ಬಂಟರ-ನಾಡವರ ಅಭಿವೃದ್ಧಿ ನಿಗಮ, ಬಂಟರನ್ನು ಪ್ರವರ್ಗ 2Aಗೆ ಸೇರ್ಪಡೆಗೆ ಒತ್ತಾಯ - ಮಾಲಾಡಿ ಅಜಿತ್ ಕುಮಾರ್ ರೈ - BUNTS NEWS WORLD
ಬಂಟ ಸಮಾಜದ ಪ್ರಪ್ರಥಮ ಅಂತರ್ಜಾಲ ಸುದ್ದಿತಾಣ ಬಂಟ್ಸ್ ನ್ಯೂಸ್ ವೆಬ್ ಪೋರ್ಟಲ್'ಗೆ ಸ್ವಾಗತ-------ಬಂಟ್ಸ್ ನ್ಯೂಸ್ ವೆಬ್ ತಾಣದಲ್ಲಿ ಶೇ. 50ರಷ್ಟು ಬಂಟ ಸಮಾಜದ ಹಾಗೂ ಉಳಿದ ಶೇ.50ರಷ್ಟು ಇತರ ಸಾಮಾಜಿಕ, ಧಾರ್ಮಿಕ, ರಾಜಕೀಯ, ಆರೋಗ್ಯ, ಸಿನಿಮಾ ಹಾಗೂ ಕ್ರೀಡೆ ಇನ್ನಿತರ ಸುದ್ದಿಗಳನ್ನು ಕಾಣಬಹುದು------ಬಂಟ್ಸ್ ನ್ಯೂಸ್ ಸುದ್ದಿ ತಾಣಕ್ಕೆ ನಿಮ್ಮ ಬರಹ, ಲೇಖನಗಳನ್ನು ಕಳುಹಿಸಲು ನಮ್ಮ ಇಮೇಲ್ ವಿಳಾಸ E-mail : newsbunts@gmail.com ------ಬಂಟ್ಸ್ ನ್ಯೂಸ್.ಕಾಂ'ನ್ನು ಸಂಪರ್ಕಿಸಲು ಕರೆ ಮಾಡಿ: +919743112517

ಬಂಟರ-ನಾಡವರ ಅಭಿವೃದ್ಧಿ ನಿಗಮ, ಬಂಟರನ್ನು ಪ್ರವರ್ಗ 2Aಗೆ ಸೇರ್ಪಡೆಗೆ ಒತ್ತಾಯ - ಮಾಲಾಡಿ ಅಜಿತ್ ಕುಮಾರ್ ರೈ

Share This
ಮಂಗಳೂರು: ಬಂಟರು ಯಾನೆ ನಾಡವರನ್ನು ಪ್ರವರ್ಗ 3(ಬಿ)ಯಿಂದ ಕೈಬಿಟ್ಟು 2(ಎ)ಗೆ ಸೇರಿಸಬೇಕು, ಬಂಟರ ನಾಡವರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು, ಮಂಗಳೂರು ವಿಶ್ವವಿದ್ಯಾಲಯದಲ್ಲಿ ಬಂಟರ ಯಾನೆ ನಾಡವರ ಸಮಾಜ ಅಧ್ಯಯನ ಕೇಂದ್ರವನ್ನು ಸ್ಥಾಪಿಸಬೇಕು. ಈ ಕುರಿತು ರಾಜ್ಯ ಸರಕಾರ ಕೂಡಲೇ ಕಾರ್ಯಪ್ರವೃತ್ತರಾಗಿ ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಬಂಟರ ಸಮಾಜಕ್ಕೆ ನ್ಯಾಯ ಒದಗಿಸಬೇಕು