ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ದಾಖಲೆಯ ಪ್ರದರ್ಶನಗಳು, 50ನೇ ದಿನದತ್ತ ದಾಪುಗಾಲು : ಅಶಕ್ತ ಕಲಾವಿದರಿಗೆ ನೆರವು ಸಹಾಯಹಸ್ತ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ದಾಖಲೆಯ ಪ್ರದರ್ಶನಗಳು, 50ನೇ ದಿನದತ್ತ ದಾಪುಗಾಲು : ಅಶಕ್ತ ಕಲಾವಿದರಿಗೆ ನೆರವು ಸಹಾಯಹಸ್ತ

Share This
ಮಂಗಳೂರು: ವೈಭವ್ ಫ್ಲಿಕ್ಸ್ ಅಡಿಯಲ್ಲಿ ಮ್ಯಾಂಗೋ ಪಿಕಲ್ ಬ್ಯಾನರ್ ನಲ್ಲಿ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ತುಳು ಸಿನಿಮಾಕ್ಕೆ ಮಂಗಳೂರು ಸಹಿತ ಜಿಲ್ಲೆಯ ಎಲ್ಲಾ ಕಡೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದೆ. ಈ ವರೆಗೆ ದಾಖಲೆ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನಿಮಾ ವೀಕ್ಷಿಸಿದ್ದಾರೆ.
50ನೇ ದಿನದತ್ತ ಮುನ್ನುಗುತ್ತಿರುವ ಸಿನಿಮಾ 14 ಚಿತ್ರಮಂದಿರಗಳಲ್ಲಿ ಜುಲೈ 8 ರಂದು 50 ದಿನಗಳನ್ನು ಪೂರೈಸುತ್ತಿದೆ. 7ನೇ ವಾರದವರೆಗೂ ಸಿನಿಮಾ ಎಲ್ಲಾ ಕಡೆ ಹೌಸ್ ಫುಲ್ ಪ್ರದರ್ಶನ ಕಂಡಿತು. ಮುಂದಿನ ಶುಕ್ರವಾರದಿಂದ ಸೌದಿ ಅರೇಬಿಯಾದಲ್ಲಿ ಬೇರೆ ಬೇರೆ ತಾಣಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ.‌

ಮುಂಬೈಯಲ್ಲಿ ಹೌಸ್ ಫುಲ್ ಪ್ರದರ್ಶನ: ಮುಂಬೈಯಲ್ಲಿರುವ ತುಳುವರು ಸಿನಿಮಾ ನೋಡಿ ಹಾರೈಸಿದ್ದಾರೆ. ಎಲ್ಲಾ ಪ್ರದರ್ಶನಗಳು ಹೌಸ್ ಫುಲ್ ಕಂಡಿದೆ. ಇನ್ನೂ 15 ರಿಂದ 20 ಪ್ರದರ್ಶನಗಳಿಗೆ ಬೇಡಿಕೆ ಇದೆ. 

ಅಶಕ್ತ ಕಲಾವಿದರಿಗೆ ನೆರವು: ಜೂನ್ 8 ರಂದು ಸಿನಿಮಾ 50 ದಿನ ಪೂರೈಸುವ ಸಂದರ್ಭದಲ್ಲಿ ಆ ದಿನ ಪ್ರದರ್ಶನದಿಂದ ಬರುವ ಎಲ್ಲಾ ಆದಾಯವನ್ನು ಅಸಕ್ತ ಕಲಾವಿದರಿಗೆ ನೀಡಲಾಗುವುದು. ಹೀಗಾಗಿ ಸಿನಿಮಾಸಕ್ತರು 50ನೇ ದಿನದಲ್ಲಿ ಪಾಲ್ಗೊಂಡು ಅಸಕ್ತರಿಗೆ ನೆರವಾಗಬೇಕೆಂದು ನಟ ವಿನೀತ್ ಕುಮಾರ್ ತಿಳಿಸಿದ್ದಾರೆ.

