ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರಿಗೆ ಸೂರು ಕಟ್ಟಿಕೊಳ್ಳಲು ಎಂ.ಆರ್.ಜಿ ಗ್ರೂಪಿನ ಕೆ. ಪ್ರಕಾಶ್ ಶೆಟ್ಟಿ ಅವರಿಂದ ನೆರವು - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರಿಗೆ ಸೂರು ಕಟ್ಟಿಕೊಳ್ಳಲು ಎಂ.ಆರ್.ಜಿ ಗ್ರೂಪಿನ ಕೆ. ಪ್ರಕಾಶ್ ಶೆಟ್ಟಿ ಅವರಿಂದ ನೆರವು

Share This
ಮಂಗಳೂರು: ಪ್ರಖ್ಯಾತ ಪರಿಸರವಾದಿ ಹಾಗು 2019ರ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರೂ ಆಗಿರುವ ಸಾಲು ಮರದ ತಿಮ್ಮಕ್ಕ ಅವರಿಗೆ ಸೂರು ಕಟ್ಟಿಕೊಳ್ಳಲು ಎಂ.ಆರ್.ಜಿ. ಗುಂಪಿನಿಂದ 5 ಲಕ್ಷ ರೂಪಾಯಿಗಳ ನೆರವನ್ನು ನೀಡಲಾಗಿದೆ.
ಸಾಲು ಮರದ ತಿಮ್ಮಕ್ಕ ಅವರ ವೃಕ್ಷ ಪ್ರೇಮ, ಗಿಡಗಳನ್ನು ನೆಟ್ಟು ಅವುಗಳನ್ನು ಮಕ್ಕಳಂತೆ ಲಾಲನೆ ಪಾಲನೆ ಮಾಡುವಲ್ಲಿ ತೋರುವ ಅರ್ಪಣಾಭಾವಕ್ಕೆ ಪರ್ಯಾಯವಾದ ಹೋಲಿಕೆ ಇಲ್ಲ. ಅವರಿಗೆ ಈ ನೆರವನ್ನು ಅತ್ಯಂತ ಗೌರವದಿಂದ ಕೊಡಮಾಡಲಾಗಿದೆ ಎಂದು ಎಂ.ಆರ್.ಜಿ. ಗುಂಪಿನ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ ಶೆಟ್ಟಿ ಹೇಳಿದ್ದಾರೆ. ನೆರವಿನ ಚೆಕ್ ಅನ್ನು ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಹಸ್ತಾಂತರಿಸಿದರು.

ಯಾವುದೇ ಔಪಚಾರಿಕ ಶಿಕ್ಷಣ ಇಲ್ಲದೆಯೂ ತನ್ನ ಪರಿಸರ ರಕ್ಷಣೆಯ ಕೆಲಸಗಳಿಂದ ಸಾಲು ಮರದ ತಿಮ್ಮಕ್ಕ ಅವರು ದೇಶ ವಿದೇಶಗಳಲ್ಲಿ ಪ್ರಖ್ಯಾತರಾಗಿದ್ದಾರೆ ಎಂಬುದನ್ನಿಲ್ಲಿ ಸ್ಮರಿಸಬಹುದು.

Pages