ಎ.25 : ಹಾಸನ ಜಿಲ್ಲಾ ಬಂಟರ ಸಂಘ (ರಿ) ಸಕಲೇಶಪುರದ ನವೀಕೃತ ಕಟ್ಟಡ ಉದ್ಘಾಟನೆ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಎ.25 : ಹಾಸನ ಜಿಲ್ಲಾ ಬಂಟರ ಸಂಘ (ರಿ) ಸಕಲೇಶಪುರದ ನವೀಕೃತ ಕಟ್ಟಡ ಉದ್ಘಾಟನೆ

Share This
ಬಂಟ್ಸ್ ನ್ಯೂಸ್, ಹಾಸನ : ಸಕಲೇಶಪುರದ ಬಾಳೆಗದ್ದೆಯ ಹಾಸನ ಜಿಲ್ಲಾ ಬಂಟರ ಸಂಘದ ನೂತನ ನವೀಕೃತ ಕಟ್ಟಡದ ಉದ್ಘಾಟನೆಯು ಎ.25ರ ಸೋಮವಾರ ಬೆಳಗ್ಗೆ 10.30ಕ್ಕೆ ನಡೆಯಲಿದೆ.
ಸಂಘದ ನೂತನ ನವೀಕೃತ ಕಟ್ಟಡವನ್ನು ಬೆಂಗಳೂರಿನ ಎಂಜಿಆರ್ ಗ್ರೂಪ್ ಅಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ ಹಾಗೂ ಶ್ರೀಮತಿ ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಲಿರುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಸನ ಜಿಲ್ಲಾ ಬಂಟರ ಸಂಘದ ಅಧ್ಯಕ್ಷ ಅಮರನಾಥ ಶೆಟ್ಟಿ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಜಾಗತಿಕ ಬಂಟರ ಕ್ಷೇಮಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಲಿದ್ದಾರೆ.

Pages