ಬಸ್ಸಿನಲ್ಲಿ ಸಿಕ್ಕ ಮದುವೆ ಚಿನ್ನಾಭರಣವನ್ನು ವಾರೀಸುದಾರರಿಗೆ ಒಪ್ಪಿಸಿದ ಪ್ರತಾಪ್ ಶೆಟ್ಟಿ, ಗೋಪಾಲ್ ಶೆಟ್ಟಿ : ಎಲ್ಲೆಡೆ ಮೆಚ್ಚುಗೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಸ್ಸಿನಲ್ಲಿ ಸಿಕ್ಕ ಮದುವೆ ಚಿನ್ನಾಭರಣವನ್ನು ವಾರೀಸುದಾರರಿಗೆ ಒಪ್ಪಿಸಿದ ಪ್ರತಾಪ್ ಶೆಟ್ಟಿ, ಗೋಪಾಲ್ ಶೆಟ್ಟಿ : ಎಲ್ಲೆಡೆ ಮೆಚ್ಚುಗೆ

Share This
ಉಡುಪಿ : ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಮದುವೆ ಆಭರಣಗಳನ್ನು ಪೊಲೀಸರಿಗೆ ನೀಡಿ ಅದರ ವಾರೀಸುದಾರರ ಪತ್ತೆಹಚ್ಚಿ ಒಪ್ಪಿಸಿದ ಕುಂದಾಪುರದ ಪ್ರತಾಪ್ ಶೆಟ್ಟಿ ಹಾಗೂ ವಿಟ್ಲದ ಗೋಪಾಲ್ ಶೆಟ್ಟಿ ಅವರ ಕಾರ್ಯಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.
ಕುಂದಾಪುರ - ಮಂಗಳೂರು ಭಾಗದಲ್ಲಿ ಸಂಚರಿಸುವ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರು ಮದುವೆಗೆ ಮಾಡಿಸಿದ್ದ ಹೊಸ ಆಭರಣಗಳ ಬ್ಯಾಗ್ ಬಿಟ್ಟು ಹೋಗಿದ್ದರು ಎನ್ನಲಾಗಿದೆ. 

ಈ ಸಂದರ್ಭ ಬಸ್ಸಿನ ಸಿಬ್ಬಂದಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರತಾಪ್ ಶೆಟ್ಟಿ ಹಾಗೂ ಗೋಪಾಲ್ ಶೆಟ್ಟಿ ಅವರು ತಕ್ಷಣ ಆಭರಣದ ಬ್ಯಾಗನ್ನು ಪೊಲೀಸರಿಗೆ ಒಪ್ಪಿಸಿ ವಾರೀಸುದಾರರಿಗೆ ಒಪ್ಪಿಸುವಂತೆ ಮಾಡಿದ್ದಾರೆ. ಇವರ ಪ್ರಾಮಾಣಿಕತೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

Pages