ಬಂಟರ ಸಂಘದ ಶಿಕ್ಷಣ ಸಂಸ್ಥೆಗೆನ್ಯಾಕ್ (NAAC) ಮಾನ್ಯತೆ ದೊರೆತಿದ್ದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆಯುವಲ್ಲಿ ಎಲ್ಲರ ಸಹಕಾರ ಅಗತ್ಯ : ನಗ್ರಿಗುತ್ತು ವಿವೇಕ್ ಶೆಟ್ಟಿ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ ಸಂಘದ ಶಿಕ್ಷಣ ಸಂಸ್ಥೆಗೆನ್ಯಾಕ್ (NAAC) ಮಾನ್ಯತೆ ದೊರೆತಿದ್ದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆಯುವಲ್ಲಿ ಎಲ್ಲರ ಸಹಕಾರ ಅಗತ್ಯ : ನಗ್ರಿಗುತ್ತು ವಿವೇಕ್ ಶೆಟ್ಟಿ

Share This
ಮುಂಬೈ: ಬಂಟರ ಸಂಘ ಮುಂಬಯಿ ಪ್ರಾಯೋಜಿತ ಉನ್ನತ ಶಿಕ್ಷಣ ಸಂಸ್ಥೆಗಳಾದ ಅಣ್ಣಲೀಲಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕಾನಮಿಕ್ಸ್ ಹಾಗೂ ಶೋಭಾ ಜಯರಾಮ್ ಶೆಟ್ಟಿ ಬಿಎಂಎಸ್ ಕಾಲೇಜ್ ಕುರ್ಲಾ ಇದಕ್ಕೆ ಶಿಕ್ಷಣ ಕ್ಷೇತ್ರದ ಪ್ರತಿಷ್ಠಿತ ನ್ಯಾಕ್ (NAAC)ಮಾನ್ಯತೆ ಯು ದೊರೆತಿದ್ದು ಇದರ ಅಂಗವಾಗಿ ಉನ್ನತ ಶಿಕ್ಷಣ ಸಮಿತಿಯ ಮಾಜಿ ಕಾರ್ಯಧ್ಯಕ್ಷ ನಗ್ರಿಗುತ್ತು ವಿವೇಕ್ ಶೆಟ್ಟಿಯವರ ನೇತೃತ್ವದಲ್ಲಿ ಅಭಿನಂದನೆ ಹಾಗೂ ಶಿಕ್ಷಣ ಸಂಸ್ಥೆಯ ಶಿಕ್ಷಕ ವೃಂದದವರಿಗೆ ಸಂತೋಷಕೂಟವನ್ನು ಜುಲೈ 9ರಂದು ಸಂಜೆ ನವಿ ಮುಂಬಯಿ ಪ್ರಸಿದ್ಧ ತಾರ ಹೋಟೆಲ್ ಕಂಟ್ರಿ ಇನ್ ಅಂಡ್ ಸೂಟ್ಸ್ ಬೈ ರೇಡಿಸನ್ ಇಲ್ಲಿ ಆಯೋಜಿಸಲಾಗಿತ್ತು.
ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಚಂದ್ರಹಾಸ ಕೆ ಶೆಟ್ಟಿ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಉದ್ದೇಶ ಒಂದು ಅತ್ಯುತ್ತಮ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯನ್ನು ಸಮಾಜಕ್ಕೆ ನೀಡಬೇಕು ಎಂಬುದಾಗಿದ್ದು ಹೊರತು ಹಣ ಮಾಡುವ ಉದ್ದೇಶವಿಲ್ಲ. ಕರ್ಮಭೂಮಿಯಾದ ಮುಂಬಯಿ ನಮಗೆ ತುಂಬಾ ಕೊಟ್ಟಿದೆ ನಾವು ಈ ನಾಡಿಗೆ ಏನನ್ನಾದರೂ ಕೊಡಬೇಕು ಎಂಬುದೇ ನಮ್ಮ ಉದ್ದೇಶವಾಗಿದೆ ಮುಂಬಯಿಯಲ್ಲಿ ಒಂದು ಉತ್ತಮ ಗುಣಮಟ್ಟ ವಾದ ಉನ್ನತ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಬೇಕು ಎಂಬ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಇದೀಗ ನಮ್ಮ ಶಿಕ್ಷಣ ಸಂಸ್ಥೆಗಳಿಗೆ ಉತ್ತಮ ಮಾನ್ಯತೆಯು ದೊರೆತಿದ್ದು ಇದಕ್ಕಾಗಿ ನಾನು ಈ ಸಂಸ್ಥೆಗಾಗಿ ಸೇವೆಸಲ್ಲಿಸಿದ ನಗ್ರಿಗುತ್ತು ವಿವೇಕ್ ಶೆಟ್ಟಿಯವರನ್ನು ಮಾಜಿ ಅಧ್ಯಕ್ಷರುಗಳು ಹಾಗೂ ಸಮಿತಿಯವರನ್ನು ವಿಶೇಷವಾಗಿ ಈ ಸಂಸ್ಥೆಯ ಸಿಬ್ಬಂದಿ ವರ್ಗವನ್ನು ಅಭಿನಂದಿಸುತ್ತೇನೆ. ಬಂಟರ ಸಂಘದಲ್ಲಿ ಸೇವೆಮಾಡುವ ನಾವೆಲ್ಲರೂ ಸಮಾಜ ಸೇವೆ ಮಾಡಬೇಕು ಎಂಬ ಉದ್ದೇಶದಿಂದಲೇ ಹೆಚ್ಚಿನ ಸಮಯವನ್ನು ವಿನಿಯೋಗಿಸುತ್ತವೆ. ಇದರಿಂದ ನಮಗೆ ಆತ್ಮತೃಪ್ತಿ ದೊರೆಯುತ್ತದೆ ಎಂದರು.

