ಡಿ. 5 : ಹೆಬ್ರಿ - ಅಜೆಕಾರು ವಲಯದ ಬಂಟರ ಯಾನೆ ನಾಡವರ ಸಂಘದ ಸಮಾವೇಶ, ಮಹಾಸಭೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಡಿ. 5 : ಹೆಬ್ರಿ - ಅಜೆಕಾರು ವಲಯದ ಬಂಟರ ಯಾನೆ ನಾಡವರ ಸಂಘದ ಸಮಾವೇಶ, ಮಹಾಸಭೆ

Share This
ಕಾರ್ಕಳ : ಬಂಟರ ಯಾನೆ ನಾಡವರ ಸಂಘ (ರಿ) ಹೆಬ್ರಿ - ಅಜೆಕಾರು ವಲಯದ ಬಂಟರ ಸಮಾವೇಶ ಹಾಗೂ ಮಹಾಸಭೆಯು ಡಿ. 5ರ ರವಿವಾರ ನಡೆಯಲಿದೆ.
ಕಾರ್ಯಕ್ರಮವು ಶ್ರೀಮತಿ ಸುಭೋದ ಬಲ್ಲಾಳ್ ಬಂಟರ ಭವನದಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ನಡೆಯಲಿದೆ.

ಬಂಟರ ಸಮಾವೇಶವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಉದ್ಘಾಟಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹೆಬ್ರಿ - ಅಜೆಕಾರು ವಲಯದ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾದ ಉದಯ ಶೆಟ್ಟಿ ಮುನಿಯಾಲು ವಹಿಸಲಿರುವರು. 

ಮುಖ್ಯ ಅತಿಥಿಗಳಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅಂತರರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್, ಉಡುಪಿ ನಗರಸಭೆ ಪೌರಾಯುಕ್ತ ಡಾ| ಉದಯ ಶೆಟ್ಟಿ, ಶಿವಪುರ ನವೀನ್ ಶೆಟ್ಟಿ ಬೆಹರಿನ್ ಭಾಗವಹಿಸಿಲಿರುವರು.

Pages