ಬಂಟ ಸಮಾಜ ಎಲ್ಲರನ್ನೂ ಪ್ರೀತಿಸುತ್ತದೆ, ಕಷ್ಟದಲ್ಲಿರುವವರ ಕಣ್ಣೀರೊರೆಸುವ ಕಾರ್ಯ ನಿರಂತರವಾಗಿ ನಡೆಯಲಿದೆ : ಐಕಳ ಹರೀಶ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟ ಸಮಾಜ ಎಲ್ಲರನ್ನೂ ಪ್ರೀತಿಸುತ್ತದೆ, ಕಷ್ಟದಲ್ಲಿರುವವರ ಕಣ್ಣೀರೊರೆಸುವ ಕಾರ್ಯ ನಿರಂತರವಾಗಿ ನಡೆಯಲಿದೆ : ಐಕಳ ಹರೀಶ್ ಶೆಟ್ಟಿ

Share This
ಮಂಗಳೂರು : ಕಷ್ಟ ಬಂದಾಗ ಕುಗ್ಗದಿರಿ, ಕಷ್ಟ ಎಲ್ಲರಿಗೂ ಇದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಮಾಜ ಕಲ್ಯಾಣ ಕಾರ್ಯಕ್ರಮದ ಮೂಲಕ ಸಮಾಜದಲ್ಲಿರುವ ಬಡವರ ಕಣ್ಣೀರನ್ನು ಒರೆಸುವ ಕೆಲಸ ಮಾಡುತ್ತಿದೆ. ಇದು ನಿತ್ಯ ನಿರಂತರ ನಡೆಯಲಿದೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು.

ಅವರು ಬಂಟ್ಸ್ ಹಾಸ್ಟೆಲ್ ನ ಅಮೃತೋತ್ಸವ ಕಟ್ಟಡದ ಸಭಾಂಗಣದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಸಮಾಜ ಕಲ್ಯಾಣೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಂಟ ಸಮಾಜ ಎಲ್ಲರನ್ನೂ ಪ್ರೀತಿಸುವ ಸಮಾಜ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ಸಮಾಜ. ಹೀಗಾಗಿ ಬೇರೆ ಸಮಾಜದವರ ಕಷ್ಟಗಳಲ್ಲೂ ಒಕ್ಕೂಟ ಪಾಲ್ಗೊಳ್ಳುತ್ತದೆ. ಸಹಾಯ ಹಸ್ತವನ್ನು ಕೂಡಾ ನೀಡುತ್ತದೆ ಎಂದವರು ತಿಳಿಸಿದರು.

ಸಮಾರಂಭದಲ್ಲಿ ಪ್ರೊ. ಭಾಸ್ಕರ್ ರೈ ಕುಕ್ಕುವಳ್ಳಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಕದ್ರಿ ನವನೀತ ಶೆಟ್ಟಿ, ಪತ್ರಕರ್ತರಾದ ಬಿ. ರವೀಂದ್ರ ಶೆಟ್ಟಿ, ಪ್ರದೀಪ್ ಕುಮಾರ್ ರೈ ಐಕಳ ಬಾವ, ಶಿಕ್ಷಕ ಸಾಯಿನಾಥ ಶೆಟ್ಟಿ ಮುಂಡ್ಕೂರು, ಪಿಎಚ್‌ಡಿ ಪದವಿ ಪಡೆದ ಡಾ. ಸುಧಾರಾಣಿ, ಡಾ. ಅಂಪಾರು ನಿತ್ಯಾನಂದ ಶೆಟ್ಟಿ, ಶಿವಾನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಂಬಯಿಯ ಆರ್ಗನಿಕ್ ಕೆಮಿಕಲ್ಸ್ ಸಂಸ್ಥೆಯ ಸಿ.ಎಂ.ಡಿ ಆನಂದ್ ಎಂ. ಶೆಟ್ಟಿ, ಉದ್ಯಮಿ ಮುಂಬಯಿ ಶಶಿಧರ ಶೆಟ್ಟಿ ಇನ್ನಂಜೆ, ಶಾಸಕ ವೇದವ್ಯಾಸ ಕಾಮತ್ ಇದ್ದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ ಪ್ರಸ್ತಾವಿಕ ಮಾತುಗಳನ್ನಾಡಿದರು, ಜತೆ ಕಾರ್ಯದರ್ಶಿ ಸತೀಶ್ ಅಡಪ ಸಂಕಬೈಲ್ ಫಲಾನುಭವಿಗಳ ಹೆಸರನ್ನು ವಾಚಿಸಿದರು. ಕೋಶಾಧಿಕಾರಿ ಉಳ್ತೂರು ಮೋಹನ್‌ದಾಸ ಶೆಟ್ಟಿ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ್, ಕಾರ್ಪೋರೇಟರ್ ಮನೋಹರ ಶೆಟ್ಟಿ ಉಪಸ್ಥಿತರಿದ್ದರು.

ಅದೇ ರೀತಿ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಪುತ್ತೂರು ಬಂಟರ ಸಂಘದ ಅಧ್ಯಕ್ಷ ಬೊಲ್ಯೊಟ್ಟು ಶಶಿಧರ ಶೆಟ್ಟಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಬೆಳ್ಳಂಪಳ್ಳಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ, ಗುರುಪುರ ಬಂಟರ ಸಂಘದ ಅಧ್ಯಕ್ಷ ಸಂತೋಷ ಶೆಟ್ಟಿ ಅವರನ್ನು ಗೌರವಿಸಲಾಯಿತು. 

ಸಮಾರಂಭದಲ್ಲಿ ಸಮಾಜ ಕಲ್ಯಾಣ ಯೋಜನೆಯಡಿ ಒಟ್ಟು 95 ಮಂದಿಗೆ 30 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್‌ನ್ನು ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ವಿತರಿಸಿದರು.

ಪ್ರತೀ ತಿಂಗಳು ಸಮಾಜ ಕಲ್ಯಾಣ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ ವೈದ್ಯಕೀಯ, ಮದುವೆ, ಶಿಕ್ಷಣ, ದತ್ತು ಸ್ವೀಕಾರ, ಮನೆ ರಿಪೇರಿ ಮತ್ತು ಮನೆ ನಿರ್ಮಾಣಕ್ಕೆ ಫಲಾನುಭವಿಗಳಿಗೆ ಚೆಕ್‌ನ್ನು ವಿತರಿಸಲಾಯಿತು. ಉದಯಕುಮಾರ್ ರೈ ಪ್ರಾರ್ಥನೆಗೈದರು. ಪುರುಷೋತ್ತಮ ಭಂಡಾರಿ ಅಡ್ಯಾರ್, ಶರತ್ ಶೆಟ್ಟಿ ಕಿನ್ನಿಗೋಳಿ, ಸತೀಶ್ ಅಡಪ ಸಂಕಬೈಲ್ ಸನ್ಮಾನ ಪತ್ರ ವಾಚಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ಕಾರ್ಯಕ್ರಮ ನಿರ್ವಹಿಸಿದರು.

Pages