ಡಾ. ಸಂತೋಷ್ ಗುರೂಜಿಯವರ ಧರ್ಮಪತ್ನಿ ಶಿಲ್ಪಾ ಶೆಟ್ಟಿ ನಿಧನ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಡಾ. ಸಂತೋಷ್ ಗುರೂಜಿಯವರ ಧರ್ಮಪತ್ನಿ ಶಿಲ್ಪಾ ಶೆಟ್ಟಿ ನಿಧನ

Share This
ಬಂಟ್ಸ್ ನ್ಯೂಸ್, ಶಿವಮೊಗ್ಗ : ತೀರ್ಥಹಳ್ಳಿ ಬೆಜ್ಜವಳ್ಳಿ ಅಯ್ಯಪ್ಪ ಸ್ವಾಮಿಯ ದೇವಸ್ಥಾನದ ಮುಖ್ಯಸ್ಥರು ಮತ್ತು ಬಾರ್ಕೂರು ಮಠದ ಸ್ವಾಮಿಗಳಾದ ಡಾ. ಸಂತೋಷ್ ಗುರೂಜಿ ಇವರ ಧರ್ಮಪತ್ನಿ ಶಿಲ್ಪಾ ಶೆಟ್ಟಿ (45) ಹೃದಯಾಘಾತದಿಂದ ಎ.16ರ ಬೆಳಿಗ್ಗೆ ನಿಧನರಾದರು.
ತೀರ್ಥಹಳ್ಳಿ ಪಟ್ಟಣದ ವಿಜಯಾ ಹೋಟೆಲ್ ಮಾಲೀಕರಾಗಿದ್ದ ದಿವಂಗತ ಸದಾಶಿವ ಶೆಟ್ಟರ ಮಗಳು ತೀರ್ಥಹಳ್ಳಿ ಜಯರಾಮ್ ಶೆಟ್ಟಿ ಸಹೋದರಿ ಶಿಲ್ಪಾ ಶೆಟ್ಟಿ ಅವರು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. 

ಮೃತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೆಜ್ಜವಳ್ಳಿಗೆ ತರಲಾಗುತ್ತಿದ್ದು ಇಂದು ರಾತ್ರಿ ಸುಮಾರು 8 ಗಂಟೆಗೆ ತಲುಪುವ ಸಾಧ್ಯತೆಯಿದೆ. ನಾಳೆ ಎ.17ರಂದು ಬೆಳಿಗ್ಗೆ 9 ಗಂಟೆಗೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಸ್ವಗೃಹದ ಹತ್ತಿರ ಅಂತ್ಯಸಂಸ್ಕಾರವನ್ನು ಮಾಡಲು ಗುರುಹಿರಿಯರು ನಿಶ್ಚಯಿಸಿರುತ್ತಾರೆ ಎಂದು ತಿಳಿದು ಬಂದಿರುತ್ತದೆ.

Pages