ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂತಾಪ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಂತಾಪ

Share This

ಮುಂಬೈ: ಹಿರಿಯ ರಾಜ್ಯಸಭಾ ಸದಸ್ಯ ಕಾಂಗ್ರೆಸ್ ಮಹಾನ್ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರು ಮಾಧ್ಯಮದೊಂದಿಗೆ ಮಾತನಾಡಿ ಆಸ್ಕರ್ ಫರ್ನಾಂಡಿಸ್ ಪ್ರಶ್ನಾತೀತ ರಾಜಕೀಯ ನಾಯಕನಾಗಿದ್ದು ಪಕ್ಷಭೇದವಿಲ್ಲದೆ ಎಲ್ಲರೊಂದಿಗೆ ಉತ್ತಮ ಒಡನಾಟ ಹೊಂದಿದ್ದರುತಮ್ಮ ಹಾಗೂ ಆಸ್ಕರ್ ನಡುವಿನ ಅವಿನಾಭಾವ ಸಂಬಂಧಗಳನ್ನು ಸ್ಮರಿಸಿಕೊಂಡ, ಕರಾವಳಿ ಭಾಗದ ಅಭಿವೃದ್ಧಿಗೆ ಆಸ್ಕರ್ ಕೊಡುಗೆ ಅಪಾರಕಳೆದ ವರ್ಷ 2019ರಲ್ಲಿ ಉಡುಪಿಯಲ್ಲಿ ನಡೆದ ವಿಶ್ವ ಬಂಟರ ಸಮ್ಮೇಳನದಲ್ಲಿ ಆಸ್ಕರ್ ದಂಪತಿಯನ್ನು ಸನ್ಮಾನಿಸಿರುವುದನ್ನು ನೆನಪಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಕಾರ್ಯಕ್ರಮಗಳಿಗೆ ಆಸ್ಕರ್ ಮತ್ತು ಅವರ ಪತ್ನಿ ಭಾಗಿಯಾಗುತ್ತಿದ್ದರುಆಸ್ಕರ್ ಓರ್ವ ಸ್ನೇಹಮಯಿ ಜೀವಿ, ರಾಜಕೀಯ ಅಜಾತಶತ್ರು ಎಂದು ಬಣ್ಣಿಸಿದ್ದಾರೆ.


ಆಸ್ಕರ್ ನಿಧನಕ್ಕೆ   ಜಾಗತಿಕ ಬಂಟರ ಸಂಘಗಳ ಒಕ್ಕೂಟ ಕರ್ನಿರೆ ವಿಶ್ವನಾಥ ಶೆಟ್ಟಿ( ಉಪಾಧ್ಯಕ್ಷರು )ಇಂದ್ರಾಳಿ ಜಯಕರ ಶೆಟ್ಟಿ (ಕಾರ್ಯದರ್ಶಿ), ಉಳ್ತೂರು ಮೋಹನ್ ದಾಸ್ ಶೆಟ್ಟಿ( ಕೋಶಾಧಿಕಾರಿ )ಸಂಕಬೈಲ್ ಸತೀಶ್ ಅಡಪ್ಪ, (ಜೊತೆ ಕಾರ್ಯದರ್ಶಿ) ಮತ್ತು ನಿರ್ದೇಶಕರು, ಮಹಾ ಪೋಷಕರು, ಪೋಷಕರು, ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು ತೀವ್ರ ಸಂತಾಪ ವ್ಯಕ್ತಡಿಸಿದ್ದಾರೆ.

Pages