ಕೊಡಿಕಲ್ ನಾಗಬ್ರಹ್ಮಸ್ಥಾನದ ನಾಗನ ಕಲ್ಲು ಕಿತ್ತೆಸೆದ ಕಿಡಿಗೇಡಿಗಳು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕೊಡಿಕಲ್ ನಾಗಬ್ರಹ್ಮಸ್ಥಾನದ ನಾಗನ ಕಲ್ಲು ಕಿತ್ತೆಸೆದ ಕಿಡಿಗೇಡಿಗಳು

Share This
ಮಂಗಳೂರು : ನಗರದ ಕೊಡಿಕಲ್ ನಾಗಬ್ರಹ್ಮಸ್ಥಾನದ ನಾಗನ ಕಲ್ಲನ್ನು ಕಿಡಿಗೇಡಿಗಳು ಕಿತ್ತು ಎಸೆದು ವಿಕೃತಿ ಮೆರೆದಿದ್ದಾರೆ. 24 ಗಂಟೆಯಲ್ಲಿ ತಪ್ಪಿತಸ್ಥರನ್ನು ಬಂಧಿಸದೆ ಹೋದಲ್ಲಿ ನ. 15 ಸೋಮವಾರ ಕೊಡಿಕಲ್ ಬಂದ್ ಮಾಡುವುದಾಗಿ ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿದೆ.
ಘಟನೆ ಅರಿವಿಗೆ ಬರುತ್ತಿದ್ದಂತೆ ಸ್ಥಳದಲ್ಲಿ ಜನಸ್ತೋಮ ಸೇರಿ ಪ್ರತಿಭಟನೆ ನಡೆಸಿದ್ದಾರೆ. ತುಳುನಾಡಿನ ಆರಾಧನೆಯಲ್ಲಿ ಪ್ರಮುಖ ಸ್ಥಾನ ಪಡೆದಿರುವ ನಾಗಬ್ರಹ್ಮಸ್ಥಾನಕ್ಕೆ ಈ ರೀತಿ ಮಾಡಿರುವುದು ಭಕ್ತ ಸಮೂಹದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 

ಘಟನಾ ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತಪ್ಪಿತಸ್ಥರನ್ನು ಸೆರೆ ಹಿಡಿಯುವ ಭರವಸೆ ನೀಡಿದ್ದಾರೆ.

Pages