ಹಾಕಿದ ಬಂಡವಾಳ ವಾಪಸ್: ಸಿನಿಮಾಕ್ಕೆ ನಿರ್ಮಾಪಕರು ಹಾಕಿದ ಬಂಡವಾಳ ವಾಪಾಸು ಬಂದಿದೆ. ಸಿನಿಮಾದ ಯಶಸ್ಸಿಗೆ ಎಲ್ಲರೂ ಒಗ್ಗಟ್ಟಿನಿಂದ ದುಡಿದಿದ್ದಾರೆ. ಇದೊಂದು ಟೀಂ ವಕ್೯ನಿಂದಾಗಿ ಸಾಧ್ಯವಾಯಿತು ಎನ್ನುತ್ತಾರೆ. ವಿನೀತ್ ಕುಮಾರ್.

ಶೀಘ್ರದಲ್ಲೆ ಹೊಸ ಸಿನಿಮಾ ಘೋಷಣೆ: ವೈಭವ್ ಫ್ಲಿಕ್ಸ್ ಅಡಿಯಲ್ಲಿ ಮ್ಯಾಂಗೋ ಪಿಕಲ್ ಬ್ಯಾನರ್ ನಲ್ಲಿ ಇನ್ನೊಂದು ಹೊಸ ಸಿನಿಮಾ ತಯಾರಾಗಲಿದೆ. ಆ ಸಿನಿಮಾದ ಸುದ್ದಿಯನ್ನು ಶೀಘ್ರದಲ್ಲೆ ತಿಳಿಸಲಾಗುವುದು.

ಬಹುತೇಕ ಚಿತ್ರಮಂದಿರಗಳಲ್ಲಿ ಸಿನಿಮಾ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಎಲ್ಲಾ ಮಾಲ್, ಸೆಂಟರ್ ಗಳಲ್ಲೂ ತುಂಬಿದ ಪ್ರದರ್ಶನ ಕಾಣುತ್ತಿದೆ. ಮಂಗಳೂರಿನಲ್ಲಿ ಸಿಂಗಲ್ ಥಿಯೇಟರ್ ಸಮಸ್ಯೆ ಇದ್ದರೂ ರೂಪವಾಣಿ ಚಿತ್ರಮಂದಿರದಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಉಡುಪಿಯಲ್ಲಿ ಕಲ್ಪನಾ, ಮೂಡಬಿದ್ರೆಯಲ್ಲಿ ಅಮರಶ್ರೀ , ಬೆಳ್ತಂಗಡಿಯಲ್ಲಿ ಭಾರತ್, ಕಾರ್ಕಳದಲ್ಲಿ ರಾಧಿಕಾ ಸಿನಿಮಾ ಮಂದಿರದಲ್ಲೂ ಹೌಸ್ ಫುಲ್ ಪ್ರದರ್ಶನ ಕಂಡಿದೆ.

ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಸಿನಿಮಾ ಮಂಗಳೂರಿನಲ್ಲಿ ರೂಪವಾಣಿ, ಭಾರತ್ ಮಾಲ್ ನ ಬಿಗ್ ಸಿನಿಮಾಸ್, ಪಿವಿಆರ್ ಸಿನಿಪೊಲಿಸ್, ಉಡುಪಿಯಲ್ಲಿ ಕಲ್ಪನಾ, ಭಾರತ್ ಸಿನಿಮಾಸ್, ಮಣಿಪಾಲದಲ್ಲಿ ಐನಾಕ್ಸ್, ಬೆಳ್ತಂಗಡಿಯಲ್ಲಿ ಭಾರತ್,
 ಪುತ್ತೂರಿನಲ್ಲಿ ಅರುಣಾ, ಸುರತ್ಕಲ್ ನಲ್ಲಿ ನಟರಾಜ್, ಸಿನಿಗ್ಯಾಲಕ್ಸಿ, ಮೂಡಬಿದ್ರೆಯಲ್ಲಿ ಅಮರಶ್ರೀ, ಕಾರ್ಕಳದಲ್ಲಿ, ಪ್ಲಾನೆಟ್, ರಾಧಿಕಾ, ಮುಳ್ಳೇರಿಯಾದಲ್ಲಿ ಕಾವೇರಿ ಮೊದಲಾದ ಚಿತ್ರಮಂದಿರಗಳಲ್ಲಿ ಸಿನಿಮಾ ಯಶಸ್ವೀ ಪ್ರದರ್ಶನ ಕಾಣುತ್ತಿದೆ.

ಸಿನಿಮಾಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಸಿನಿಮಾವನ್ನು ಎಲ್ಲರೂ ಕುಟುಂಬ ಸಮೇತ ವೀಕ್ಷಿಸುತ್ತಿದ್ದಾರೆ ಎಂದು ಸಿನಿಮಾದ ನಿರ್ಮಾಕರಾದ ಆನಂದ ಎನ್ ಕುಂಪಲ ತಿಳಿಸಿದ್ದಾರೆ. ಈ ಸಿನಿಮಾವನ್ನು ನೋಡಿದವರೇ ನೋಡುತ್ತಿರುವುದು ಈ ಚಿತ್ರದ ಯಶಸ್ಸಿಗೆ ಒಂದು ಕಾರಣವಾಗಿದೆ. ಆರಂಭದಿಂದ ಅಂತ್ಯದವರೆಗೂ ಈ ಸಿನಿಮಾ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ವಿದೇಶದಲ್ಲಿರುವ ತುಳುವರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ ಸೌಂಡ್ಸ್ ಆಂಡ್ ಲೈಟ್ಸ್ ತುಳುವಿನಲ್ಲಿ ತಯಾರಾದ ದೊಡ್ಡ ಬಜೆಟ್ ನ ಸಿನಿಮಾ ಆಗಿದೆ. ಈ ಸಿನಿಮಾಕ್ಕಾಗಿ ಒಂದೂವರೆ ಕೋಟಿ ರೂಪಾಯಿಗೂ ಮಿಕ್ಕಿ ಖರ್ಚಾಗಿದೆ. ಈಗಾಗಲೇ ಸಿನಿಮಾಕ್ಕೆ ಹಾಕಿದ ಬಂಡವಾಳ ವಾಪಾಸು ಬಂದಿದೆ.

'ಒಂದು ಮೊಟ್ಟೆಯ ಕಥೆ' ಚಿತ್ರ ತಂಡದ ನೇತೃತ್ವದಲ್ಲಿ ವೈಭವ್ ಪ್ರಿಕ್ಸ್ ಅಡಿಯಲ್ಲಿ, ಮ್ಯಾಂಗೋ ಪಿಕಲ್ ಬ್ಯಾನರ್ ಸಹಭಾಗಿತ್ವದಲ್ಲಿ 'ರಾಜ್ ಸೌಂಡ್ಸ್ ಆಂಡ್ ಲೈಟ್ಸ್'ತುಳು ಚಿತ್ರ ನಿರ್ಮಾಣಗೊಂಡಿದೆ.

ಈ ಚಿತ್ರವು ಸಂಪೂರ್ಣ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಆಗಿದ್ದು, ಚಿತ್ರದ ಟೀಸರ್ ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದು ತುಳು ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿ ಸಂಚಲನ ಮೂಡಿಸಿತ್ತು. ಅದ್ದೂರಿಯಾಗಿ ಮೂಡಿಬಂದ ಚಿತ್ರದ ಗೀತೆಯು ಕರಾವಳಿಯಲ್ಲಿ ಮಾತ್ರವಲ್ಲದೆ ವಿದೇಶದಲ್ಲೂ ತುಳು ಅಭಿಮಾನಿಗಳ ಪ್ರಶಂಸೆಗೆ ಪಾತ್ರವಾಗಿದೆ.