ಎಂದು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಬಂಟ ಸಮಾಜದಲ್ಲಿ 40% ಜನರು ಬಡತನ ರೇಖೆಗಿಂತ ಕೆಳಗಿದ್ದು ಕಷ್ಟ-ಕಾರ್ಪಣ್ಯಗಳೊಂದಿಗೆ ನಿತ್ಯ ದುಖಃದ ಜೀವನ ನಡೆಸುತ್ತಿದ್ದಾರೆ. ಈ ಬಗ್ಗೆ ನಾವು ಹಲವು ಬಾರಿ ಮನವಿ ಮಾಡಿದ್ದರೂ ಈ ಹಿಂದಿನಿಂದ ಆಡಳಿತದಲ್ಲಿದ್ದ ಎಲ್ಲಾ ಸರಕಾರಗಳು ಯಾವುದೇ ಗಮನ ಕೊಡಲಿಲ್ಲ. ನಮ್ಮ ಬಗ್ಗೆ ತಾರತಮ್ಯ ಧೋರಣೆಯನ್ನು ಅನುಸರಿಸಿದ ಕಾರಣ ವಿದ್ಯೆ, ಉದ್ಯೋಗ, ರಾಜಕೀಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಬಂಟ ಸಮಾಜ ಬಾಂದವರು ಅವಕಾಶವಂಚಿತರಾಗುವಂತಾಗಿದೆ. ದೇಶದ, ರಾಜ್ಯದ ಹಾಗೂ ಜಿಲ್ಲೆಗಳ ಅಭಿವೃದ್ಧಿಯಲ್ಲಿ ಬಂಟರ ಪಾತ್ರವು ಗಮನಾರ್ಹವಾಗಿದೆ. ಚಾರಿತ್ರಿಕ ಕಾಲದಿಂದಲೂ ಊರಿನ ದೇವಸ್ಥಾನ, ದೈವಸ್ಥಾನ, ಆರಾಧನಾ ಸ್ಥಳಗಳು, ಶಾಲೆಗಳ ನಿರ್ಮಾಣ, ಪುನಃ ನಿರ್ಮಾಣದಲ್ಲಿ ಬಂಟ ಬಾಂಧವರು ಮುಂಚೂಣಿಯಲ್ಲಿರುವ ವಿಷಯ ಎಲ್ಲರಿಗೂ ತಿಳಿದಿರುತ್ತದೆ. ಹಣ ಇಲ್ಲದವರು ಈ ಎಲ್ಲಾ ಕಾರ್ಯಗಳಲ್ಲಿ ದೈಹಿಕವಾಗಿ ದುಡಿದು ಸೇವೆ ಸಲ್ಲಿಸುತ್ತಿದ್ದಾರೆ. ಎಲ್ಲರೊಟ್ಟಿಗೆ ಎಲ್ಲರಿಗಾಗಿ ಜೀವಿಸುವ ಒಂದು ಜನಾಂಗವನ್ನು ಕಡೆಗಣಿಸಿದರೆ ಅದರಿಂದ ನಮ್ಮ ಇಡೀ ಸಾಮಾಜಿಕ ವ್ಯವಸ್ಥೆಯಲ್ಲಿ ಮತ್ತು ಇತರ ವಿಷಯದಲ್ಲಿ ದುಷ್ಪರಿಣಾಮಗಳು ಉಂಟಾಗುತ್ತವೆ. ಇದಕ್ಕೆ ಅವಕಾಶ ನೀಡದಂತೆ ಎಲ್ಲಾ ರಾಜಕೀಯ ಪಕ್ಷಗಳೊಡನೆ ಕೇಳಿಕೊಂಡಿದ್ದೇವೆ. ಆದರೆ ಯಾವುದೇ ರೀತಿಯಲ್ಲಿ ನ್ಯಾಯ ಸಿಕ್ಕಿಲ್ಲ ಎಂದರು.

