ಕನ್ನಡಿಗರಿಗೆ ವಕ್ವಾಡಿ ಪ್ರವೀಣ್ ಶೆಟ್ಟಿ ಸೇವೆ ಅನನ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕನ್ನಡಿಗರಿಗೆ ವಕ್ವಾಡಿ ಪ್ರವೀಣ್ ಶೆಟ್ಟಿ ಸೇವೆ ಅನನ್ಯ: ಶ್ರೀ ಚಂದ್ರಶೇಖರ ಸ್ವಾಮೀಜಿ

Share This
ಬೆಂಗಳೂರು : ರಾಜ್ಯ ಸರಕಾರದಿಂದ ಹೊರನಾಡ ಕನ್ನಡಿಗ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಡುಪಿ ಮೂಲದ ವಕ್ವಾಡಿ ಪ್ರವೀಣ್ ಶೆಟ್ಟಿ ದುಬೈ ಅವರು ಇಂದು ಬೆಂಗಳೂರಿನ ಆರ್‌ಟಿ ನಗರದಲ್ಲಿರುವ ಶ್ರೀಚಂದ್ರಶೇಖರ ಸ್ವಾಮೀಜಿ ಆಶ್ರಮಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಕರ್ನಾಟಕ ಎನ್‌ಆರ್‌ಐ ಫೋರಂನ ಅಧ್ಯಕ್ಷ, ಫೋರ್ಚುನ್ ಗ್ರೂಪ್‌ನ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ ಅವರು ಮಾಡಿರುವ ಕನ್ನಡ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಹೊರನಾಡ ಕನ್ನಡಿಗ ವಿಭಾಗದಲ್ಲಿ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸುವ ಮೂಲಕ ಯೋಗ್ಯರನ್ನು ಗುರುತಿಸಿದೆ. ಪ್ರವೀಣ್ ಶೆಟ್ಟಿ ಅವರು ಕನ್ನಡ, ನಾಡು, ನುಡಿ, ಕನ್ನಡಿಗರಿಗಾಗಿ ಮಾಡುತ್ತಿರುವ ಸೇವೆಯು ಅನನ್ಯವಾಗಿದೆ ಎಂದು ಆಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ, ವೈಜ್ಞಾನಿಕ ಜ್ಯೋತಿಷಿ ಶ್ರೀಚಂದ್ರಶೇಖರ ಸ್ವಾಮೀಜಿ ಹೇಳಿದರು.

ತಮ್ಮ ಉದ್ಯಮದಲ್ಲಿ ಕನ್ನಡಿಗರಿಗೆ ವಿಶೇಷ ಒತ್ತು ನೀಡುವ ಮೂಲಕ ಕನ್ನಡಿಗರ ಪಾಲಿನ ಉದ್ಯೋಗದಾತರಾಗಿದ್ದಾರೆ. ಮುಂದಿನ ದಿನಗಳಲ್ಲೂ ಉದ್ಯೋಗದಲ್ಲಿ ಆಯ್ಕೆ ಮಾಡುವ ವೇಳೆ ಯೋಗ್ಯ ಕನ್ನಡಗರಿಗೆ ವಿಶೇಷ ಒತ್ತು ನೀಡುವಂತೆ ಸಲಹೆ ನೀಡಿದ ಸ್ವಾಮೀಜಿ, ಆಶ್ರಮದ ವತಿಯಿಂದ ವಿಶೇಷವಾಗಿ ಸನ್ಮಾನಿಸಿ ಗೌರವಿಸಿದರು.

ಆಶ್ರಮದ ನಿರ್ದೇಶಕಿ ರಜನಿ ಸಿ. ಭಟ್,ರಾಹುಲ್ ಸಿ ಭಟ್,ವಕ್ವಾಡಿ ಪ್ರವೀಣ್ ಶೆಟ್ಟಿ ಅವರ ಪತ್ನಿ ರೂಪಾ ಶೆಟ್ಟಿ ನಿವೃತ್ತ ಪೊಲೀಸ್ ಅಧಿಕಾರಿ ಜಿ. ಎ ಬಾವ,ಉದ್ಯಮಿ ಪರ್ವತ ಶೆಟ್ಟಿ, ಉಪಸ್ಥಿತರಿದ್ದರು.

Pages