ಉನ್ನತ ಶಿಕ್ಷಣ ಸಮಿತಿಯ ಮಾಜಿ ಕಾರ್ಯಧ್ಯಕ್ಷ ಕಾರ್ಯಕ್ರಮದ ಸಂಯೋಜಕರಾದ ನಗ್ರಿಗುತ್ತು ವಿವೇಕ್ ಶೆಟ್ಟಿಯವರು ಮಾತನಾಡಿ, ನ್ಯಾಕ್ ಮಾನ್ಯತೆ ಪಡೆಯಲು ಕೈಗೊಂಡ ಸತತ ಪ್ರಯತ್ನಗಳ ಬಗ್ಗೆ ವಿವರಿಸಿದರು ಹಾಗೂ ಇದಕ್ಕಾಗಿ ಸಹಕರಿಸಿದ ನೌಕರ ವೃಂದ ಹಾಗೂ ಆಡಳಿತ ಸಮಿತಿಯನ್ನು ಅವರು ಅಭಿನಂದಿಸಿದರು. ಇನ್ನು ಮುಂದೆಯೂ ಈ ಕಾಲೇಜ್ ಮುಂಬಯಿಯಲ್ಲಿ ಒಂದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆಯುವಲ್ಲಿ ಎಲ್ಲರ ಸಹಕಾರದ ಅಗತ್ಯವಿದೆ ಎಂದರು.

ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯಧ್ಯಕ್ಷ ಕುತ್ಯಾರು ಕಿಶೋರ್ ಕುಮಾರ್ ಶೆಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಬಂಟರ ಸಂಘದ ನೇತೃತ್ವದ ಶಿಕ್ಷಣ ಸಂಸ್ಥೆಗಳು ಮಹಾನಗರದಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿ ಬೆಳೆಯುವಲ್ಲಿ ಅದರ ನೌಕರ ವೃಂದ ಹಾಗೂ ಆಡಳಿತ ಸಮಿತಿಯವರು ಯೋಗದಾನ ತುಂಬಾ ಇದೆ ಇನ್ನು ಮುಂದೆಯೂ ನಮ್ಮ ಶಿಕ್ಷಣ ಸಂಸ್ಥೆಯು ಅತ್ಯುತ್ತಮ ಶಿಕ್ಷಣ ನೀಡುವಲ್ಲಿ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದರು.

ಪ್ರಾರಂಭದಲ್ಲಿ ನಗ್ರಿಗುತ್ತು ವಿವೇಕ್ ಶೆಟ್ಟಿ ಅವರು ಅತಿಥಿ ಗಣ್ಯರನ್ನು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಂಟರ ಸಂಘ ಮುಂಬಯಿ ಇದರ ಉಪಾಧ್ಯಕ್ಷ ಉಳ್ತೂರು ಮೋಹನ್ ದಾಸ್ ಶೆಟ್ಟಿ, ಕೋಶಾಧಿಕಾರಿ ಸಿಎ ಹರೀಶ್ ಶೆಟ್ಟಿ, ಜತೆ ಕಾರ್ಯದರ್ಶಿ ಇಂದ್ರಾಳಿ ದಿವಕರ್ ಶೆಟ್ಟಿ, ಎಸ್ ಎಂ ಶೆಟ್ಟಿ ಶಿಕ್ಷಣ ಸಂಸ್ಥೆ ಪವಾಯಿ ಇದರ ಕಾರ್ಯಧ್ಯಕ್ಷ ಬಿ ಆರ್ ಶೆಟ್ಟಿ, ಉಪಕಾರ್ಯಧ್ಯಕ್ಷ ವಸಂತ್ ಎನ್ ಶೆಟ್ಟಿ ಪಲಿಮಾರ್, ಉನ್ನತ ಶಿಕ್ಷಣ ಸಂಸ್ಥೆಯ ಉಪಕಾರ್ಯಧ್ಯಕ್ಷ ಕುತ್ಯಾರು ಕಿಶೋರ್ ಕುಮಾರ್ ಶೆಟ್ಟಿ, ಉನ್ನತ ಶಿಕ್ಷಣ ಸಮಿತಿಯ ಮಾಜಿ ಕಾರ್ಯದರ್ಶಿ ಭಾಸ್ಕರ್ ಶೆಟ್ಟಿ ಕಾರ್ನಾಡ್, ಮಾಜಿ ಕೋಶಾಧಿಕಾರಿ ಸಿಎ ರಮೇಶ್ ಶೆಟ್ಟಿ, ಉನ್ನತ ಶಿಕ್ಷಣ ಸಂಸ್ಥೆ ಪ್ರಿನ್ಸಿಪಾಲರುಗಳಾದ ಡಾಕ್ಟರ್ ರಾಜೇಂದ್ರ ಪಾಟೀಲ್, ಚೆಫ್ ಯೋಗೇಶ್, ಡಾಕ್ಟರ್ ಕೃಷ್ಣಶೆಟ್ಟಿ, ಶ್ರೀಮತಿ ಶೈಲಾ ಶೆಟ್ಟಿ, ಮಾಜಿ ಪ್ರಿನ್ಸಿಪಾಲರಾದ ಸಂಯೋಗಿತ ಮೊರಾರ್ಜಿ, ಉನ್ನತ ಶಿಕ್ಷಣ ಸಂಸ್ಥೆಯ ಸಿಎಓ ಪ್ರಕಾಶ್ ಮೋರೆ, ಮೊದಲಾದವರು ಉಪಸ್ಥಿತರಿದ್ದರು.

Pages