1908ನೇ ಇಸವಿಯಲ್ಲಿ ಬಂಟರ ಯಾನೆ ನಾಡವರ ಮಾತೃಸಂಘವನ್ನು ಸ್ಥಾಪಿಸಿ ಹೆಚ್ಚಿನ ತಾಲೂಕುಗಳಲ್ಲಿ ಭೂಮಿಯನ್ನು ಖರೀದಿಸಿ ವಿಧ್ಯಾರ್ಥಿನಿಲಯಗಳನ್ನು ನಿರ್ಮಾಣ ಮಾಡಿ ವಿಧ್ಯಾರ್ಥಿನಿಧಿಯನ್ನು ಸ್ಥಾಪಿಸುವುದರೊಂದಿಗೆ ಈ ವಿದ್ಯಾರ್ಥಿನಿಲಯಗಳಲ್ಲಿ ಎಲ್ಲಾ ಜಾತಿ ಮತದ ಯುವಜನರಿಗೆ ಇರಲು ಅವಕಾಶ ಮಾಡಿಕೊಟ್ಟು ನಮ್ಮ ಜಿಲ್ಲೆಯ ಯುವಜನರು
ವಿದ್ಯಾರ್ಜನೆ ಮಾಡಲು ಬಂಟ ಸಮಾಜದ ಹಿರಿಯರು ಕಾರಣೀಕರ್ತರಾದರು. ಹೀಗಿರುವಾಗ ಬಂಟ ಸಮಾಜಕ್ಕೆ ನಿಗಮ ಸಿಗದೇ ಇರುವುದು ಅನ್ಯಾಯವಾಗಿದೆ. ಬಂಟರು ಅನುವಂಶಿಕ ಮೊಸರು, ಆಡಳಿತದಾರರಾಗಿದ್ದ ಆದರೆ ಪ್ರಸ್ತುತ ಸರಕಾರದ ಅಧೀನದಲ್ಲಿರುವ ದೇವಸ್ಥಾನ, ದೈವಸ್ಥಾನ ಮತ್ತು ಇತರ ಆರಾಧನಾ ಕ್ಷೇತ್ರಗಳ ಆಡಳಿತವನ್ನು ಸಂಬಂದಪಟ್ಟವರಿಗೆ ವಾಪಸ್ ನೀಡಬೇಕು, ಎ. ಬಿ. ಶೆಟ್ಟಿ ವೃತ್ತವನ್ನು ಮೊದಲಿದ್ದ ಸ್ಥಳದಲ್ಲಿ, ದೊಡ್ಡದಾಗಿ ಹಾಗೂ ಆಕರ್ಷಕವಾಗಿ ನಿರ್ಮಿಸಬೇಕು, ಬಿ.ಪಿ.ಎಲ್. ಕಾರ್ಡ್‌ದಾರರಿಗೆ ಮತ್ತು ಅವರ ಮಕ್ಕಳಿಗೆ ಉಚಿತ ಆರೋಗ್ಯ ಇನ್ನೂರೆನ್ಸ್ ನೀಡುವುದು. ಬಿ.ಪಿ.ಎಲ್. ಕಾರ್ಡ್‌ದಾರ ಮಕ್ಕಳಿಗೆ ಉಚಿತ ವಿಧ್ಯಾಭ್ಯಾಸ, 30 ವರ್ಷ ದಾಟಿದ ಅವಿವಾಹಿತ ಹೆಣ್ಣುಮಕ್ಕಳಿಗೆ ಸಹಾಯಧನ ನೀಡುವುದು ಇನ್ನಿತರ ಮನವಿಗಳನ್ನು ಸರಕಾರದ ಮುಂದಿರಿಸಿದ್ದೇವೆ ಎಂದು ಅಜಿತ್ ಕುಮಾರ್ ರೈ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜೊತೆ ಕಾರ್ಯದರ್ಶಿ ಸಂಪಿಗೇಡಿ ಸಂಜೀವ ಶೆಟ್ಟಿ , ಕೋಶಾಧಿಕಾರಿ ಸಿಎ ರಾಮ ಮೋಹನ ರೈ ಹಾಗೂ ಬಂಟರ ಯಾನೆ ನಾಡವರ ಮಾತೃಸಂಘದ ಸದಸ್ಯರು ಉಪಸ್ಥಿತರಿದ್ದರು.

Pages