ಕಳ್ಳನನ್ನು ಬೆನ್ನಟ್ಟಿ ಹಿಡಿದ ASI ವರುಣ್ ಆಳ್ವ ಅವರಿಗೆ ಕಮೀಷನರ್ ಶಶಿಕುಮಾರ್ ಅವರಿಂದ ಅಭಿನಂದನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಕಳ್ಳನನ್ನು ಬೆನ್ನಟ್ಟಿ ಹಿಡಿದ ASI ವರುಣ್ ಆಳ್ವ ಅವರಿಗೆ ಕಮೀಷನರ್ ಶಶಿಕುಮಾರ್ ಅವರಿಂದ ಅಭಿನಂದನೆ

Share This
ಮಂಗಳೂರು : ನಗರದಲ್ಲಿ ಮೊಬೈಲ್ ಮತ್ತಿತರ ವಸ್ತುಗಳನ್ನು ಕದಿಯಲು ಪ್ರಯತ್ನಿಸಿ ಪರಾರಿಯಾಗಲು ಯತ್ನಿಸುವ ಸಂದರ್ಭ ಕರ್ತವ್ಯದಲ್ಲಿದ್ದ ವರುಣ್ ಆಳ್ವ ಅವರು ಕಳ್ಳನನ್ನು ಬೆನ್ನಟ್ಟಿ ಹಿಡಿದು ಹೆಡೆಮುರಿ ಕಟ್ಟಿ ಬಂಧಿಸುವ ಮೂಲಕ ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ವರುಣ್ ಅವರು ಕಳ್ಳನನ್ನು ಹಿಡಿಯಲು ದೂರದವರೆಗೆ ಓಡಿ ಹಿಡಿಯುವ ವಿಡಿಯೋ ವೈರಲ್ ಆಗಿದ್ದು ಎಲ್ಲೆಡೆ ಮೆಚ್ಚುಗೆಯ ಮಾತುಗಳು ವ್ಯಕ್ತವಾಗುತ್ತಿದೆ.
ಅಲ್ಲದೆ ವರುಣ್ ಆಳ್ವ ಅವರು ಆರೋಪಿಗಳನ್ನು ಪತ್ತೆ ಹಚ್ಚಿ ಅವರಲ್ಲಿದ್ದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದರು. ವರುಣ್ ಆಳ್ವರ ಈ ಕಾರ್ಯಕ್ಕೆ ಮಂಗಳೂರು ಕಮೀಷನರ್ ಎನ್. ಶಶಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿ ಅವರ ಕಚೇರಿಯಲ್ಲಿ ಅಭಿನಂದಿಸಿದ್ದಾರೆ.

Pages