ವಿಕಲಚೇತನ ಕುಟುಂಬಕ್ಕೆ ಪ್ರತಿ ತಿಂಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಹಾಯ ಹಸ್ತ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ವಿಕಲಚೇತನ ಕುಟುಂಬಕ್ಕೆ ಪ್ರತಿ ತಿಂಗಳು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಹಾಯ ಹಸ್ತ

Share This

ಮುಲ್ಕಿ: ಕಿಲ್ಪಾಡಿಯ ಕುಬೆವೂರು ಜಾರಂದಾಯ ದೈವಸ್ಥಾನದ ಬಳಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ, ತೀವ್ರ ಬಡತನದಲ್ಲಿ ಜೀವನ ಸಾಗಿಸುತ್ತಿರುವ ವಿಕಲಚೇತನ ಕುಟುಂಬವೊಂದಕ್ಕೆ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಭೇಟಿ ನೀಡಿದರು.

ಕುಬೆವೂರಿನ ದೊಡ್ಡಣ್ಣ  ಮತ್ತು  ಶಕುಂತಲಾ ಶೆಟ್ಟಿ ಯವರು ತೀವೃ ಕುಟುಂಬ ತೀವ್ರ ಬಡತನದಲ್ಲಿದ್ದು ಮಾತ್ರವಲ್ಲದೆ ಮೂರು ಹೆಣ್ಣು ಮಕ್ಕಳು ಬುದ್ದಿ ಮಾಂದ್ಯರಾಗಿದ್ದು ಜೀವನ ಸಾಗಿಸುವುದೇ ಕಷ್ಟದಾಯಕವಾಗಿದ್ದು ಜಾಗತಿಕ ಬಂಟರ ಸಂಘದ ವತಿಯಿಂದ ಪ್ರತೀ ತಿಂಗಳು ಕುಟುಂಬಕ್ಕೆ ಸಹಾಯ ಹಸ್ತ ನೀಡುವ ಭರವಸೆ ನೀಡಿದರು.


ಸಂದರ್ಭ ಇಂಜಿನಿಯರ್ ಜೀವನ್ ಶೆಟ್ಟಿ ಕಾರ್ನಾಡ್, ಯೋಗಗುರು ಜಯ ಮುದ್ದು ಶೆಟ್ಟಿ, ಸುಂದರ್ ಶೆಟ್ಟಿ ಕುಬೆವೂರು, ಮುರಳಿಧರ ಭಂಡಾರಿ, ನಾರಾಯಣ ರೈ, ಗಣೇಶ್ ಮುದ್ದು ಶೆಟ್ಟಿ, ರಮೇಶ್ ಶೆಟ್ಟಿ ಮತ್ತಿತರರು ಇದ್ದರು.

Pages