನ್ನು ಮರು ಪರಿಶೀಲಿಸಿ ಪರೀಕ್ಷೆ ನಡೆಸುವಂತೆ ದಕ ಜಿಲ್ಲಾಧಿಕಾರಿ ಅವರರಲ್ಲಿ ವಿವಿ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಕೋರಿದ್ದಾರೆ.

ಮಂಗಳೂರು ವಿಶ್ವವಿದ್ಯಾನಿಲಯವು ಕೋವಿಡ್ ನಿಯಮಾವಳಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಪದವಿ ಪರೀಕ್ಷೆಯನ್ನು ನಡೆಸುತ್ತಿದೆ. ಕಳೆದ ಮಾರ್ಚ್ ಮತ್ತು ಏಪ್ರಿಲ್‍ನಲ್ಲಿ ಸುಮಾರು 80% ಪರೀಕ್ಷೆ ಪೂರ್ಣಗೊಂಡಿದ್ದು, ಕೇವಲ 20% ಪರೀಕ್ಷೆ ಮಾತ್ರ ಮುಗಿಯಬೇಕಿತ್ತು. ಪದವಿಯ ಎಲ್ಲಾ ವಿದ್ಯಾರ್ಥಿಗಳು ಒಂದು ಡೋಸ್ ಲಸಿಕೆಯನ್ನು ಪಡೆದಿರುತ್ತಾರೆ. ಈಗಾಗಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ತಮ್ಮ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಜಿಲ್ಲಾಡಳಿತ ನಡೆಸಿರುವುದು ಅಭಿನಂದನಾರ್ಹವಾಗಿದೆ.


ಕೇರಳದಲ್ಲಿ ಕೋವಿಡ್ ಪಾಸಿಟಿವಿಟಿಯು ಹೆಚ್ಚಳವಿರುವುದನ್ನು ಮನಗಂಡು ಮಂಗಳೂರು ವಿವಿಯು ಕೇರಳದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಿಶೇಷ ಪರೀಕ್ಷೆಯನ್ನು ನಡೆಸುವುದಾಗಿ ತಿಳಿಸಿರುತ್ತದೆ. ಇದನ್ನು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಕೇರಳ ಹಾಗೂ ದೇಶದ ಇತರ ರಾಜ್ಯಗಳ ವಿದ್ಯಾರ್ಥಿಗಳ ಗಮನಕ್ಕೆ ತರಲಾಗಿದೆ. ಈ ಹಿಂದೆ ಮಾರ್ಚ್, ಏಪ್ರಿಲ್‍ನಲ್ಲಿ ನಡೆಸಿರುವ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ನಡೆಸಲು ವಿಶ್ವವಿದ್ಯಾಲಯಕ್ಕೆ ಅವಕಾಶ ನೀಡುವಂತೆ ವಿನಂತಿಸಿದ್ದಾರೆ.


ಯುಜಿಸಿಯ ನಿಯಮಾವಳಿಯ ಪ್ರಕಾರ ಸಪ್ಟೆಂಬರ್ ತಿಂಗಳೊಳಗಡೆ ಈಗಿನ ಸೆಮಿಸ್ಟರನ್ನು ಮುಗಿಸುವಂತೆ ಆದೇಶಿಸಿದೆ. ವಿದ್ಯಾರ್ಥಿಗಳು ಈಗಾಗಲೇ ವಿಶ್ವವಿದ್ಯಾನಿಲಯದ ಆಡಳಿತ ಮಂಡಳಿಗೆ ಪರೀಕ್ಷೆ ನಡೆಸುವಂತೆ ಒತ್ತಾಯಿಸಿರುವುದರಿಂದ ಇದನ್ನು ಮರು ಪರಿಶೀಲಿಸಬೇಕಾಗಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಆದ್ದರಿಂದ ಇನ್ನುಳಿದಿರುವ 1, 3, 5ನೇ ಸೆಮಿಸ್ಟರ್‍ನ 20% ಪರೀಕ್ಷೆಯನ್ನು ವಿವಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಕಟ್ಟುನಿಟ್ಟಾದ ಕೋವಿಡ್ ನಿಯಮಾವಳಿಯನ್ನು ಪಾಲಿಸುವ ಷರತ್ತಿನೊಂದಿಗೆ ಮರು ಪರಿಶೀಲಿಸಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ಅವರರಲ್ಲಿ ವಿವಿ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಕೋರಿದ್ದಾರೆ.

Pages