ಚಿತ್ರದಲ್ಲಿ ಮದುವೆ ಮತ್ತು ಮದರಂಗಿ ಕಾರ್ಯಕ್ರಮದ ಕಥಾ ಹಂದರವನ್ನು ಹೊಂದಿದ್ದು, ನೈಜತೆಗೆ ಒತ್ತುಕೊಟ್ಟು ಸುಂದರವಾಗಿ ಸೆರೆಹಿಡಿಯಲಾಗಿದೆ. ಕೌಟುಂಬಿಕ ಮನೋರಂಜನೆಯ ಜತೆಗೆ ಹಾಸ್ಯಕ್ಕೂ ಪ್ರಾಮುಖ್ಯತೆ ನೀಡಲಾಗಿದೆ. ಈ ಚಿತ್ರವನ್ನು ಯುವನಟ ರಾಹುಲ್ ಅಮೀನ್ ನಿರ್ದೇಶಿಸಿದ್ದು, ಆನಂದ್ ಎನ್ ಕುಂಪಲ ನಿರ್ಮಾಪಕರಾಗಿದ್ದಾರೆ.

ಈ ಸಿನೆಮಾದ ಕಥೆ ವಿನೀತ್ ಕುಮಾರ್ ಅವರದ್ದು. ಚಿತ್ರಕಥೆಯನ್ನು ರಾಹುಲ್ ಮತ್ತು ವಿನೀತ್ ರಚಿಸಿದ್ದಾರೆ. ಸಂಭಾಷನೆಯನ್ನು ಗಿರಿಗಿಟ್ ಚಿತ್ರ ಖ್ಯಾತಿಯ ಪ್ರಸನ್ನ ಶೆಟ್ಪಿ ಬೈಲೂರು ಬರೆದಿದ್ದಾರೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಪಡ್ಡಾಯಿ ಚಿತ್ರ ಖ್ಯಾತಿಯ ಕ್ಯಾಮರಾಮೆನ್ ವಿಷ್ಣುಪ್ರಸಾದ್ ಅವರು ಚಿತ್ರೀಕರಿಸಿದ್ದಾರೆ. ಸಂಗೀತ ನಿರ್ದೇಶಕರಾಗಿ ಸೃಜನ್ ಕುಮಾರ್ ತೋನ್ಸೆ, ನವೀನ್ ಶೆಟ್ಟಿ ನೃತ್ಯ ಸಂಯೋಜನೆ ಮಾಡಿದ್ದಾರೆ. ಚಿತ್ರಕಥೆಯನ್ನು ವಿನೀತ್ ಕುಮಾರ್ ಹಾಗೂ ರಾಹುಲ್ ಅಮೀನ್ ಬರೆದಿದ್ದಾರೆ.

ನಾಯಕರಾಗಿ ವಿನೀತ್ ಕುಮಾರ್, ನಾಯಕಿಯಾಗಿ (ಹೊಸ ಪರಿಚಯ) ಯಶ ಶಿವಕುಮಾರ್ ಹಾಗೂ ನಾಯಕಿ ಕರಿಷ್ಮಾ ಅಮೀನ್ ಅಭಿನಯಿಸಿದ್ದಾರೆ. ತಾರಾಗಣದಲ್ಲಿ ಹಾಸ್ಯ ದಿಗ್ಗಜರಾದ ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು ಹಾಗೂ ಸತೀಶ್ ಬಂದಲೆ, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ, ಮರ್ವಿನ್ ಉಮೇಶ್ ಮಿಜಾರ್, ರವಿ ರಾಮಕುಂಜ, ಚೈತ್ರ ಶೆಟ್ಟಿ (ಚಿಂಪು) ಹಾಗೂ ಇನ್ನಿತರ ಕಲಾವಿದರು ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಬಿ ಅಶೋಕ್ ಕುಮಾರ್, ಸುಹಾನ್ ಪ್ರಸಾದ್ ಪವನ್ ಕುಮಾರ್, ನಿತಿನ್ ರಾಜ್ ಶೆಟ್ಟಿ, ಅರ್ಪಿತ್ ಅಡ್ಯಾರ್, ಅಜಯ್ ಬಾಳಿಗ, ಸೀತಾರಾಮ ಶೆಟ್ಟಿ ಇವರು ಸಹ ನಿರ್ಮಾಪಕರಾಗಿದ್ದಾರೆ.

Pages